Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ರಾಜ್ಯಸಭಾ ಚುನಾವಣೆಗಳಲ್ಲಿ ‘ಕುತಂತ್ರ’ :...

ರಾಜ್ಯಸಭಾ ಚುನಾವಣೆಗಳಲ್ಲಿ ‘ಕುತಂತ್ರ’ : ಹೂಡಾ ಆರೋಪ,ತನಿಖೆಗೆ ಆಗ್ರಹ

ವಾರ್ತಾಭಾರತಿವಾರ್ತಾಭಾರತಿ12 Jun 2016 7:43 PM IST
share
ರಾಜ್ಯಸಭಾ ಚುನಾವಣೆಗಳಲ್ಲಿ ‘ಕುತಂತ್ರ’ : ಹೂಡಾ ಆರೋಪ,ತನಿಖೆಗೆ ಆಗ್ರಹ

ಚಂಡಿಗಡ,ಜೂ.12: ಹರ್ಯಾಣದಲ್ಲಿ ರಾಜ್ಯಸಭಾ ಚುನಾವಣೆಗಳ ಮತ ಎಣಿಕೆ ಯಲ್ಲಿ ‘ಕುತಂತ್ರ’ ನಡೆದಿದೆಯೆಂದು ಆರೋಪಿಸಿರುವ ಮಾಜಿ ಮುಖ್ಯಮಂತ್ರಿ ಹಾಗೂ ಕಾಂಗ್ರೆಸ್ ನಾಯಕ ಭೂಪಿಂದರ್ ಹೂಡಾ ಅವರು ಚುನಾವಣಾ ಆಯೋಗವು ಈ ಬಗ್ಗೆ ಸಮಗ್ರ ತನಿಖೆ ನಡೆಸಬೇಕೆಂದು ಆಗ್ರಹಿಸಿದ್ದಾರೆ.

 ಮತದಾನ ಮಾಡಲು ಬಳಸಲಾಗಿದ್ದ ಪೆನ್‌ಗಳ ವಿಧಿವಿಜ್ಞಾನ ಪರೀಕ್ಷೆ ಸೇರಿದಂತೆ ತನಿಖೆಗೆ ಅವರು ಒತ್ತಾಯಿಸಿದ್ದಾರೆ. ನಿನ್ನೆ ನಡೆದ ಮತ ಎಣಿಕೆ ಸಂದರ್ಭದಲ್ಲಿ 14 ಕಾಂಗ್ರೆಸ್ ಶಾಸಕರ ಮತಗಳನ್ನು ರದ್ದುಗೊಳಿಸಲಾಗಿದ್ದರಿಂದ ಬಿಜೆಪಿ ಬೆಂಬಲಿತ ಪಕ್ಷೇತರ ಅಭ್ಯರ್ಥಿಯಾಗಿದ್ದ ಝೀ ಟಿವಿಯ ಅಧ್ಯಕ್ಷ ಸುಭಾಷಚಂದ್ರ ಅವರು ಗೆಲುವು ಸಾಧಿಸಿದ್ದರೆ, ಕಾಂಗ್ರೆಸ್ ಮತ್ತು ಐಎನ್‌ಎಲ್‌ಡಿ ಬೆಂಬಲಿತ ಪಕ್ಷೇತರ ಅಭ್ಯರ್ಥಿ ಆರ್.ಕೆ.ಆನಂದ ಪರಾಭವಗೊಂಡಿದ್ದರು.

ಅಸಿಂಧುಗೊಂಡ 14 ಮತಗಳು ಕಾಂಗ್ರೆಸ್ ಶಾಸಕರದ್ದು ಎಂದು ಹರ್ಯಾಣದ ಶಿಕ್ಷಣ ಸಚಿವ ರಾಮ ಬಿಲಾಸ್ ಶರ್ಮಾ ಮತ್ತು ಪ್ರತಿಪಕ್ಷ ನಾಯಕ ಅಭಯ ಚೌಟಾಲಾ ಅವರು ಹೇಳಿದ ಬಳಿಕ ಕಾಂಗ್ರೆಸ್ ಮತ್ತು ಐಎನ್‌ಎಲ್‌ಡಿ ಪರಸ್ಪರರತ್ತ ಬೆಟ್ಟು ತೋರಿಸಿದ್ದವು.

ಕಾಂಗ್ರೆಸ್ ಶಾಸಕರು ಮತದಾನಕ್ಕೆಂದೇ ಮೀಸಲಿರಿಸಿದ್ದ ಪೆನ್ನನ್ನು ಬಿಟ್ಟು ಬೇರೆ ಪೆನ್ ಬಳಸಿದ್ದರಿಂದ 14 ಮತಗಳು ಅಸಿಂಧುಗೊಂಡಿವೆ ಎಂದು ಆನಂದ್ ಸೋಲಿನ ಬಳಿಕ ಚೌತಾಲಾ ಆರೋಪಿಸಿದ್ದರು.

ಐಎನ್‌ಎಲ್‌ಡಿಯ ಓರ್ವರನ್ನು ಹೊರತು ಪಡಿಸಿ ಇತರೆಲ್ಲ 18 ಶಾಸಕರು ತನ್ನ ಪರವಾಗಿ ಮತದಾನ ಮಾಡಿದ್ದಾರೆ. ಆದರೆ ಹೂಡಾ ಮತ್ತು ಅವರ ಕಾಂಗ್ರೆಸ್ ಪಕ್ಷ ತನ್ನನ್ನು ವಂಚಿಸಿದೆ ಎಂದು ಆನಂದ ಕೂಡ ದೂರಿದ್ದರು.

 ನಮ್ಮ ಶಾಸಕರು ತಮ್ಮ ಪೆನ್ ಮತ್ತು ಮೊಬೈಲ್‌ಗಳನ್ನು ಹೊರಗೆಯೇ ಬಿಟ್ಟು ಮತದಾನಕ್ಕೆ ತೆರಳಿದ್ದರು. ಒಳಗೆ ಮತದಾನಕ್ಕೆಂದು ಮೀಸಲಿರಿಸಿದ್ದ ಪೆನ್ನನ್ನೇ ಅವರು ಬಳಸಿದ್ದರು. ಮತಪತ್ರವನ್ನು ಪೆಟ್ಟಿಗೆಯಲ್ಲಿ ಹಾಕುವ ಮುನ್ನ ಅವರು ನಮ್ಮ ಚುನಾವಣಾ ವೀಕ್ಷಕ ಬಿ.ಕೆ.ಹರಿಪ್ರಸಾದ್ ಅವರಿಗೆ ಮತಗಳನ್ನೂ ತೋರಿಸಿದ್ದರು ಎಂದು ಹೂಡಾ ಸಮಜಾಯಿಷಿ ನೀಡಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X