Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ನಿರ್ವಸಿತರಿಗೆ ರಾತ್ರಿ ತಂಗುಧಾಮ ಶೀಘ್ರ...

ನಿರ್ವಸಿತರಿಗೆ ರಾತ್ರಿ ತಂಗುಧಾಮ ಶೀಘ್ರ ಉದ್ಘಾಟನೆ: ಮೇಯರ್ ಹರಿನಾಥ್

ವಾರ್ತಾಭಾರತಿವಾರ್ತಾಭಾರತಿ10 Jun 2016 7:23 PM IST
share
ನಿರ್ವಸಿತರಿಗೆ ರಾತ್ರಿ ತಂಗುಧಾಮ ಶೀಘ್ರ ಉದ್ಘಾಟನೆ: ಮೇಯರ್ ಹರಿನಾಥ್

ಮಂಗಳೂರು, ಜೂ.10: ನಗರದ ಬಂದರಿನಲ್ಲಿ ಮಂಗಳೂರು ಮಹಾನಗರ ಪಾಲಿಕೆ ವತಿಯಿಂದ 1 ಕೋಟಿ ರೂ. ವೆಚ್ಚದಲ್ಲಿ ನಿರ್ವಸಿತರಿಗಾಗಿನ ರಾತ್ರಿ ತಂಗುಧಾಮ ಕಾಮಗಾರಿ ಮುಕ್ತಾಯ ಹಂತದಲ್ಲಿದ್ದು, ಶೀಘ್ರದಲ್ಲೇ ಉದ್ಘಾಟನೆ ನಡೆಯಲಿದೆ ಎಂದು ಮೇಯರ್ ಹರಿನಾಥ್ ತಿಳಿಸಿದ್ದಾರೆ.

ಮನಪಾದಲ್ಲಿನ ತಮ್ಮ ಕಚೇರಿಯಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮನಪಾದ ಬಡತನ ನಿರ್ಮೂಲನಾ ಕೋಶದಡಿ ನಿರ್ಮಾಣವಾಗಿರುವ ತಂಗುಧಾಮ ಉದ್ಘಾಟನೆಗೆ ಜಿಲ್ಲಾ ಉಸ್ತುವಾರಿ ಸಚಿವರ ಬಳಿ ದಿನಾಂಕವನ್ನು ಕೇಳಲಾಗಿದೆ ಎಂದರು.

ಮನಪಾ ಕಾಮಗಾರಿ ಮಂಜೂರಾತಿ ಮಿತಿ 5 ಕೋಟಿಗೆ ಹೆಚ್ಚಿಸಲು ಮನವಿ

ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಹಲವಾರು ಕಾಮಗಾರಿಗಳು ನಡೆಯುತ್ತಿದ್ದು, ಈ ಕಾಮಗಾರಿಗಳ ಮಂಜೂರಾತಿಗೆ ಬೆಂಗಳೂರಿಗೆ ಕಡತಗಳನ್ನು ಎರಡು ಮೂರು ಬಾರಿ ಕಳುಹಿಸಬೇಕಾಗಿದೆ. ಇದರಿಂದ ಕಾಮಗಾರಿ ಅನುಷ್ಠಾನದಲ್ಲಿ ವಿಳಂಬವಾಗುತ್ತಿದೆ. ಹಾಗಾಗಿ ಪಾಲಿಕೆಯ ಪರಿಷತ್ತಿಗಿರುವ ಮಂಜೂರಾತಿ ಮಿತಿಯನ್ನು 1 ಕೋಟಿಯಿಂದ 5 ಕೋಟಿ ರೂ.ಗಳಿಗೆ ಹೆಚ್ಚಿಸಲು ಮನವಿ ಮಾಡಲಾಗಿದೆ. ಇದೇ ವೇಳೆ ಪ್ರೀಮಿಯಂ ಎಫ್‌ಎಆರ್ ಮೊತ್ತವು ಉಪಯೋಗಿಸದೇ ಬಾಕಿ ಉಳಿದಿದ್ದಲ್ಲಿ ಅದನ್ನು ಅಗತ್ಯವಿರುವ ರಸ್ತೆಗಳಿಗೆ ಹಾಗೂ ಬಾಕಿ ಉಳಿದಿರುವ ಕಾಮಗಾರಿಗಳಿಗೆ ಉಪಯೋಗಿಸುವಂತೆ ಪ್ರೀಮಿಯಂ ಎಫ್‌ಎಆರ್‌ನ ನೀತಿಯಲ್ಲಿ ಸರಳೀಕರಣಗೊಳಿಸಲು ಮನವಿ ಮಾಡಲಾಗಿದೆ ಎಂದು ಅವರು ಹೇಳಿದರು.

ಕದ್ರಿ, ಕಂಕನಾಡಿ ಮಾರುಕಟ್ಟೆ ಈಗಾಗಲೇ ಆಡಳಿತಾತ್ಮಕ ಹಾಗೂ ತಾಂತ್ರಿಕ ಅನುಮೋದನೆ ಹಂತದಲ್ಲಿದೆ. ಕಾವೂರು ಹಾಗೂ ಕಾವೂರು ಜಂಕ್ಷನ್ ಮಾರುಕಟ್ಟೆಯ ಕೆಲಸಕ್ಕೆ ಮಂಜೂರಾತಿ ನೀಡಲಾಗಿದ್ದು, ಶೀಘ್ರದಲ್ಲೇ ಕಾಮಗಾರಿ ಆರಂಭಗೊಳ್ಳಲಿದೆ. ಮನಪಾ ವ್ಯಾಪ್ತಿಯ ಹಿತದೃಷ್ಟಿಯಿಂದ ಲಕ್ಯಾ ಡ್ಯಾಂನಿಂದ ಕುಡಿಯುವ ನೀರು ಪಡೆಯಲು ಪಾಲಿಕೆಗೆ ಅನುಮತಿ ನೀಡುವಂತೆ ಸರ್ವೋಚ್ಛ ನ್ಯಾಯಾಲಯಕ್ಕೆ ಮಧ್ಯಂತರ ಅರ್ಜಿ ಸಲ್ಲಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಮೇಯರ್ ವಿವರ ನೀಡಿದರು.

ಗೋಷ್ಠಿಯಲ್ಲಿ ಮನಪಾ ಮುಖ್ಯ ಸಚೇತಕ ಶಶಿಧರ ಹೆಗ್ಡೆ, ಸ್ಥಾಯಿ ಸಮಿತಿ ಅಧ್ಯಕ್ಷರಾದ ಲ್ಯಾನ್ಸಿಲೋಟ್ ಪಿಂಟೋ, ಬಶೀರ್ ಅಹ್ಮದ್, ಕವಿತಾ, ಅಪ್ಪಿಲತಾ ಆಯುಕ್ತ ಡಾ.ಎಚ್.ಎನ್. ಗೋಪಾಲಕೃಷ್ಣ ಉಪಸ್ಥಿತರಿದ್ದರು.

ಏಕ ಟೆಂಡರ್‌ಗೆ ಮನಪಾದಲ್ಲೇ ಮಂಜೂರಾತಿಗೆ ಮನವಿ

ಪಾಲಿಕೆ ವತಿಯಿಂದ ಕೈಗೊಳ್ಳುವ ಕಾಮಗಾರಿಗಳಿಗೆ ಏಕ ಟೆಂಡರ್‌ಗೆ ಮಂಜೂರಾತಿಯನ್ನು ಈವರೆಗೆ ಜಿಲ್ಲಾಧಿಕಾರಿ ನೀಡುತ್ತಿದ್ದು, ಇನ್ನು ಮುಂದೆ ಮನಪಾದಲ್ಲೇ ಮಂಜೂರಾತಿ ನೀಡಲು ಆದೇಶಿಸುವಂತೆ ಸಚಿವರನ್ನು ಕೋರಲಾಗಿದೆ. ಒಂದೆರಡು ದಿನಗಳಲ್ಲಿ ಸೂಕ್ತ ಆದೇಶ ನೀಡುವ ಭರವಸೆ ಇದೆ ಎಂದು ಮೇಯರ್ ಹರಿನಾಥ್ ತಿಳಿಸಿದರು.

ಪುರಭವನದಲ್ಲಿ 1 ಕೋಟಿ ರೂ. ವೆಚ್ಚದಲ್ಲಿ ಊಟದ ಸಭಾಂಗಣ!

ನಗರದ ಪುರಭವನದಲ್ಲಿ 1 ಕೋಟಿ ರೂ. ವೆಚ್ಚದಲ್ಲಿ ಊಟದ ಸಭಾಂಗಣವನ್ನು ನಿರ್ಮಿಸಲಾಗುತ್ತಿದ್ದು, ಇದಕ್ಕ್ಕೆ ಶೀಘ್ರದಲ್ಲೇ ಶಿಲಾನ್ಯಾಸ ನೆರವೇರಿಸಲಾಗುವುದು. ಪುರಭವನದ ಹಿಂಬದಿಯಲ್ಲೇ ಅತ್ಯಾಧುನಿಕ ಶೈಲಿಯಲ್ಲಿ ಊಟದ ಸಭಾಂಗಣ ನಿರ್ಮಾಣಗೊಳ್ಳಲಿದೆ ಎಂದು ಮೇಯರ್ ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X