Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಪತಿ ಸಜೀವ ದಹನವಾಗುತ್ತಿದ್ದರೆ ಟಿವಿ...

ಪತಿ ಸಜೀವ ದಹನವಾಗುತ್ತಿದ್ದರೆ ಟಿವಿ ನೋಡುತ್ತಿದ್ದ ಪತ್ನಿ!

ವಾರ್ತಾಭಾರತಿವಾರ್ತಾಭಾರತಿ12 Jun 2016 9:33 AM IST
share
ಪತಿ ಸಜೀವ ದಹನವಾಗುತ್ತಿದ್ದರೆ ಟಿವಿ ನೋಡುತ್ತಿದ್ದ ಪತ್ನಿ!

ಕೊಲ್ಕತ್ತಾ: ಅಗ್ನಿ ಆಕಸ್ಮಿಕವೊಂದರ ಬಗ್ಗೆ ಮಾಹಿತಿ ಬಂದ ತಕ್ಷಣ ಅಗ್ನಿಶಾಮಕ ದಳ ಸಿಬ್ಬಂದಿ ಧಾವಿಸಿ, ಬೆಂಕಿಯ ಕೆನ್ನಾಲಿಗೆಯಲ್ಲಿ ಸಿಕ್ಕಿಹಾಕಿಕೊಂಡಿದ್ದ ವೃದ್ಧದಂಪತಿಯನ್ನು ರಕ್ಷಿಸಲು ಹರಸಾಹಸ ಮಾಡಿದರು. ನೆರೆಹೊರೆಯವರು ಆತಂಕದಿಂದ ಅಪಾರ್ಟ್ ಮೆಂಟ್ ನ ಎದುರು ಸೇರಿದ್ದರು. ಕೊನೆಗೂ ಬಾಗಿಲು ಒಡೆದು ಅಗ್ನಿಶಾಮಕ ಸಿಬ್ಬಂದಿ ಒಳ ಪ್ರವೇಶಿಸಿದಾಗ ಕಂಡ ದೃಶ್ಯ ಅವರನ್ನು ದಂಗುಬಡಿಸಿತು. ಪತಿ ಬೆಂಕಿಯಲ್ಲಿ ಸಿಕ್ಕಿಹಾಕಿಕೊಂಡು ಸಜೀವ ದಹನವಾಗುತ್ತಿದ್ದರೆ, ಪತ್ನಿ ಪಕ್ಕದ ಕೊಠಡಿಯಲ್ಲಿ ಆರಾಮವಾಗಿ ಕುಳಿತು ಟಿವಿ ನೋಡುತ್ತಿದ್ದಳು.

ಇದು ಯಾವುದೋ ಸಿನಿಮಾ ಕಥೆಯಲ್ಲ. ಈ ಸತ್ಯಘಟನೆ ನಡೆದದ್ದು ಶನಿವಾರ ಮಧ್ಯರಾತ್ರಿ 12.30ರ ಸುಮಾರಿಗೆ ನಗರದ ಮಾಣಿಕ್ತಾಲ ಸರಕಾರಿ ಕಾಲೋನಿಯಲ್ಲಿ. 63 ವರ್ಷದ ವೃದ್ಧ ಘಟನೆಯಲ್ಲಿ ಮೃತಪಟ್ಟಿದ್ದರೆ, 57ರ ಪತ್ನಿ ಈಗ ಪೊಲೀಸ್ ಅತಿಥಿ.
ಇಷ್ಟೇ ಅಲ್ಲ; ಪೊಲೀಸರು ಸ್ಥಳಕ್ಕೆ ಆಗಮಿಸಿದಾಗ ಇನ್ನಷ್ಟು ಕುತೂಹಲಕರ ವಿಚಾರ ಬೆಳಕಿಗೆ ಬಂತು. ಈ ವೃದ್ಧದಂಪತಿಗೆ ಸೇರಿದ ಮಾರುತಿ ಆಲ್ಟೊ ಕಾರಿನಲ್ಲಿ ಹಳೆಯ ಪೊಲೀಸ್ ಹೆಲ್ಮೆಟ್, ವೈರ್ಲೆಸ್ ರೇಡಿಯೊ ಮತ್ತಿತರ ವಸ್ತುಗಳು ಪತ್ತೆಯಾಗಿವೆ. ಕಾರಿಗೆ ಪೊಲೀಸ್ ಎಂಬ ಸ್ಟಿಕ್ಕರ್ ಕೂಡಾ ಹಚ್ಚಲಾಗಿದೆ. ಪ್ರಕರಣ ಬೇಧಿಸಲು ಪೊಲೀಸರು ಪತ್ನಿಯನ್ನು ವಿಚಾರಣೆಗೆ ಗುರಿಪಡಿಸಿದ್ದು, ಸುತಾಪಾ ಬಾರಟ್ ಪೊಲೀಸ್ ವಶದಲ್ಲಿದ್ದಾರೆ.

ಸಿಇಎಸ್ಇಯಲ್ಲಿ ಸೇವೆಯಲ್ಲಿದ್ದ ಪತಿ ರಂಜಿತ್ ಕುಮಾರ್ ಬಾರಟ್ (63) ಸರಕಾರಿ ಕಾಲೋನಿಯ ಜಿ ವಿಂಗ್ ನ ಅಪಾರ್ಟ್ ಮೆಂಟ್ ನಲ್ಲಿ ಪತ್ನಿ ಜತೆ ವಾಸವಿದ್ದರು. ರಾತ್ರಿ ಮಲಗುವ ಕೋಣೆಯಿಂದ ದಟ್ಟ ಹೊಗೆ ಬರುತ್ತಿದ್ದುದನ್ನು ಗಮನಿಸಿದ ನೆರೆಯವರು ಪೊಲೀಸರಿಗೆ ಮತ್ತು ಅಗ್ನಿಶಾಮಕ ದಳಕ್ಕೆ ಸುದ್ದಿ ಮುಟ್ಟಿಸಿದರು. ಅಚ್ಚರಿಯ ಸಂಗತಿಯೆಂದರೆ ಪತಿ ಅಥವಾ ಪತ್ನಿ ಯಾರೂ ನೆರವಿಗೆ ಕೂಗಿಕೊಳ್ಳಲಿಲ್ಲ. 

ಅಗ್ನಿಶಾಮಕ ದಳ ಸಿಬ್ಬಂದಿ ಬಂದು ಮಹಿಳೆಯನ್ನು ರಕ್ಷಿಸಿದರು. ಆದರೆ ಪತಿ ಆಗಲೇ ಸಜೀವ ದಹನವಾಗಿದ್ದರು. ಪೊಲೀಸರು ಆಕೆಯನ್ನು ಪ್ರಶ್ನಿಸಿದಾಗ ಮೊದಲು, ಸಹಾಯಕ್ಕಾಗಿ ನಾನು ಕೂಗಿಕೊಂಡರೆ ಯಾರೂ ಬರಲಿಲ್ಲ ಎಂದು ಹೇಳಿಕೆ ನೀಡಿದಳು. ಮನೆಯನ್ನು ಒಳಗಿನಿಂದ ಏಕೆ ಲಾಕ್ ಮಾಡಲಾಗಿತ್ತು ಎಂದು ಪ್ರಶ್ನಿಸಿದಾಗ, ಪತಿಯ ಕೊಠಡಿ ಬಳಿಗೆ ಹೋಗಲು ಭಯವಾಯಿತು ಎಂಬ ಉತ್ತರ ಬಂತು. ಮತ್ತೆ ಹೇಳಿಕೆ ಬದಲಿಸಿ, ಗಂಡ ನನ್ನನ್ನು ಹತ್ಯೆ ಮಾಡಲು ಮುಂದಾಗಿದ್ದರು. ಇದರಿಂದ ಭಯವಾಯಿತು ಎಂದು ಹೇಳಿಕೆ ನೀಡಿದ್ದು, ವಿಚಾರಣೆ ಮುಂದುವರಿದಿದೆ.
 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X