Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಉಪ್ಪಿನಂಗಡಿ : ತಿರುಪತಿ ಯಾತ್ರಾರ್ಥಿಯ...

ಉಪ್ಪಿನಂಗಡಿ : ತಿರುಪತಿ ಯಾತ್ರಾರ್ಥಿಯ ನಗದು ಲೂಟಿ

ವಾರ್ತಾಭಾರತಿವಾರ್ತಾಭಾರತಿ12 Jun 2016 8:08 PM IST
share

ಉಪ್ಪಿನಂಗಡಿ ,ಜೂ.12: ನೇತ್ರಾವತಿ ನದಿಗೆ ಸ್ನಾನಕ್ಕೆಂದು ತೆರಳಿದ ವ್ಯಕ್ತಿಗೆ ತಂಡವೊಂದು ಹಲ್ಲೆ ನಡೆಸಿ, ಆತನಲ್ಲಿದ್ದ ಮೊಬೈಲ್ ಫೋನ್, ನಗದು ಲೂಟಿ ಮಾಡಿದ ಘಟನೆ ಉಪ್ಪಿನಂಗಡಿಯಲ್ಲಿ ಶನಿವಾರ ನಡೆದಿದೆ. ಈ ಕಳ್ಳರ ತಂಡದ ಓರ್ವನನ್ನು ಸಾರ್ವಜನಿಕರು ಹಿಡಿದು ಪೊಲೀಸರಿಗೊಪ್ಪಿಸಿದ್ದು, ಇನ್ನೊಬ್ಬಾತ ಪರಾರಿಯಾಗಿದ್ದಾನೆ.

ಸಾರ್ವಜನಿಕರ ಕೈಗೆ ಬಂಟ್ವಾಳ ಮೂಲದ ಅಭಿಜಿತ್ ಸಿಕ್ಕಿ ಬಿದ್ದಿದ್ದಾನೆ. ಈತ ಹಾಗೂ ಇನ್ನೊಬ್ಬಾತ ವ್ಯಕ್ತಿಯೋರ್ವರನ್ನು ದರೋಡೆ ನಡೆಸಿದ್ದರು.

  ತಿರುಪತಿ ಯಾತ್ರೆಗೆ ತೆರಳಿದ ಕಡಬ ಮೂಲದ ವಿಶ್ವನಾಥ ಪೂಜಾರಿಯವರು ಶನಿವಾರ ಮುಂಜಾನೆ ಉಪ್ಪಿನಂಗಡಿಯಲ್ಲಿ ಬಂದಿಳಿದಿದ್ದು, ತನ್ನೂರಿಗೆ ತೆರಳಲು ಆ ಸಂದರ್ಭ ಯಾವುದೇ ಬಸ್ ಇಲ್ಲದ್ದರಿಂದ ನೇತ್ರಾವತಿ ನದಿಗೆ ತೆರಳಿ ಸ್ನಾನ ಮಾಡಿ, ಬಳಿಕ ದೇವಸ್ಥಾನಕ್ಕೆ ತೆರಳಲು ನಿರ್ಧರಿಸಿದ್ದರು. ಸ್ನಾನಕ್ಕೆಂದು ಉಪ್ಪಿನಂಗಡಿ ಬಸ್ ನಿಲ್ದಾಣ ಸಮೀಪದ ನೇತ್ರಾವತಿ ಸೇತುವೆಯ ಬಳಿಯಿಂದ ನದಿಗಿಳಿದ್ದರು. ಕತ್ತಲಲ್ಲಿ ಅಲ್ಲಿಗೆ ಬಂದ ಯುವಕರಿಬ್ಬರು ವಿಶ್ವನಾಥ ಪೂಜಾರಿಯವರಿಗೆ ಹಿಗ್ಗಾಮುಗ್ಗಾ ಥಳಿಸಿ, ಅವರಲ್ಲಿದ್ದ ಮೊಬೈಲ್ ಫೋನ್, ನಗದನ್ನು ಕಸಿದುಕೊಂಡು ದೇವಸ್ಥಾನದ ಕಡೆಗೆ ನದಿಯಲ್ಲೇ ಪರಾರಿಯಾದರು. ವಿಶ್ವನಾಥ ಪೂಜಾರಿಯವರು ಈ ಸಂದರ್ಭ ಬೊಬ್ಬಿಟ್ಟಿದ್ದು, ಇದನ್ನು ಕೇಳಿ ನದಿಯ ಆಚೆ ಬದಿಯಲ್ಲಿದ್ದ ವ್ಯಕ್ತಿಯೋರ್ವರು ಬಸ್‌ನಿಲ್ದಾಣದ ಬಳಿಗೆ ಬಂದು ವಿಶ್ವನಾಥ ಪೂಜಾರಿಯವರನ್ನು ವಿಚಾರಿಸಿದಾಗ ನದಿಯಲ್ಲಿ ಲೂಟಿಕೋರರ ತಂಡವಿರುವುದು ತಿಳಿದುಬಂತು. ಕೂಡಲೇ ಸ್ಥಳೀಯ ಕೆಲವರು ಈ ಕಳ್ಳರ ಪತ್ತೆಗೆ ಮುಂದಾಗಿದ್ದು, ಸೀದಾ ದೇವಸ್ಥಾನದ ಬಳಿ ತೆರಳಿದರು. ಈ ಸಂದರ್ಭ ಅಲ್ಲಿ ಇದೇ ಯುವಕರಿರುವುದು ಕಂಡು ಬಂದು ಅವರನ್ನು ಬೆನ್ನಟ್ಟಿದ್ದಾಗ ಓರ್ವ ಓಡಿ ತಪ್ಪಿಸಿಕೊಂಡಿದ್ದು, ಇನ್ನೋರ್ವ ರಥಬೀದಿಯ ಗಣಪತಿ ದೇವಸ್ಥಾನದ ಬಳಿ ಸಾರ್ವಜನಿಕರ ಕೈಗೆ ಸಿಕ್ಕಿಬಿದ್ದಿದ್ದಾನೆ. ಈತನನ್ನು ವಿಚಾರಿಸಿದಾಗ ಈತನ ಬಳಿ ಐದು ಮೊಬೈಲ್ ಇರುವುದು ಪತ್ತೆಯಾಗಿದೆ. ಬಳಿಕ ಈತನನ್ನು ಉಪ್ಪಿನಂಗಡಿ ಪೊಲೀಸರಿಗೊಪ್ಪಿಸಲಾಯಿತು. ಈತನನ್ನು ವಶಕ್ಕೆ ಪಡೆದುಕೊಂಡ ಉಪ್ಪಿನಂಗಡಿ ಪೊಲೀಸರು ಬಳಿಕ ಯುವಕರಿಂದ ಲೂಟಿಗೊಳಗಾಗಿದ್ದ ವಿಶ್ವನಾಥ ಪೂಜಾರಿಯವರನ್ನು ಕರೆದು ಅವರ ಮೊಬೈಲ್ ಹಾಗೂ ನಗದನ್ನು ವಾಪಸ್ ನೀಡಿ ಕಳುಹಿಸಿದ್ದಾರೆ. ಪೊಲೀಸರ ನಿರ್ಲಕ್ಷ್ಯ: ಆರೋಪಿಯನ್ನು ಸಾರ್ವಜನಿಕರೇ ಹಿಡಿದು ಪೊಲೀಸರಿಗೊಪ್ಪಿಸಿದರೂ ಈ ಪ್ರಕರಣದ ಬಗ್ಗೆ ಪೊಲೀಸರು ನಿರ್ಲಕ್ಷ್ಯ ವಹಿಸಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.

   ಒಂಟಿ ವ್ಯಕ್ತಿಗಳು ನದಿ ದಡದಲ್ಲಿ ಲೂಟಿಗೊಳಗಾದ ಪ್ರಕರಣಗಳು ಇದಕ್ಕೂ ಮೊದಲು ಇಲ್ಲಿ ನಡೆದಿತ್ತು. ಆದರೆ ಈ ಬಗ್ಗೆ ದೂರು ನೀಡಲು ಯಾರೂ ಮುಂದಾಗುತ್ತಿರಲಿಲ್ಲ. ಕಡವಿನ ಬಾಗಿಲು, ಬನ್ನೆಂಗಳ ಮತ್ತಿತರ ಕಡೆಗಳಿಗೆ ತೆರಳಲು ನೇತ್ರಾವತಿ ನದಿಯನ್ನು ದಾಟಿ ಹೋಗುವುದು ಹತ್ತಿರದ ದಾರಿಯಾಗಿದೆ. ಆದ್ದರಿಂದ ಹಲವರು ರಾತ್ರಿ ಸಮಯದಲ್ಲಿ ಇದೇ ದಾರಿಯಾಗಿ ತೆರಳುತ್ತಾರೆ. ಇದರಲ್ಲಿ ದರೋಡೆಕೋರರ ತಂಡದ ದೊಡ್ಡ ಜಾಲವೇ ಇರುವ ಶಂಕೆಯಿದ್ದು, ರಾತ್ರಿ ಸಮಯದಲ್ಲಿ ನೇತ್ರಾವತಿ ನದಿ ದಡದಲ್ಲಿಯೇ ಬೀಡು ಬಿಟ್ಟು ಒಂಟಿ ವ್ಯಕ್ತಿಗಳನ್ನು ಲೂಟಿ ಮಾಡುವ ಕಾಯಕವನ್ನೇ ಇವರು ಮಾಡಿಕೊಂಡಿರುವ ಶಂಕೆ ಇದೆ. ಆದ್ದರಿಂದ ಸಾರ್ವಜನಿಕರು ಹಿಡಿದು ಕೊಟ್ಟ ಯುವಕನ ಮೇಲೆ ಸಾಮಾನ್ಯ ಪಿಕ್‌ಪಾಕೆಟ್ ಪ್ರಕರಣ ದಾಖಲಿಸಿ, ಬಿಟ್ಟು ಬಿಡದೇ, ಈ ಬಗ್ಗೆ ತೀವ್ರ ತನಿಖೆ ನಡೆಸಿದರೆ, ಸತ್ಯಾಂಶ ಹೊರಬರಲು ಸಾಧ್ಯ ಎಂದು ಸಾರ್ವಜನಿಕರು ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X