Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮೂಡುಬಿದಿರೆ: ರಿಂಗ್‌ರೋಡ್‌ಗೆ ಭೂಮಿ...

ಮೂಡುಬಿದಿರೆ: ರಿಂಗ್‌ರೋಡ್‌ಗೆ ಭೂಮಿ ನೀಡಿದವರಿಗೆ ಇನ್ನೂ ದೊರಕಿಲ್ಲ ಪರಿಹಾರದ ಭಾಗ್ಯ

ವಾರ್ತಾಭಾರತಿವಾರ್ತಾಭಾರತಿ10 Jun 2016 11:43 PM IST
share
ಮೂಡುಬಿದಿರೆ: ರಿಂಗ್‌ರೋಡ್‌ಗೆ ಭೂಮಿ ನೀಡಿದವರಿಗೆ ಇನ್ನೂ ದೊರಕಿಲ್ಲ ಪರಿಹಾರದ ಭಾಗ್ಯ

ಮೂಡುಬಿದಿರೆ, ಜೂ.10: ಇಲ್ಲಿನ ಪೇಟೆಯಲ್ಲಿ ಅಧಿಕವಾಗುತ್ತಿರುವ ವಾಹನ ದಟ್ಟಣೆಯನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಸ್ವರಾಜ್ ಮೈದಾನದಿಂದ ಬೆಳ್ಮಣ್ ಮತ್ತು ಕಾರ್ಕಳಕ್ಕೆ ಸಂಪರ್ಕ ಕಲ್ಪಿಸಲು ಸುಸಜ್ಜಿತವಾಗಿ ನಿರ್ಮಾಣಗೊಂಡು ಉದ್ಘಾಟನೆಗೆ ಸಜ್ಜಾಗಿರುವ ರಿಂಗ್‌ರೋಡ್‌ಗೆ ಭೂಮಿ ಬಿಟ್ಟು ಕೊಟ್ಟವರಿಗೆ ಪರಿಹಾರದ ಭಾಗ್ಯ ಇನ್ನೂ ಕೂಡಾ ದೊರಕಿಲ್ಲ ಎಂದು ತಿಳಿದು ಬಂದಿದೆ.

ಬೆಳೆಯುತ್ತಿರುವ ಮೂಡುಬಿದಿರೆಗೆ ಬೈಪಾಸ್‌ನ ಅಗತ್ಯವಿದೆ ಎಂಬ ನಿಟ್ಟಿನಲ್ಲಿ ಕಳೆದ 18 ವರ್ಷಗಳ ಹಿಂದೆ ರಾಷ್ಟ್ರೀಯ ಹೆದ್ದಾರಿ ಇಲಾಖೆಯು ಸ್ವರಾಜ್ಯ ಮೈದಾನದಿಂದ ಅಲಂಗಾರು ರಸ್ತೆವರೆಗೆ ಕೃಷಿ ಸಹಿತ, ಕುಮ್ಕಿ ಭೂಮಿಯನ್ನು ಹೊಂದಿರುವ ಫಲಾನುಭವಿಗಳಿಂದ ಸೆಂಟ್ಸ್‌ಗೆ 800ರಂತೆ ಭೂಮಿಯನ್ನು ಸ್ವಾಧೀನ ಮಾಡಿಕೊಂಡಿತ್ತು. ಆದರೆ ಕೆಲವು ಹಕ್ಕುದಾರರು ಸೆಂಟ್ಸ್‌ಗೆ 800 ಕಡಿಮೆಯಾಯಿತೆಂದು ಕೋರ್ಟ್‌ಗೆ ಮೊರೆ ಹೋಗಿದ್ದರಿಂದ ಬೈಪಾಸ್ ರಸ್ತೆ ನಿರ್ಮಾಣಕ್ಕೆ ತೊಡಕುಂಟಾಗಿತ್ತು. ಇದರಿಂದಾಗಿ ಪರಿಹಾರದ ಮೊತ್ತವೂ ದೊರಕದಂತಾಗಿತ್ತು.

ಅಭಿವೃದ್ಧಿಯತ್ತ ದಾಪುಗಾಲಿಡುತ್ತಿರುವ ಮೂಡುಬಿದಿರೆಯಲ್ಲಿ ಅನೇಕ ಶಿಕ್ಷಣ ಸಂಸ್ಥೆಗಳಿವೆ. ವಾಹನಗಳ ದಟ್ಟಣೆಯೂ ಜಾಸ್ತಿಯಾಗಿರುವುದರಿಂದ ಈ ಎಲ್ಲಾ ಸಮಸ್ಯೆಗಳನ್ನು ಅರಿತ ರಾಜ್ಯ ಸರಕಾರವು ಬೈಪಾಸ್ ರಸ್ತೆಗೆ ಬದಲಾಗಿ 4.95 ಕೋಟಿ ರೂ. ವೆಚ್ಚದಲ್ಲಿ ವರ್ತುಲ ರಸ್ತೆಯನ್ನು ನಿರ್ಮಿಸಲು ಅನುದಾನವನ್ನು ಮಂಜೂರುಗೊಳಿಸಿತ್ತು. ಅದರಂತೆ ಸ್ವರಾಜ್ ಮೈದಾನದಿಂದ ಕಡಲಕೆರೆ ಮೂಲಕ ಬೆಳ್ಮಣ್ ಮುಖ್ಯ ರಸ್ತೆಯನ್ನು ಸಂಪರ್ಕಿಸುವ ವರ್ತುಲ ರಸ್ತೆಯ ಒಟ್ಟು ವಿಸ್ತೀರ್ಣ ಸುವಾರು 3.16ಕಿಮೀ, ಚರಂಡಿ ಸೇರಿ ರಸ್ತೆಯ ಒಟ್ಟು ಅಗಲ 12 ಮೀಟರ್ ಆಗಿದ್ದು 7 ಮೀಟರ್ ಅಗಲದಲ್ಲಿ ಡಾಮರೀಕರಣಗೊಂಡಿರುವ ವರ್ತುಲ ರಸ್ತೆಯು ಸುಸಜ್ಜಿತವಾಗಿ ನಿರ್ಮಾಣಗೊಂಡು ಘನ ವಾಹನಗಳ ಸಂಚಾರಕ್ಕೆ ತೆರೆದುಕೊಳ್ಳಲು ಕಾದು ನಿಂತಿದೆ.

ಆದರೆ ಬೈಪಾಸ್ ರಸ್ತೆಗಾಗಿ ತಮ್ಮ ಕೃಷಿ ಭೂಮಿ ಬಿಟ್ಟುಕೊಟ್ಟಿರುವ ಫಲಾನುಭವಿಗಳಿಗೆ ಮಾತ್ರ ಇನ್ನೂ ಕೂಡಾ ಪರಿಹಾರದ ಭಾಗ್ಯ ದೊರೆತಿಲ್ಲದಿರುವುದರಿಂದ ಇದೀಗ ಉದ್ಘಾಟನೆಗೆ ಸಜ್ಜಾಗಿರುವ ರಿಂಗ್‌ರೋಡ್‌ನ ಉದ್ಘಾಟನೆಯ ಸಂದರ್ಭದಲ್ಲಿ ಪ್ರತಿಭಟನೆಯ ಮಾಡುವ ಯೋಚನೆಯನ್ನು ಹೊಂದಿದ್ದಾರೆಂದು ಹೇಳಲಾಗುತ್ತಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X