Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಕೋಪಾ ಅಮೆರಿಕ: ಮೆಕ್ಸಿಕೊ, ವೆನೆಝುವೆಲಾ...

ಕೋಪಾ ಅಮೆರಿಕ: ಮೆಕ್ಸಿಕೊ, ವೆನೆಝುವೆಲಾ ಕ್ವಾರ್ಟರ್ ಫೈನಲ್‌ಗೆ

ವಾರ್ತಾಭಾರತಿವಾರ್ತಾಭಾರತಿ10 Jun 2016 11:49 PM IST
share
ಕೋಪಾ ಅಮೆರಿಕ: ಮೆಕ್ಸಿಕೊ, ವೆನೆಝುವೆಲಾ ಕ್ವಾರ್ಟರ್ ಫೈನಲ್‌ಗೆ

ಪಸಡೆನ(ಅಮೆರಿಕ), ಜೂ.10: ಮೆಕ್ಸಿಕೊ ಹಾಗೂ ವೆನೆಝುವೆಲಾ ತಂಡ ಇಲ್ಲಿ ನಡೆಯುತ್ತಿರುವ ಕೋಪಾ ಅಮೆರಿಕ ಫುಟ್ಬಾಲ್ ಟೂರ್ನಿಯಲ್ಲಿ ಕ್ವಾರ್ಟರ್ ಫೈನಲ್‌ಗೆ ಪ್ರವೇಶಿಸಿವೆ.

ಇಲ್ಲಿ ಗುರುವಾರ ನಡೆದ ‘ಸಿ’ ಗುಂಪಿನ ಪಂದ್ಯದಲ್ಲಿ ಮೆಕ್ಸಿಕೊ ತಂಡ ಜಮೈಕಾ ತಂಡವನ್ನು 2-0 ಗೋಲುಗಳ ಅಂತರದಿಂದ ಸೋಲಿಸಿದರೆ, ಮತ್ತೊಂದು ಪಂದ್ಯದಲ್ಲಿ ವೆನೆಝುವೆಲಾ ತಂಡ ಉರುಗ್ವೆ ತಂಡವನ್ನು 1-0 ಗೋಲುಗಳ ಅಂತರದಿಂದ ಮಣಿಸಿ ಅಂತಿಮ 8ರ ಘಟ್ಟವನ್ನು ಪ್ರವೇಶಿಸಿತು.

ಮೆಕ್ಸಿಕೊ ತಂಡದ ಪರ ಚಿಚಾರಿಟೊ ಹೆಡರ್‌ನ ಮೂಲಕ 18ನೆ ನಿಮಿಷದಲ್ಲಿ ಗೋಲು ಬಾರಿಸಿ 1-0 ಮುನ್ನಡೆ ಒದಗಿಸಿಕೊಟ್ಟರು. 81ನೆ ನಿಮಿಷದಲ್ಲಿ ಗೋಲು ಬಾರಿಸಿದ ಒರಿಬೆ ಪೆರಾಲ್ಟ ತಂಡದ ಮುನ್ನಡೆಯನ್ನು 2-0ಗೆ ಏರಿಸಿದರು. ಮೆಕ್ಸಿಕೊ ಸತತ ಕೋಪಾ ಅಮೆರಿಕ ಟೂರ್ನಿಯಲ್ಲಿ 2 ಪಂದ್ಯ ಸಹಿತ ಸತತ 11ನೆ ಪಂದ್ಯವನ್ನು ಜಯಿಸಿ ಅಜೇಯ ದಾಖಲೆ ಕಾಯ್ದುಕೊಂಡಿದೆ.

ಉರುಗ್ವೆ ವಿರುದ್ಧದ ಪಂದ್ಯದಲ್ಲಿ 36ನೆ ನಿಮಿಷದಲ್ಲಿ ಗೋಲು ಬಾರಿಸಿದ ಸಾಲೊಮನ್ ರಾಂಡಂನ್ ತಂಡಕ್ಕೆ ರೋಚಕ ಗೆಲುವು ತಂದುಕೊಟ್ಟರು. ಕೋಪಾ ಅಮೆರಿಕ ಟೂರ್ನಿಯಲ್ಲಿ ವೆನೆಝುವೆಲಾ ತಂಡ ಉರುಗ್ವೆ ವಿರುದ್ಧ ಮೊದಲ ಗೆಲುವು ಸಾಧಿಸಿತು.

ಕೂಟದಲ್ಲಿ ಮೊದಲೆರಡು ಪಂದ್ಯಗಳನ್ನು ಜಯಿಸಿರುವ ವೆನೆಝುವೆಲಾ ತಂಡ ಸಿ ಗುಂಪಿನಲ್ಲಿ ಒಟ್ಟು 6 ಅಂಕವನ್ನು ಗಳಿಸಿ ಅಗ್ರ ಸ್ಥಾನ ಕಾಯ್ದುಕೊಂಡಿದೆ. ಎರಡನೆ ಸೋಲು ಕಂಡಿರುವ ಉರುಗ್ವೆ ತಂಡ ಟೂರ್ನಿಯಿಂದ ಹೊರ ನಡೆದಿದೆ.

ಉರುಗ್ವೆ ತಂಡದ ಎಡಿನ್ಸನ್ ಕವಾನಿ ಹಲವು ಬಾರಿ ಅವಕಾಶವನ್ನು ಕಳೆದುಕೊಂಡರು. ಸ್ನಾಯು ಸೆಳೆತದಿಂದ ಚೇತರಿಸಿಕೊಳ್ಳಲು ವಿಫಲವಾಗಿದ್ದ ಲೂಯಿಸ್ ಸುಯರೆಝ್ ಸತತ ಎರಡನೆ ಪಂದ್ಯದಲ್ಲೂ ಉರುಗ್ವೆ ತಂಡದ ಪರ ಆಡಲಿಲ್ಲ.

ನಾವು ಸಂಘಟಿತ ಪ್ರದರ್ಶನ ನೀಡಲು ವಿಫಲವಾದೆವು. ಸುಯರೆಝ್ ಇನ್ನೂ ಆಡಲು ಸಜ್ಜಾಗಿಲ್ಲ. ಜಮೈಕಾ ವಿರುದ್ಧ ನಡೆಯಲಿರುವ ಅಂತಿಮ ಗ್ರೂಪ್ ಪಂದ್ಯದಲ್ಲೂ ಸುಯರೆಝ್ ಆಡುವ ಸಾಧ್ಯತೆಯಿಲ್ಲ ಎಂದು ಉರುಗ್ವೆ ತಂಡದ ಕೋಚ್ ಆಸ್ಕರ್ ಟಬರೆಝ್ ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X