Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಪುತ್ತೂರು: ‘ಮಿಷನ್ 95+’ ಗೌರವ ಅಭಿನಂದನಾ...

ಪುತ್ತೂರು: ‘ಮಿಷನ್ 95+’ ಗೌರವ ಅಭಿನಂದನಾ ಕಾರ್ಯಕ್ರಮ

ವಾರ್ತಾಭಾರತಿವಾರ್ತಾಭಾರತಿ11 Jun 2016 10:59 PM IST
share
ಪುತ್ತೂರು: ‘ಮಿಷನ್ 95+’ ಗೌರವ ಅಭಿನಂದನಾ ಕಾರ್ಯಕ್ರಮ

ಪುತ್ತೂರು, ಜೂ.11: ಈ ಬಾರಿಯ ಎಸೆಸೆಲ್ಸಿ ಪರೀಕ್ಷೆಯಲ್ಲಿ ಗಣನೀಯ ಸಾಧನೆಗೆ ಕಾರಣವಾಗಿದ್ದ ‘ಮಿಷನ್ 95+’ ಯೋಜನೆಯ ಶಿಕ್ಷಕರಿಗೆ ಅಭಿನಂದನಾ ಕಾರ್ಯಕ್ರಮ ಶನಿವಾರ ಪುತ್ತೂರಿನ ಸಂತ ವಿಕ್ಟರನ್ ಬಾಲಿಕಾ ಪ್ರೌಢಶಾಲೆಯ ಸಭಾಂಗಣದಲ್ಲಿ ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕ್ಷೇತ್ರ ಶಿಕ್ಷಣಾಧಿಕಾರಿ ಜಿ.ಎಸ್. ಶಶಿಧರ್, ಮಿಷನ್ 85+ ತಾಲೂಕಿನಲ್ಲಿ ಯಶಸ್ವಿಯಾಗುವುದರೊಂದಿಗೆ ರಾಜ್ಯಕ್ಕೂ ಮಾದರಿಯಾಗಿದೆ. ವಿದ್ಯಾರ್ಥಿಗಳ ಭಾವನಾತ್ಮಕ ಬುದ್ದಿಮತ್ತೆಯನ್ನು ಬೆಳೆಸುವ ಮೂಲಕ ಮಿಷನ್ 95+ ಯಶಸ್ವಿಗೆ ಕಾರಣವಾಗಿದೆ. ಈ ಬಾರಿ ತುಳು ಪರೀಕ್ಷೆಗೆ ಹಾಜರಾಗಿರುವ ಎಲ್ಲಾ ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ ಎಂದು ಹೇಳಿದರು.

ಸಭೆಯಲ್ಲಿ ಮಾತನಾಡಿದ ರಾಮಕುಂಜ ಪದವಿ ಪೂರ್ವ ಕಾಲೇಜ್‌ನ ಪ್ರಾಂಶುಪಾಲ ಸತೀಶ್ ಭಟ್, ರಾತ್ರಿ ಶಾಲೆ ನಡೆಸಲು ಪೋಷಕರ ಬೆಂಬಲ ಅಗತ್ಯವಿದ್ದು, ಈ ನಿಟ್ಟಿನಲ್ಲಿ ಮುಂದಿನ ದಿನಗಳಲ್ಲಿ ಪೋಷಕರ ಬೆಂಬಲ ಹೇಗೆ ಪಡೆದುಕೊಳ್ಳಬಹುದು ಎಂಬ ಬಗ್ಗೆ ಅವಲೋಕನ ಅಗತ್ಯವಿದೆ. ಅಂಕಿ ಅಂಶ ಹೆಚ್ಚಳದ ಧಾವಂತದಲ್ಲಿ ವಿದ್ಯಾರ್ಥಿಗಳಿಗೆ ತೊಂದರೆಯಾಗದಂತೆ ಎಚ್ಚರಿಕೆ ವಹಿಸಿಕೊಳ್ಳಬೇಕಾಗಿದೆ ಎಂದರು.

ಕಾಣಿಯೂರು ಪ್ರಗತಿ ವಿದ್ಯಾಸಂಸ್ಥೆಯ ಮುಖ್ಯಗುರು ಗಿರಿಶಂಕರ ಸುಲಾಯ ಮಾತನಾಡಿ, ಕಲಿಕೆಯಲ್ಲಿ ಹಿಂದುಳಿದಿರುವ ಮಕ್ಕಳನ್ನು ಗುರುತಿಸಿ ಶಿಕ್ಷಕರು ಕಷ್ಟಪಟ್ಟು ಅವರನ್ನು ಮುಂದೆ ತಂದಲ್ಲಿ ಅಂತಹ ಮಕ್ಕಳು ಬದುಕಿನುದ್ದಕ್ಕೂ ನಮ್ಮನ್ನು ನೆನಪಿನಲ್ಲಿಟ್ಟುಕೊಳ್ಳುತ್ತಾರೆ ಎಂದರು.

ತಾಲೂಕು ಪ್ರೌಢಶಾಲಾ ಸಹಶಿಕ್ಷಕರ ಸಂಘದ ಅಧ್ಯಕ್ಷ ಅಬ್ರಹಾಂ ಮಾತನಾಡಿ, ಮಿಷನ್ 95+ ಕಾರ್ಯಕ್ರಮವು ಇಲಾಖೆಯ ಅಧಿಕಾರಿಗಳು ನೀಡಿದ ಒತ್ತಡವಲ್ಲ. ಶಿಕ್ಷಕರು ಸ್ವಯಂ ಅಳವಡಿಸಿಕೊಂಡಿರುವ ವ್ಯವಸ್ಥೆಯಾಗಿದೆ. ಮಾಧ್ಯಮಗಳು ವಾಸ್ತವ ಸ್ಥಿತಿಯನ್ನು ಅರಿತುಕೊಳ್ಳದೆ ಮಿಷನ್ 95+ ವಿಚಾರದಲ್ಲಿ ಋಣಾತ್ಮಕ ವರದಿಗಳನ್ನು ಮಾಡಿದೆ. ನಮ್ಮ ಶ್ರಮವನ್ನು ಪತ್ರಕರ್ತರು ಅರಿತುಕೊಂಡು ವರದಿ ಮಾಡಬೇಕಿತ್ತು. ಪತ್ರಿಕಾ ವರದಿ ನೋವು ತಂದಿದೆ ಎಂದರು.

ಪುತ್ತೂರು ಸಂತ ಫಿಲೋಮಿನಾ ಪ್ರೌಢಶಾಲೆಯ ಮುಖ್ಯಗುರು ಓಸ್ವಾಲ್ಡ್ ರಾಡ್ರಿಗಸ್, ಉಪ್ಪಿನಂಗಡಿ ಪ್ರೌಢಶಾಲಾ ಮುಖ್ಯಗುರು ದಿವಾಕರ ಆಚಾರ್ಯ, ಅಕ್ಷರ ದಾಸೋಹದ ಸಹಾಯಕ ನಿರ್ದೇಶಕ ನವೀನ್ ಸ್ಟೀಫನ್ ವೇಗಸ್, ಕ್ಷೇತ್ರ ಸಂಪನ್ಮೂಲ ಕೇಂದ್ರದ ಪ್ರದೀಪ್, ಸಂತ ವಿಕ್ಟರನ ಪ್ರೌಢಶಾಲೆಯ ಪ್ರಭಾರ ಮುಖ್ಯಗುರು ರೋಸ್ಲಿನ್ ಲೋಬೊ, ಈಶ್ವರಮಂಗಲ ಪ್ರೌಢಶಾಲೆಯ ಮುಖ್ಯಗುರು ಸರ್ವೋತ್ತಮ ಬೋರ್ಕರ್, ನೆಟ್ಟಣಿಗೆ ಮುಡ್ನೂರು ಸರಕಾರಿ ಪ್ರೌಢಶಾಲೆಯ ಮುಖ್ಯಗುರು ನಝೀರ್, ಬೆಥನಿ ಆಂಗ್ಲಮಾಧ್ಯಮ ಶಾಲೆಯ ಮುಖ್ಯಗುರು ಸಿ. ಎಮ್ರಿಟಾ ಮತ್ತಿತರರು ಅನಿಸಿಕೆ ವ್ಯಕ್ತ ಪಡಿಸಿದರು.

ಕಾರ್ಯಕ್ರಮದಲ್ಲಿ ಮಿಷನ್ 95+ಗಾಗಿ ಶ್ರಮಿಸಿದ್ದ ಶಿಕ್ಷಕ ದಿ. ನೂಜಿ ವೆಂಕಟ್ರಮಣ ಗೌಡರಿಗೆ ಇರ್ದೆ ಸರಕಾರಿ ಪ್ರೌಢಶಾಲೆಯ ಮುಖ್ಯಗುರು ನಾರಾಯಣ ಕೆ. ನುಡಿ ನಮನ ಸಲ್ಲಿಸಿದರು.

ಶಿಕ್ಷಕ ಶಿವರಾಂ ಈಶ್ವರಮಂಗಲ ಸ್ವಾಗತಿಸಿದರು. ಕ್ಷೇತ್ರ ಸಂಪನ್ಮೂಲ ವ್ಯಕ್ತಿ ಲೋಕಾನಂದ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X