Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ವಿಮಾನ ಪ್ರಯಾಣಿಕರಿಗೆ ಬಂಪರ್ ಕೊಡುಗೆ

ವಿಮಾನ ಪ್ರಯಾಣಿಕರಿಗೆ ಬಂಪರ್ ಕೊಡುಗೆ

ವಾರ್ತಾಭಾರತಿವಾರ್ತಾಭಾರತಿ11 Jun 2016 11:42 PM IST
share

 ಹೊಸದಿಲ್ಲಿ, ಜೂ.11: ಐದು ಕೆ.ಜಿ.ವರೆಗೆ ಹೆಚ್ಚುವರಿ ಬ್ಯಾಗೇಜ್ ಒಯ್ಯುವುದಕ್ಕೆ ವಿಧಿಸುವ ಶುಲ್ಕದಲ್ಲಿ ಭಾರೀ ಕಡಿತ ಹಾಗೂ ವಿಮಾನಯಾನ ಸಂಸ್ಥೆಯು ಪ್ರಯಾಣಿಕರಿಗೆ ವಿಮಾನ ಏರಲು ನಿರಾಕರಿಸಿದಲ್ಲಿ ನೀಡಲಾಗುವ ಪರಿಹಾರಧನದ ಮೊತ್ತದಲ್ಲಿ ಭಾರೀ ಹೆಚ್ಚಳ ಸೇರಿದಂತೆ ಪ್ರಯಾಣಿಕರಿಗೆ ಭರಪೂರ ಕೊಡುಗೆಗಳನ್ನು ಕೇಂದ್ರ ನಾಗರಿಕ ವಾಯುಯಾನ ಸಚಿವಾಲಯವು ಶನಿವಾರ ಘೋಷಿಸಿದೆ. ವಿಕಲಾಂಗರು ಹಾಗೂ ರೋಗಿಗಳಿಗೆ ವಿಮಾನ ಹಾಗೂ ವಿಮಾನನಿಲ್ದಾಣಗಳಲ್ಲಿ ಕೆಲವು ವಿಶೇಷ ಸೌಲಭ್ಯಗಳನ್ನು ಒದಗಿಸುವುದಾಗಿಯೂ ಅದು ತಿಳಿಸಿದೆ.

  ಭಾರತದಿಂದ ಕಾರ್ಯನಿರ್ವಹಿಸುವ ಅಂತರ್‌ದೇಶೀಯ ಹಾಗೂ ಅಂತಾರಾಷ್ಟ್ರೀಯ ವಿಮಾನಯಾನ ಸಂಸ್ಥೆಗಳು, ಟಿಕೆಟ್ ರದ್ದತಿಗಾಗಿ ಪ್ರಯಾಣಿಕರಿಗೆ ವಿಧಿಸುವ ಶುಲ್ಕದ ಮೊತ್ತವು ಟಿಕೆಟ್‌ನ ಮೂಲ ದರಕ್ಕಿಂತ ಹೆಚ್ಚಾಗಿರಕೂಡದು. ಕೆಲವು ಪ್ರಕರಣಗಳಲ್ಲಿ ವಿಮಾನಯಾನ ಸಂಸ್ಥೆಗಳು ಟಿಕೆಟ್ ರದ್ದತಿಗಾಗಿ, ಮೂಲ ಟಿಕೆಟ್ ದರಕ್ಕಿಂತಲೂ ಅಧಿಕ ಶುಲ್ಕವನ್ನು ವಿಧಿಸುತ್ತಿರುವ ಹಿನ್ನೆಲೆಯಲ್ಲಿ ನಾಗರಿಕ ವಾಯುಯಾನ ಇಲಾಖೆ (ಡಿಜಿಸಿಎ)ಯ ಈ ಕ್ರಮವನ್ನು ಕೈಗೊಂಡಿದೆ.
  ವಿಮಾನನಿಲ್ದಾಣ ಅಭಿವೃದ್ಧಿ ಶುಲ್ಕ ಅಥವಾ ಪ್ರಯಾಣಿಕ ಸೇವಾ ಶುಲ್ಕ ಸೇರಿದಂತೆ ರದ್ದು ಗೊಂಡ ಟಿಕೆಟ್‌ನಲ್ಲಿ ನಮೂದಿಸಲಾದ ಎಲ್ಲಾ ರೀತಿಯ ಶಾಸನಾತ್ಮಕ ತೆರಿಗೆಗಳನ್ನು ಗ್ರಾಹಕನಿಗೆ ಮರುಪಾವತಿಸುವಂತೆ ಸರಕಾರವು ಏರ್‌ಲೈನ್ಸ್ ಕಂಪೆನಿಗಳಿಗೆ ಸೂಚಿಸಿದೆ. ಅಂತರ್‌ದೇಶೀಯ ವಿಮಾನಯಾನದಲ್ಲಿ 15 ದಿನಗಳೊಳಗೆ ಹಾಗೂ ಅಂತಾರಾಷ್ಟ್ರೀಯ ಯಾನದಲ್ಲಿ 30 ಕೆಲಸದ ದಿನಗಳೊಳಗೆ ಮರುಪಾವತಿ ಪ್ರಕ್ರಿಯೆ ಪೂರ್ಣಗೊಳ್ಳಬೇಕೆಂದು ಅದು ಆದೇಶಿಸಿದೆ.
   ‘ದಿ ಹಿಂದೂ’ ಆಂಗ್ಲ ದಿನಪತ್ರಿಕೆಯು ಈ ವಾರದ ಆರಂಭದಲ್ಲಿ ಪ್ರಕಟಿಸಿದ ವರದಿಯೊಂದರ ಪ್ರಕಾರ, ಜೂನ್ 15 ರಿಂದ ವಿಮಾನದಲ್ಲಿ 5 ಕೆ.ಜಿ. ಹೆಚ್ಚುವರಿ ಬ್ಯಾಗೇಜ್ ಒಯ್ಯುವ ಪ್ರಯಾಣಿಕರಿಗೆ ಏರ್‌ಲೈನ್ಸ್ ಸಂಸ್ಥೆಗಳು ಕೇವಲ 100 ರೂ.ಹೆಚ್ಚುವರಿ ಶುಲ್ಕವನ್ನು ವಿಧಿಸಬಹುದಾಗಿದೆ. ಪ್ರಸ್ತುತ ಪ್ರಯಾಣಿಕರು 15 ಕೆ.ಜಿ. ಲಗ್ಗೇಜನ್ನು ಉಚಿತವಾಗಿ ಕೊಂಡೊಯ್ಯಬಹುದಾಗಿದೆ. ಆದರೆ ಸರಕಾರಿ ಸ್ವಾಮ್ಯದ ಏರ್‌ಇಂಡಿಯಾ ಹಾಗೂ ಇಂಡಿಯನ್ ಏರ್‌ಲೈನ್ಸ್‌ಗಳಲ್ಲಿ ಪ್ರ.ಯಾಣಿಕರು ಯಾವುದೇ ಶುಲ್ಕವಿಲ್ಲದೆ 25 ಕೆ.ಜಿ. ಲಗ್ಗೇಜನ್ನು ಒಯ್ಯಬಹುದಾಗಿದೆ. ಆದರೆ ಖಾಸಗಿ ಏರ್‌ಲೈನ್ಸ್ ಸಂಸ್ಥೆಗಳು ತಮ್ಮ ವಿಮಾನಗಳಲ್ಲಿ ಪ್ರತಿ ಕೆ.ಜಿ. ಹೆಚ್ಚುವರಿ ಲಗ್ಗೇಜ್‌ಗೆ 250ರಿಂದ 350 ರೂ. ಶುಲ್ಕವನ್ನು ವಿಧಿಸುತ್ತವೆ.

ವಿಮಾನವೇರಲು ನಿರಾಕರಿಸಿದಲ್ಲಿ ಏರ್‌ಲೈನ್ ಸಂಸ್ಥೆಗಳಿಗೆ ದಂಡ
  ವಿಮಾನದ ನಿಗದಿತ ನಿರ್ಗಮನ ಸಮಯಕ್ಕೆ ಮೊದಲು ವಿಮಾನನಿಲ್ದಾಣದಲ್ಲಿ ಹಾಜರಿದ್ದ ಪ್ರಯಾಣಿಕರಿಗೆ, ಏರ್‌ಲೈನ್ಸ್ ಸಂಸ್ಥೆಯು ವಿಮಾನವೇರಲು ಅನುಮತಿ ನಿರಾಕರಿಸಿದಲ್ಲಿ ಅವರು ಮೂಲ ಟಿಕೆಟ್ ದರ ಹಾಗೂ ಟಿಕೆಟ್‌ನಲ್ಲಿ ನಮೂದಿಸಲಾದ ಇಂಧನ ಶುಲ್ಕದ ಎರಡು ಪಟ್ಟು ಅಧಿಕ ಮೊತ್ತವನ್ನು 10 ಸಾವಿರ ರೂ. ಮೀರದಂತೆ ಪರಿಹಾರವಾಗಿ ನೀಡಬೇಕಾಗುತ್ತದೆ. ಏರ್‌ಲೈನ್ಸ್ ಸಂಸ್ಥೆಯು ಪರಿಹಾರದ ಮೊತ್ತವನ್ನು ಮುಂದಿನ ವಿಮಾನಯಾನದ 24 ತಾಸುಗಳೊಳಗೆ ನೀಡಬೇಕಾಗುತ್ತದೆ. ಒಂದು ವೇಳೆ ಪ್ರಯಾಣಿಕರಿಗೆ ಅವರು ಪ್ರಯಾಣಿಸಬೇಕಿದ್ದ ವಿಮಾನವು ನಿರ್ಗಮಿಸಿದ 24 ತಾಸುಗಳ ಬಳಿಕ ಪರ್ಯಾಯ ವಿಮಾನಯಾನದ ವ್ಯವಸ್ಥೆ ಮಾಡಿದಲ್ಲಿ, ಆಗ ಅವರಿಗೆ ಏರ್‌ಲೈನ್ಸ್ ಸಂಸ್ಥೆಗಳು ಟಿಕೆಟ್‌ನ ಮೂಲದರ ಹಾಗೂ ವಿಮಾನ ಇಂಧನ ಶುಲ್ಕದ ನಾಲ್ಕು ಪಟ್ಟು ಅಧಿಕ ಮೊತ್ತವನ್ನು ಪಾವತಿಸಬೇಕಾಗುತ್ತದೆ.
 ಆದರೆ ಪ್ರಯಾಣಿಕರಿಗೆ ಅವರು ಪ್ರಯಾಣಿಸ ಬೇಕಿದ್ದ ವಿಮಾನವು ನಿರ್ಗಮಿಸಿದ ಒಂದು ತಾಸಿನೊಳಗೆ ಬೇರೊಂದು ವಿಮಾನದಲ್ಲಿ ಪ್ರಯಾಣಿಸಲು ವ್ಯವಸ್ಥೆ ಮಾಡಿದಲ್ಲಿ, ಆಗ ಅವರಿಗೆ ಪರಿಹಾರವನ್ನು ನೀಡಬೇಕಾಗಿಲ್ಲ.
ಭಿನ್ನ ಸಾಮರ್ಥ್ಯದ ಪ್ರಯಾಣಿಕರು
   ಆ್ಯಂಬುಲಿಫ್ಟ್ (ರೋಗಿಗಳು, ಭಿನ್ನಸಾಮರ್ಥ್ಯ ದವರನ್ನು ವಿಮಾನ ಹತ್ತಿಸಲು ಬಳಸುವ ವಾಹನ) ಹಾಗೂ ಏರೋಬ್ರಿಡ್ಜ್ ಸೌಲಭ್ಯಗಳಿಲ್ಲದ ವಿಮಾನನಿಲ್ದಾಣಗಳಲ್ಲಿ ಮೆಟ್ಟಲುಗಳಲ್ಲಿಯೂ ಎಳೆದೊಯ್ಯಬಹುದಾದ ಗಾಲಿಕುರ್ಚಿಯನ್ನು ಭಿನ್ನಸಾಮರ್ಥ್ಯದ ಪ್ರಯಾಣಿಕರಿಗೆ ಒದಗಿಸುವ ಪ್ರಸ್ತಾಪವನ್ನು ಕೇಂದ್ರ ಸರಕಾರದ ಮುಂದಿಟ್ಟಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X