Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಸರಕಾರಿ ಶಾಲಾ ಮಕ್ಕಳ ಕಲಾ ವೈಭವ!

ಸರಕಾರಿ ಶಾಲಾ ಮಕ್ಕಳ ಕಲಾ ವೈಭವ!

ವಾರ್ತಾಭಾರತಿವಾರ್ತಾಭಾರತಿ10 Jun 2016 11:55 PM IST
share
ಸರಕಾರಿ ಶಾಲಾ ಮಕ್ಕಳ ಕಲಾ ವೈಭವ!

ಮಂಗಳೂರು, ಜೂ. 10: ನಗರದ ಪ್ರಸಾದ್ ಆರ್ಟ್ ಗ್ಯಾಲರಿ ಇಂದು ಬಂಟ್ವಾಳ ಮಂಚಿಯ ಸರಕಾರಿ ಪ್ರೌಢಶಾಲೆಯ 25 ಮಂದಿ ವಿದ್ಯಾರ್ಥಿಗಳ ಕಲಾವೈಭವವನ್ನು ಅನಾವರಣಗೊಳಿಸಿತು. ವ್ಯರ್ಥವಾದ ಬಣ್ಣದ ಪೇಪರ್ ತುಂಡುಗಳನ್ನು ಬಳಸಿಕೊಂಡು ರಚಿಸಿದ ‘ಕೊಲಾಜ್’ ಕಲಾಕೃತಿಗಳು ಹೈಸ್ಕೂಲ್ ಮಕ್ಕಳ ಸಾಧನೆಗೆ ಸಾಕ್ಷಿಯಾಯಿತು. ಪ್ರೌಢಶಾಲಾ ಮಕ್ಕಳ ಚಿತ್ರಕಲಾಕೃತಿಗಳ ಪ್ರದರ್ಶನವನ್ನು ಉದ್ಘಾಟಿಸಿದ ರಂಗ ನಿರ್ದೇಶಕ ಜೀವನ್‌ರಾಮ್ ಸುಳ್ಯ, ಹುಡುಕಾಟದ ಪ್ರಕ್ರಿಯೆಯಲ್ಲಿ ಹುಟ್ಟಿರುವ ಕೊಲಾಜ್ ಕಲಾ ಮಾಧ್ಯಮವು ಇಂದು ಸರಕಾರಿ ಶಾಲಾ ಮಕ್ಕಳ ಕಲಾ ಪ್ರತಿಭೆಯನ್ನೂ ಹೊರಹೊಮ್ಮಿಸಿದೆ ಎಂದರು. ಅತ್ಯಂತ ಅಪರೂಪವಾದ ಕೊಲಾಜ್ ಮಾಧ್ಯಮಕ್ಕೆ ಮಕ್ಕಳನ್ನು ಪರಿಚಯಿಸಿರುವುದು ಶ್ಲಾಘನೀಯ ಕಾರ್ಯ. ವಿದ್ಯಾರ್ಥಿಗಳು ತಮ್ಮ ಕಲ್ಪನೆಯ ಚೌಕಟ್ಟಿಗಾಗಿ ಬಣ್ಣದ ಪೇಪರ್‌ಗಳನ್ನು ಹುಡುಕಿ ಅವರು ರಚಿಸಿರುವ ಚಿತ್ರಗಳು ಯಾವುದೇ ಹಿರಿಯ ಕಲಾವಿದರ ಕಲಾಕೃತಿಗಳಿಗೆ ಕಡಿಮೆಯಿಲ್ಲ ಎಂದು ಬಣ್ಣಿಸಿದರು. ಹಿರಿಯ ಕಲಾವಿದ ಮತ್ತು ಪರಿಸರ ಹೋರಾಟಗಾರ ದಿನೇಶ್ ಹೊಳ್ಳ ಮಾತನಾಡಿ, ಬೀಜದೊಳಗಿದೆ ಮರ, ಬೆಳೆಸಿ ಪೋಷಿಸುವವರದೇ ಬರ... ಎಂಬ ಕವನದ ಸಾಲಿನಂತೆ ಮಕ್ಕಳಲ್ಲಿರುವ ಪ್ರತಿಭೆಯನ್ನು ಹೊರತೆಗೆಯಲು ಪ್ರಯತ್ನ ನಡೆಸುವ ಶಿಕ್ಷಕರು ಬೇಕಾಗಿದ್ದಾರೆ. ಕೊಳ್ನಾಡು ಶಾಲೆಯ ಮಕ್ಕಳು ಅದ್ಭುತವಾದ ಸಾಧನೆಯನ್ನು ಮಾಡಿದ್ದಾರೆ ಎಂದು ಅಭಿನಂದಿಸಿದರು. ಕಲಾಶಿಕ್ಷಕ ತಾರಾನಾಥ ಕೈರಂಗಳ ಮಕ್ಕಳು ಕೊಲಾಜ್ ಚಿತ್ರಕಲಾಕೃತಿಯನ್ನು ರಚಿಸಿದ ಕಾರಣ ತಿಳಿಸುತ್ತಾ, ಖಾಸಗಿ ಶಾಲೆಯಲ್ಲಿ ಆರ್ಥಿಕವಾಗಿ ಸ್ಥಿತಿವಂತರ ಮಕ್ಕಳು ಬಣ್ಣದ ಪೆನ್ಸಿಲ್ ಪೆನ್‌ಗಳನ್ನು ತರಲು ಸಮರ್ಥರಾಗಿರುತ್ತಾರೆ. ಆದರೆ ಸರಕಾರಿ ಶಾಲೆಗೆ ಬರುವ ಆರ್ಥಿಕವಾಗಿ ಬಡವಾಗಿರುವ ಮಕ್ಕಳಿಗೆ ಇದು ಕಷ್ಟದ ಕೆಲಸ.ಹಾಗಾಗಿ ವ್ಯರ್ಥವಾಗುವ ಹಳೆ ಪೇಪರ್‌ಗಳನ್ನೇ ಬಳಸಿ ಯಾವ ರೀತಿಯಲ್ಲಿ ಕಲಾಕೃತಿಗಳನ್ನು ರಚಿಸಬಹುದು ಎಂದು ತಿಳಿಸಿದೆ. ಮಕ್ಕಳು ಅದನ್ನು ಸಾಕಾರಗೊಳಿಸಿದ್ದಾರೆ ಎಂದರು. ಸರ್ಕಾರಿ ಶಿಕ್ಷಕ ಶಿಕ್ಷಣ ಮಹಾವಿದ್ಯಾಲಯದ ಪ್ರವಚಕ ವೈ. ಶಿವರಾಮಯ್ಯ, ಹಿರಿಯ ಚಿತ್ರಕಲಾವಿದ ಗಣೇಶ್ ಸೋಮಯಾಜಿ, ಮಹಾಲಸಾ ಚಿತ್ರಕಲಾ ಮಹಾವಿದ್ಯಾಲಯದ ಪ್ರಾಂಶುಪಾಲ ಕೆ. ಪುರುಷೋತ್ತಮ ನಾಯಕ್, ಕೊಳ್ನಾಡು ಸರ್ಕಾರಿ ಶಾಲೆಯ ಮುಖ್ಯೋಪಾಧ್ಯಾಯ ವಿ. ಶ್ರೀರಾಮಮೂರ್ತಿ ಉಪಸ್ಥಿತರಿದ್ದರು. ಚಂದ್ರಶೇಖರ ಪಾತೂರು ಕಾರ್ಯಕ್ರಮ ನಿರೂಪಿಸಿದರು.

ಜೂ.12ರವರೆಗೆ ಪ್ರದರ್ಶನ ವೀಕ್ಷಣೆಗೆ ಅವಕಾಶ

ಪ್ರದರ್ಶನದಲ್ಲ್ಲಿ 10ನೆ ತರಗತಿಯ ಹರಿಚರಣ್, ಕೃತಿಕಾ ಎ., ಗುರುಕುಮಾರ್, ಶರಣ್ಯ ರೈ, ರಶ್ಮಿತಾ ಎನ್., ಅಶ್ವಿತಾ ಕೆ., ಅಭಿಷೇಕ್, ಪುಷ್ಪಾ, ಆಶಲತಾ ಎನ್., ಮಹಮ್ಮದ್ ಮಸೂದ್, ವಿನಯಶ್ರೀ ಕೆ., ಸೂರಜ್, ಪೂರ್ಣೇಶ್, 9ನೆ ತರಗತಿಯ ಸಾಗರ್, ಭವ್ಯಶ್ರೀ, ಪಾರ್ಥೇಶ್ ಎನ್., ನವ್ಯಶ್ರೀ ಎಂ., ವಂದನಾ ಕುಮಾರಿ, ಪ್ರತೀಕ್ಷಾ ಎನ್., ಪ್ರಜ್ವಲ್ ಕುಮಾರ್, 8ನೆ ತರಗತಿಯ ಸಹನ್ ಬಿ., ಅಂಕಿತ್, ಶ್ರೀನಿಧಿ ಪಾತೂರು, ಸೌಜನ್ಯಾ ರೈ, ದೃಶ್ಯಾರವರ ಚಿತ್ರಕಲೆಗಳು ಪ್ರದರ್ಶನಗೊಳ್ಳುತ್ತಿವೆ. ಜೂ. 12ರವರೆಗೆ ಪ್ರತಿದಿನ ಬೆಳಗ್ಗೆ 9:30ರಿಂದ ಸಂಜೆ 7ರವರೆಗೆ ಆಸಕ್ತರಿಗೆ ವೀಕ್ಷಣೆಗೆ ಮುಕ್ತ ಅವಕಾಶವಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X