Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ದೇರಳಕಟ್ಟೆ: ಕೊಲ್ಯಶ್ರೀ ಪುಣ್ಯಸ್ಮರಣೆ

ದೇರಳಕಟ್ಟೆ: ಕೊಲ್ಯಶ್ರೀ ಪುಣ್ಯಸ್ಮರಣೆ

ವಾರ್ತಾಭಾರತಿವಾರ್ತಾಭಾರತಿ11 Jun 2016 11:31 PM IST
share
ದೇರಳಕಟ್ಟೆ: ಕೊಲ್ಯಶ್ರೀ ಪುಣ್ಯಸ್ಮರಣೆ

ಕೊಣಾಜೆ, ಜೂ.11: 1974ರಲ್ಲಿ ಪ್ರಥಮ ಬಾರಿಗೆ ಅಯ್ಯಪ್ಪ ಮುದ್ರಾಧಾರಣೆ ಧರಿಸಿದ ಕೊಲ್ಯ ಶ್ರೀ ಬಳಿಕ ನಿರಂತರ ಶಬರಿಮಲೆ ಯಾತ್ರೆ ಕೈಗೊಂಡಿದ್ದು ಆ ಕಾಲದಲ್ಲೇ ದಿವ್ಯಜ್ಞಾನ ಹೊಂದಿದ್ದರು, ಮುಂದಕ್ಕೆ ಕೊಲ್ಯ ಶ್ರೀ ಕ್ಷೇತ್ರ ಪವಾಡದ ತಾಣವಾಗಿ ಮಾರ್ಪಡಲಿ ಎಂದು ದೇರಳಕಟ್ಟೆ ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಗುರುಸ್ವಾಮಿ ವಿಶ್ವನಾಥ ಕಾಯರ್‌ಪಳಿಕೆ ಆಶಿಸಿದರು.

ದೇರಳಕಟ್ಟೆ ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಆಡಳಿತ ಸಮಿತಿ ಹಾಗೂ ಭಕ್ತವೃಂದದಿಂದ ಶುಕ್ರವಾರ ದೇವಸ್ಥಾನದ ಸಭಾಂಗಣದಲ್ಲಿ ನಡೆದ ಕೊಲ್ಯ ಶ್ರೀ ರಮಾನಂದ ಸ್ವಾಮೀಜಿ ಅವರ ಪುಣ್ಯಸ್ಮರಣೆಯಲ್ಲಿ ಅವರು ಮಾತನಾಡಿದರು.

ಕೊಲ್ಯಶ್ರೀ ಅವರ ಸಂಪೂರ್ಣ ಅನುಗ್ರಹ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಮೇಲಿತ್ತು, ಆ ಕಾರಣಕ್ಕೆ ಅವರು ಪ್ರತೀ ವಾರ್ಷಿಕೋತ್ಸವ ಸಂದರ್ಭ ಎಲ್ಲಿದ್ದರೂ ಶ್ರೀ ಕ್ಷೇತ್ರಕ್ಕೆ ಆಗಮಿಸಿ ಪೂಜಾ ಕಾರ್ಯದಲ್ಲಿ ನಿರತರಾಗುತ್ತಿದ್ದರು ಎಂದು ನೆನಪಿಸಿಕೊಂಡರು.

ದೇರಳಕಟ್ಟೆ ವಿದ್ಯಾರತ್ನ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಕೆ.ರವೀಂದ್ರ ಶೆಟ್ಟಿ ಉಳಿದೊಟ್ಟು ಮಾತನಾಡಿ, ಹಿಂದು ಸಮಾಜದ ಬಗ್ಗೆ ಸಿಂಹಘರ್ಜನೆಯಾಗುತ್ತಿದ್ದ ಕೊಲ್ಯ ಶ್ರೀ, ಇತರ ಸಮಾಜವನ್ನು ಸಮಾನವಾಗಿ ಕಾಣುತ್ತಿದ್ದರು. ಅವರು ಹರಿಪಾದ ಸೇರಿದ ಬಳಿಕ ಕೊಲ್ಯ ಶ್ರೀ ಕ್ಷೇತ್ರ ಶೂನ್ಯವಾಗಿದೆಯಾದರೂ, ಅವರು ಅನುಸರಿಸಿದ ನಡೆ, ನುಡಿ ನಮಗೆ ಮಾದರಿಯಾಗಬೇಕು ಎಂದು ತಿಳಿಸಿದರು.

ನಿರಂತರ 18 ವರ್ಷ ಶಬರಿಮಲೆ ಯಾತ್ರೆ ಕೈಗೊಂಡಿದ್ದ ಕೊಲ್ಯ ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಜೊತೆ ಇಟ್ಟಿದ್ದ ಪರಿಪೂರ್ಣ ಸಂಬಂಧದ ಫಲವಾಗಿ ಶ್ರೀಗಳೂ ಹರಿಪಾದ ಸೇರಿದ ಸೇರಿದ 18ನೆ ದಿನ ಪುಣ್ಯಸ್ಮರಣೆ ನಡೆಯುತ್ತಿದೆ. ಶ್ರೀಗಳು ಜನಸಂಪರ್ಕ ಹಾಗೂ ದೂರವಾಣಿಯಲ್ಲಿ ಮಾತನಾಡುವವರಾಗಿದ್ದರೆ ಇಂದು ಶ್ರೀ ಕ್ಷೇತ್ರಕ್ಕೆ ಸಾಕಷ್ಟು ಆಸ್ತಿ, ಸಂಪತ್ತು ಇರುತ್ತಿತ್ತು. ವಿವೇಕಾನಂದರು ಶ್ರೇಷ್ಠ ಗುರುವನ್ನು ಹುಡುಕುತ್ತಾ ಹೋಗಿ ಶ್ರೀರಾಮಕೃಷ್ಣ ಪರಮಹಂಸರನ್ನು ಸ್ವೀಕರಿಸಿದಂತೆ, ಕೊಲ್ಯ ಶ್ರೀಗಳು ಅದೇ ಮಾದರಿ ಅನುಸರಿಸಿದರು, ಆದರೆ ಅವರಿಗೆ ಶ್ರೇಷ್ಠ ಶಿಷ್ಯರು ಸಿಗದ ಕಾರಣ ದೀಕ್ಷೆ ನೀಡಲಿಲ್ಲ ಎಂದು ಧಾರ್ಮಿಕ ಮುಖಂಡ ಕೃಷ್ಣ ಶಿವಕೃಪಾ ಕುಂಜತ್ತೂರು ತಿಳಿಸಿದರು.

ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಆಡಳಿತ ಮೊಕ್ತೇಸರ ಚಂದ್ರಹಾಸ ಅಡ್ಯಂತಾಯ ಅಧ್ಯಕ್ಷತೆ ವಹಿಸಿದ್ದರು.

ಅಧ್ಯಕ್ಷ ಸೀತಾರಾಮ ಶೆಟ್ಟಿ, ಸ್ವಾಮಿಗಳ ಪೂರ್ವಾಶ್ಮದ ಒಡನಾಡಿಗಳಾದ ಎಂ.ಪ್ರಕಾಶ್ ರೈ ದೆಪ್ಪುಣಿಗುತ್ತು, ಚಂದ್ರಶೇಖರ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು. ಪ್ರಧಾನ ಕಾರ್ಯದರ್ಶಿ ರಾಜೇಶ್ ಶೆಟ್ಟಿ ಪಜೀರುಗುತ್ತು ಕಾರ್ಯಕ್ರಮ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X