Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ವಿಶೇಷ-ವರದಿಗಳು
  4. ಈ ಬಾರಿ ಇಲ್ಲ ಬೆಂಗಳೂರು ಫ್ರೇಸರ್ ಟೌನ್ ನ...

ಈ ಬಾರಿ ಇಲ್ಲ ಬೆಂಗಳೂರು ಫ್ರೇಸರ್ ಟೌನ್ ನ ಜನಪ್ರಿಯ ಇಫ್ತಾರ್ ಮಳಿಗೆಗಳು !

ಆಹಾರ ಪ್ರಿಯರಿಗೆ ಬ್ಯಾಡ್ ನ್ಯೂಸ್

ವಾರ್ತಾಭಾರತಿವಾರ್ತಾಭಾರತಿ10 Jun 2016 6:36 PM IST
share
ಈ ಬಾರಿ ಇಲ್ಲ ಬೆಂಗಳೂರು ಫ್ರೇಸರ್ ಟೌನ್ ನ ಜನಪ್ರಿಯ ಇಫ್ತಾರ್ ಮಳಿಗೆಗಳು !

ಬೆಂಗಳೂರು, ಜೂ 10 : ರಮಝಾನ್ ತಿಂಗಳಿಡೀ ಆಹಾರಪ್ರಿಯರ ಹಸಿವಿನ ಜೊತೆ ಮನತಣಿಸುವ  ಬೆಂಗಳೂರಿನ ಫ್ರೇಸರ್ ಟೌನ್ ನ ಮಸೀದಿ ರಸ್ತೆಯ ತಾತ್ಕಾಲಿಕ ಇಫ್ತಾರ್ ಮಳಿಗೆಗಳು ಇತಿಹಾಸದ ಪುಟ ಸೇರಿವೆ. ಹತ್ತು ಹಲವು ಬಗೆಯ ಖಾದ್ಯಗಳ ಮೂಲಕ ರಮಝಾನ್ ಆಚರಿಸುವವರು ಮಾತ್ರವಲ್ಲದೆ ಎಲ್ಲ ಧರ್ಮಗಳ ಜನರ ಮನಗೆದ್ದಿದ್ದ ಈ ಮಳಿಗೆಗಳಿಗೆ ಈ ಬಾರಿ ಅವಕಾಶ ನಿರಾಕರಿಸಲಾಗಿದೆ. ಮುಖ್ಯ ರಸ್ತೆಯಲ್ಲೇ ಇರುವ ಈ ಮಳಿಗೆಗಳಿಂದ ಸಂಚಾರ ಅಸ್ತವ್ಯಸ್ತವಾಗುವುದು ಇದಕ್ಕೆ ಪ್ರಮುಖ ಕಾರಣವಾದರೆ ಮಸೀದಿಗೆ ಆರಾಧನೆಗೆ ಬರುವವರಿಗೆ ತೊಂದರೆ ಆಗುತ್ತಿರುವುದು ಇನ್ನೊಂದು ಕಾರಣ ಎಂದು ತಿಳಿದು ಬಂದಿದೆ. 

" ಈ ಬಾರಿ ಮಳಿಗೆಗಳಿಗೆ ಅವಕಾಶ ನೀಡದೆ ಇರಲು ನಿರ್ಧರಿಸಿದ್ದೇವೆ. ಈ ಮಳಿಗೆಗಳಿಗೆ ಸಾವಿರಾರು ಜನ ಬಂದು ಅಲ್ಲಲ್ಲಿ ತಮ್ಮ ವಾಹನ ನಿಲ್ಲಿಸುತ್ತಾರೆ. ಇದರಿಂದ ಸ್ಥಳೀಯರಿಗೆ ಹಾಗು ಮಸೀದಿಗೆ ಬರುವವರಿಗೆ ತೀವ್ರ ತೊಂದರೆ ಆಗುತ್ತಿತ್ತು. ಆದ್ದರಿಂದ ಇನ್ನು ಅವಕಾಶ ನೀಡದೆ ಇರಲು ಸಭೆ ನಡೆಸಿ ತೀರ್ಮಾನಿಸಿದ್ದೇವೆ " ಎಂದು ಇಲ್ಲಿನ ಮಸೀದಿಯ ಆಡಳಿತ ಸಮಿತಿಯ ಸದಸ್ಯ ಅಸ್ಲಂ ಫ಼ಝಲ್ ಹೇಳಿದ್ದಾರೆ.


ವೈವಿಧ್ಯಮಯ ಕಬಾಬ್ ಗಳು, ಬಿರಿಯಾನಿಗಳು, ಸಿಹಿ ತಿಂಡಿಗಳು, ಟೀ , ಕರಿದ ತಿಂಡಿಗಳನ್ನು ಮಾರುವ ಮಸೀದಿ ರಸ್ತೆಯ ತಾತ್ಕಾಲಿಕ ಇಫ್ತಾರ್ ಮಳಿಗೆಗಳು ಬೆಂಗಳೂರು ಮಾತ್ರವಲ್ಲ ಮಂಗಳೂರು, ಚೆನ್ನೈ ಗಳಿಂದಲೂ ಜನರನ್ನು ಆಕರ್ಷಿಸುತ್ತಿದ್ದವು. ಕೇವಲ ಈ ಮಳಿಗೆಗಳ ಆಹಾರದ ರುಚಿ ನೋಡಲೆಂದೇ ಜನರು ಮಂಗಳೂರು, ಚೆನ್ನೈ ಗಳಿಂದ ರಮಝಾನ್ ನಲ್ಲಿ ಒಂದು ದಿನದ ಬೆಂಗಳೂರು ಭೇಟಿಗೆ ಬರುತ್ತಿದ್ದರು. ಬೆಂಗಳೂರಿನಲ್ಲಿ ಉದ್ಯೋಗದಲ್ಲಿರುವ ಟೆಕ್ಕಿಗಳು , ವಿದ್ಯಾರ್ಥಿಗಳ ವಲಯದಲ್ಲೂ ಇದು ಭಾರೀ ಖ್ಯಾತಿ ಪಡೆದಿತ್ತು.


ಆದರೆ ಈಗ ಅದಕ್ಕೆ ಬ್ರೇಕ್ ಬಿದ್ದಿದೆ. ಇನ್ನು ಯಾರೂ ಅನಧಿಕೃತವಾಗಿ ಮಳಿಗೆ ತೆರೆಯದಂತೆ ಮಸೀದಿಯವರು ಪೊಲೀಸರು ಹಾಗು ಬಿಬಿಎಂಪಿ ಯವರ ಜೊತೆ ಸಂಪರ್ಕದಲ್ಲಿದ್ದಾರೆ.  ಫ್ರೇಸರ್ ಟೌನ್ ನಲ್ಲಿರುವ ಹಲವಾರು ಹೋಟೆಲ್ ಗಳು ಮಾತ್ರ ರಮಝಾನ್ ನ ಗ್ರಾಹಕರಿಗಾಗಿ ತಡ ರಾತ್ರಿವರೆಗೂ ತೆರೆದಿರುತ್ತವೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X