Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಜಾನ್ಸನ್ ಆ್ಯಂಡ್ ಜಾನ್ಸನ್‌ನ 2...

ಜಾನ್ಸನ್ ಆ್ಯಂಡ್ ಜಾನ್ಸನ್‌ನ 2 ಉತ್ಪನ್ನಗಳ ಪರೀಕ್ಷೆಗೆ ಎನ್‌ಸಿಪಿಸಿಆರ್ ಆದೇಶ

ವಾರ್ತಾಭಾರತಿವಾರ್ತಾಭಾರತಿ10 Jun 2016 6:50 PM IST
share
ಜಾನ್ಸನ್ ಆ್ಯಂಡ್ ಜಾನ್ಸನ್‌ನ 2 ಉತ್ಪನ್ನಗಳ ಪರೀಕ್ಷೆಗೆ ಎನ್‌ಸಿಪಿಸಿಆರ್ ಆದೇಶ

ಹೊಸದಿಲ್ಲಿ, ಜೂ.10: ಅಮೆರಿಕದ ಜಾನ್ಸನ್ ಆ್ಯಂಡ್ ಜಾನ್ಸನ್‌ನ 2 ಜನಪ್ರಿಯ ಮಕ್ಕಳ ಆರೈಕೆಯ ಉತ್ಪಾದನೆಗಳ ಪ್ರಯೋಗಾಲಯ ಪರೀಕ್ಷೆಗೆ ಸರಕಾರದ ಮಕ್ಕಳ ಹಕ್ಕು ಸಂಸ್ಥೆಯೊಂದು ಆದೇಶ ನೀಡಿದೆ. ಈ ಕಂಪೆನಿಯು ತನ್ನ ಟಾಲ್ಕ್ ಆಧರಿತ ಉತ್ಪನ್ನಗಳ ಆರೋಗ್ಯ ಅಪಾಯಗಳ ಕುರಿತು ಎಚ್ಚರಿಕೆ ವಹಿಸಿಲ್ಲವೆಂಬ ಕುರಿತಾದ ಅಮೆರಿಕ ನ್ಯಾಯಾಲಯಗಳ ಹಲವು ಆದೇಶಗಳನ್ನು ಅನುಲಕ್ಷಿಸಿ, ಅದು ಸ್ವಯಂ ಪ್ರೇರಣೆಯಿಂದ ಈ ಆದೇಶ ನೀಡಿದೆ.

ಜಾನ್ಸನ್ ಆ್ಯಂಡ್ ಜಾನ್ಸನ್ ಬೇಬಿ ಪೌಡರ್ ಹಾಗೂ ಶಾಂಪೂಗಳ ಮಾದರಿಗಳನ್ನು ಪರೀಕ್ಷೆಗಾಗಿ ಸಂಗ್ರಹಿಸುವಂತೆ ಗುಜರಾತ್, ಜಾರ್ಖಂಡ್, ಅಸ್ಸಾಂ, ಆಂಧ್ರಪ್ರದೇಶ ಹಾಗೂ ಮಧ್ಯಪ್ರದೇಶ ರಾಜ್ಯಗಳಿಗೆ ಮಕ್ಕಳ ಹಕ್ಕು ರಕ್ಷಣೆಯ ರಾಷ್ಟ್ರೀಯ ಆಯೋಗ (ಎನ್‌ಸಿಪಿಸಿಆರ್) ಸೂಚಿಸಿದೆ.

ಜಾನ್ಸನ್ ಆ್ಯಂಡ್ ಜಾನ್ಸನ್ ಉತ್ಪಾದನೆಗಳು ಅಸ್ಬೆಸ್ಟಾಸ್ ಹಾಗೂ ಫಾರ್ಮಾಲ್ಡಿಹೈಡ್‌ಗಳಂತಹ ಕ್ಯಾನ್ಸರ್‌ಕಾರಕ ವಸ್ತುಗಳನ್ನು ಒಳಗೊಂಡಿರಬಹುದಾದ ಕಾರಣ, ಆ ಕಂಪೆನಿಯ ಉತ್ಪನ್ನಗಳ ಉಪಯೋಗದ ಬಗ್ಗೆ ಕಳವಳವನ್ನು ಸೂಚಿಸಿದ ಪತ್ರಿಕಾ ವರದಿಗಳು ಬಂದಿವೆಯೆಂದು ಅದು ಕಳೆದ ತಿಂಗಳು ರಾಜ್ಯಗಳಿಗೆ ಬರೆದಿದ್ದ ಪತ್ರದಲ್ಲಿ ತಿಳಿಸಿದೆ.

ಈ ಬಗ್ಗೆ ಕಂಪೆನಿಯ ಅಧಿಕಾರಿಗಳನ್ನು ಸಂಪರ್ಕಿಸಿದಾಗ, ಸರಕಾರದಿಂದ ತಮಗೆ ಅಂತಹ ಯಾವುದೇ ವಿಚಾರಣೆ ಬಂದಿಲ್ಲ. ಜಾನ್ಸನ್ ಆ್ಯಂಡ್ ಜಾನ್ಸನ್ 2015ರಿಂದಲೇ ಯಾವುದೇ ನಿರ್ಜಲಕಾರಕದ ಬಳಕೆಯನ್ನು ನಿಲ್ಲಿಸಿದೆಯೆಂದು ಹೇಳಿದ್ದಾರೆ.

ಸ್ವಯಂ ಪ್ರೇರಿತ ನಿರ್ಧಾರ ಕೈಗೊಳ್ಳುವ ಅಧಿಕಾರ ತಮಗಿದೆ. ತಾವದನ್ನು ಮಾಡಿದ್ದೇವೆ. ಇದೊಂದು ಸತ್ಯಶೋಧನೆಯ ಕ್ರಮವಾಗಿದೆ. ಎಲ್ಲರೂ ತಮ್ಮ ಮಕ್ಕಳನ್ನು ಕಾಪಾಡಬೇಕಾಗಿದೆ. ಯಾವುದೇ ತಪ್ಪು ಕಂಡು ಬಂದಲ್ಲಿ ತಾವು ಖಂಡಿತವಾಗಿಯೂ ಕ್ರಮ ಕೈಗೊಳ್ಳುತ್ತೇವೆಂದು ಎನ್‌ಸಿಪಿಸಿಆರ್‌ನ ಅಧ್ಯಕ್ಷೆ ಸ್ತುತಿ ಕಕ್ಕರ್ ತಿಳಿಸಿದ್ದಾರೆ.

ಸರಕಾರದಿಂದ ಅಂಗೀಕೃತ ಪ್ರಯೋಗಾಲಯಗಳಲ್ಲೇ ಮಾದರಿಗಳ ಪರೀಕ್ಷೆ ನಡೆಸುವಂತೆ ಮಕ್ಕಳ ಹಕ್ಕು ಸಂಸ್ಥೆ ರಾಜ್ಯಗಳಿಗೆ ನಿರ್ದೇಶನ ನೀಡಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X