Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಜೂ.28ರಂದು ಪ್ರತಿಭಟನಾ ಸಮಾವೇಶ:...

ಜೂ.28ರಂದು ಪ್ರತಿಭಟನಾ ಸಮಾವೇಶ: ಪುಟ್ಟಣ್ಣಯ್ಯ

ತೆಂಗು, ಅಡಿಕೆ ಬೆಲೆ ನಿಗದಿಗೆ ಆಗ್ರಹಿಸಿ

ವಾರ್ತಾಭಾರತಿವಾರ್ತಾಭಾರತಿ11 Jun 2016 10:57 PM IST
share
ಜೂ.28ರಂದು ಪ್ರತಿಭಟನಾ ಸಮಾವೇಶ: ಪುಟ್ಟಣ್ಣಯ್ಯ

 ಬೆಂಗಳೂರು, ಜೂ.11: ತೆಂಗು ಮತ್ತು ಅಡಿಕೆ ಬೆಳೆಗಾರರಿಗೆ ಕನಿಷ್ಠ ಬೆಲೆಗಾಗಿ ಸ್ಥಿರ ಬೆಲೆ ನೀತಿಯನ್ನು ಜಾರಿ ಮಾಡಿ, ರೈತರನ್ನು ಉಳಿಸಿ ಎಂದು ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವತಿಯಿಂದ ಜೂ.28 ರಂದು ತುಮಕೂರು ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ರಾಜ್ಯ ಮಟ್ಟದ ಪ್ರತಿಭಟನಾ ಸಮಾವೇಶವನ್ನು ಹಮ್ಮಿಕೊಳ್ಳಲಾಗಿದೆ. ನಗರದ ಪ್ರೆಸ್‌ಕ್ಲಬ್‌ನಲ್ಲಿ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಶಾಸಕ ಕೆ. ಎಸ್.ಪುಟ್ಟಣ್ಣಯ್ಯ, ಕಳೆದ ವರ್ಷ ಒಂದು ಟನ್ ಕೊಬ್ಬರಿಗೆ 22 ಸಾವಿರ ಬೆಲೆಯಿತ್ತು, ಆದರೆ, ಇದೀಗ ಸಂಪೂರ್ಣವಾಗಿ ಕುಸಿದಿದ್ದು 10-11 ಸಾವಿರಕ್ಕೆ ಮಾರಾಟವಾಗುತ್ತಿದೆ. ಒಂದು ಕ್ವಿಂಟಾಲ್ ಅಡಿಕೆಯು 90 ಸಾವಿರಕ್ಕೆ ಮಾರಾಟವಾಗುತ್ತಿತ್ತು, ಆದರೆ, ಈಗ 36 ರಿಂದ 38 ಸಾವಿರಕ್ಕೆ ಮಾರಾಟವಾಗುತ್ತಿದೆ. ಒಂದು ಕಡೆ ತೆಂಗಿನ ಮರಗಳು ನುಸಿ ರೋಗಹಾಗೂ ಅಡಿಕೆ ಬೆಳೆ ಕೊಳೆ ಮತ್ತು ಹಳದಿ ರೋಗಗಳಿಗೆ ತುತ್ತಾಗುತ್ತಿವೆ. ಇಂತಹ ಸಂದರ್ಭ ದಲ್ಲಿಯೂ ರೈತರು ಬೆಳೆ ಬೆಳೆಯುತ್ತಿದ್ದಾರೆ. ಆದರೆ, ಬೆಳೆದ ಬೆಳೆಗೆ ಕನಿಷ್ಠ ಬೆಲೆಯೂ ಸಿಗದೆ ಆತಂಕಕ್ಕೆ ಈಡಾಗಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
 ರಾಜ್ಯದ 12 ಜಿಲ್ಲೆಗಳ ಸುಮಾರು 12.20 ಲಕ್ಷ ಹೆಕ್ಟೇರ್‌ನಲ್ಲಿ 12 ಕೋಟಿಗೂ ಅಧಿಕ ತೆಂಗಿನ ಮರಗಳನ್ನು ಬೆಳೆಯಲಾಗಿದೆ. ಇದೇ ಸಂದರ್ಭ ದಲ್ಲಿ ಅಷ್ಟೇ ಪ್ರಮಾಣದಲ್ಲಿ ಅಡಿಕೆ ಬೆಳೆಯನ್ನು ಬೆಳೆಯಲಾ ಗುತ್ತಿದೆ. ಕಳೆದೆರಡು ವರ್ಷಗಳಿಂದ ಸತತವಾದ ಬರಗಾಲದಿಂದ ನೀರಿಲ್ಲದೆ ಕೋಟ್ಯಂತರ ತೆಂಗು ಮತ್ತು ಅಡಿಕೆ ಮರಗಳು ನಾಶವಾಗಿವೆ. ಹೀಗಿದ್ದರೂ, ಸರಕಾರಗಳು ತೆಂಗು ಮತ್ತು ಅಡಿಕೆ ಬೆಳೆಗಾರರನ್ನು ಕಡೆಗಣಿಸಿವೆ ಎಂದು ಹೇಳಿದ ಅವರು, ರೈತರ ಸಮಸ್ಯೆಗಳನ್ನು ಅಧ್ಯಯನ ಮಾಡಲಿಕ್ಕಾಗಿ ಸಮಿತಿಗಳು ಬರುತ್ತವೆಯಾದರೂ ಯಾವುದೇ ಪ್ರಯೋಜನವಾಗುತ್ತಿಲ್ಲ ಎಂದು ದೂರಿದರು.
ಬೆಳೆಗಾರರನ್ನು ಒಳಗೊಂಡಂತೆ ವರ್ತಕರು, ಮಾರುಕಟ್ಟೆಯ ಅಧಿಕಾರಿಗಳು ಹಾಗೂ ತೋಟಗಾರಿಕೆ ಅಧಿಕಾರಿಗಳನ್ನು ಒಳಗೊಂಡಂತೆ ತೆಂಗು ಮತ್ತು ಅಡಿಕೆ ಮಂಡಳಿಯನ್ನು ಸ್ಥಾಪನೆ ಮಾಡಬೇಕು. ಹಾಗೂ ಸ್ಥಿರಬೆಲೆಯನ್ನು ಕಾಪಾಡಲು ನೀತಿಯನ್ನು ರೂಪಿಸಬೇಕು. ತೆಂಗು, ಅಡಿಕೆ ಬೆಳೆಗೆ ಕನಿಷ್ಠ ಬೆಲೆ ನಿಗದಿ ಮಾಡಬೇಕು ಎಂದು ಆಗ್ರಹಿಸಿದರು.
ಸಮಾವೇಶದಲ್ಲಿ ಸಂಘಟನೆಯ ಮುಖಂಡರಾದ ಚುಕ್ಕಿ ನಂಜುಂಡಸ್ವಾಮಿ, ಬಡಗಲಪುರ ನಾಗೇಂದ್ರ, ಕೆ.ಟಿ. ಗಂಗಾಧರ್, ಸುರೇಶ್ ಬಾಬು ಗಜಪತಿ ಇನ್ನಿತರರು ಭಾಗವಹಿ ಸಲಿದ್ದಾರೆ ಎಂದು ತಿಳಿಸಿದರು. ಪತ್ರಿಕಾಗೋಷ್ಠಿಯಲ್ಲಿ ಸಂಘಟನೆಯ ಉಪಾಧ್ಯಕ್ಷ ಜೆ.ಎಂ.ವೀರಸಂಗಯ್ಯ, ರಾಮು ಚನ್ನಪಟ್ಟಣ, ಪಿ.ನಾಗರಾಜು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X