Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಮಧ್ಯಪ್ರದೇಶದ ಮೂರನೆ ಒಂದರಷ್ಟು...

ಮಧ್ಯಪ್ರದೇಶದ ಮೂರನೆ ಒಂದರಷ್ಟು ಬಾಲಕಾರ್ಮಿಕರು ಅನಕ್ಷರಸ್ಥರು

ವಾರ್ತಾಭಾರತಿವಾರ್ತಾಭಾರತಿ11 Jun 2016 8:58 PM IST
share
ಮಧ್ಯಪ್ರದೇಶದ ಮೂರನೆ ಒಂದರಷ್ಟು ಬಾಲಕಾರ್ಮಿಕರು ಅನಕ್ಷರಸ್ಥರು

ಭೋಪಾಲ್, ಜೂ.11: ಚೈಲ್ಡ್ ರೈಟ್ಸ್ ಅಂಡ್ ಯೂ (ಸಿಆರ್‌ವೈ) ಸ್ವಯಂಸೇವಾ ಸಂಘಟನೆ 2011ರ ಜನಗಣತಿ ಅಂಕಿ ಅಂಶಗಳನ್ನು ವಿಶ್ಲೇಷಿಸಿದ್ದು, ಮಧ್ಯಪ್ರದೇಶದಲ್ಲಿ ವಿವಿಧ ಕೆಲಸಗಳಲ್ಲಿ ತೊಡಗಿಸಿಕೊಂಡಿರುವ ಬಾಲಕಾರ್ಮಿಕರ ಪೈಕಿ ಮೂರನೆ ಒಂದರಷ್ಟು ಮಂದಿ ಅನಕ್ಷರಸ್ಥರು ಎಂಬ ಅಂಶವನ್ನು ಬಹಿರಂಗಪಡಿಸಿದೆ.

2011ರ ಜನಗಣತಿ ಪ್ರಕಾರ, 7,00,239 ಮಂದಿ ಬಾಲಕಾರ್ಮಿಕರು ಮಧ್ಯಪ್ರದೇಶದಲ್ಲಿದ್ದಾರೆ. ಈ ಮಕ್ಕಳ ಪೈಕಿ, ಶೇ.60ರಷ್ಟು ಮಕ್ಕಳು ದುರ್ಬಲ ವರ್ಗದ ಸೌಲಭ್ಯ ವಂಚಿತ ಕಾರ್ಮಿಕರಾಗಿದ್ದು, ಇವರು ವರ್ಷದಲ್ಲಿ ಆರು ತಿಂಗಳು ಅಥವಾ ಅದಕ್ಕಿಂತ ಕಡಿಮೆ ಅವಧಿ ಉದ್ಯೋಗ ಪಡೆಯುತ್ತಾರೆ. ಉಳಿದ 2,86,310 ಮಕ್ಕಳು ಪೂರ್ಣಾವಧಿ ಉದ್ಯೋಗದಲ್ಲಿದ್ದು, ವರ್ಷಕ್ಕೆ ಆರು ತಿಂಗಳಿಗಿಂತ ಅಧಿಕ ಅವಧಿಯ ಉದ್ಯೋಗ ಹೊಂದಿದ್ದಾರೆ ಎಂದು ಕ್ರೈ ಪ್ರಕಟಣೆಯಲ್ಲಿ ಹೇಳಿದೆ.

ಅಂಕಿ ಅಂಶಗಳ ವಿಸ್ತತ ವಿಶ್ಲೇಷಣೆಯಿಂದ ತಿಳಿದು ಬರುವ ಇನ್ನೊಂದು ಪ್ರಮುಖ ಅಂಶವೆಂದರೆ, ಒಂದು ಲಕ್ಷ ಮಂದಿ ಪೂರ್ಣಾವಧಿ ಕೆಲಸಗಾರರು, 7-14 ವರ್ಷ ವಯೋಮಿತಿಯವರಾಗಿದ್ದು, ಇವರಿಗೆ ಓದಲು ಅಥವಾ ಬರೆಯಲು ಬರುವುದಿಲ್ಲ. ಇನ್ನು 1.75 ಲಕ್ಷ ಮಕ್ಕಳ ಶಿಕ್ಷಣಕ್ಕೆ ಆದ್ಯತೆ ನೀಡಿಲ್ಲ ಎನ್ನುವುದನ್ನೂ ಸಂಸ್ಥೆ ಬಹಿರಂಗಪಡಿಸಿದೆ.

ದೇಶದ ಬಾಲಕಾರ್ಮಿಕರ ಪೈಕಿ ಶೇ.35ರಷ್ಟು ಮಂದಿ ಅನಕ್ಷರಸ್ಥರಾಗಿದ್ದು, ಅಂದರೆ ಪ್ರತಿ ಮೂವರು ಬಾಲಕಾರ್ಮಿಕರ ಪೈಕಿ ಒಬ್ಬರು ಅನಕ್ಷರಸ್ಥರಾಗಿದ್ದಾರೆ. ಸುಮಾರು 14 ಲಕ್ಷ ಬಾಲಕಾರ್ಮಿಕರು ಭಾರತದಲ್ಲಿ 7-14 ವರ್ಷ ವಯೋಮಿತಿಯವರಾಗಿದ್ದು, ಅವರಿಗೆ ತಮ್ಮ ಹೆಸರು ಬರೆಯಲೂ ಬರುವುದಿಲ್ಲ ಎಂಬ ಅಂಶ ವ್ಯಕ್ತವಾಗಿದೆ.

ಇದು ತೀರಾ ದುರದೃಷ್ಟಕರ ಪರಿಸ್ಥಿತಿಯಾಗಿದ್ದು, ಇದು ಬದಲಾಗದಿದ್ದರೆ, ಇವರು ಅಂತರ ಪೀಳಿಗೆಯ ಬಡತನ ಹಾಗೂ ನಿರುದ್ಯೋಗ ಚಕ್ರದಲ್ಲಿ ಸಿಲುಕಿ ಹಾಕಿಕೊಂಡಿದ್ದಾರೆ ಎಂದು ಕ್ರೈ ಉತ್ತರ ಭಾರತ ಪ್ರದೇಶಿಕ ನಿರ್ದೇಶಕ ಸೋಹಾ ಮೊಯಿತ್ರಾ ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X