ಜೂ. 21ರಂದು ಬಿಷಪ್ ಅಲೋಷಿಯಸ್ ಪಾವ್ಲ್ ಡಿಸೋಜರಿಗೆ ಪೌರಸನ್ಮಾನ: ಜೆ.ಆರ್.ಲೋಬೊ

ಮಂಗಳೂರು,ಜೂ .13:ಮಂಗಳೂರು ಕ್ರೈಸ್ತ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷ ಅತೀ ವಂ.ಡಾ.ಅಲೋಶಿಯಸ್ ಪಾವ್ಲ್ ಡಿಸೋಜ ಅವರು 75 ವರ್ಷಗಳನ್ನು ಪೂರೈಸುತ್ತಿರುವ ಪ್ರಯುಕ್ತ ಜೂ.21 ರಂದು ಅಪರಾಹ್ನ 3:30ಕ್ಕೆ ಮಂಗಳೂರು ಜನರಿಂದ ಪೌರ ಸನ್ಮಾನವನ್ನು ಏರ್ಪಡಿಸಲಾಗಿದೆ ಎಂದು ಶಾಸಕ ಜೆ.ಆರ್.ಲೋಬೊ ಹೇಳಿದ್ದಾರೆ.
ನಗರದ ಬಿಷಪ್ಹೌಸ್ನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮನಪಾ ಮೇಯರ್ ಕೆ. ಹರಿನಾಥ್ರ ಅಧ್ಯಕ್ಷತೆಯಲ್ಲಿ ಪೌರಸನ್ಮಾನ ನಡೆಯುತ್ತಿದ್ದು ಮೆರವಣಿಗೆ ಮೂಲಕ ಬಿಷಪ್ ಅವರನ್ನು ವೇದಿಕೆಗೆ ಕರೆತರಲಾಗುವುದು.
ಕಾರ್ಯಕ್ರಮದಲ್ಲಿ ನಿಟ್ಟೆ ವಿಶ್ವವಿದ್ಯಾನಿಲಯದ ನಿವೃತ್ತ ಉಪಕುಲಪತಿ ಡಾ.ಎಂ.ಶಾಂತರಾಮ್ ಶೆಟ್ಟಿ ಅಭಿನಂದನಾ ಭಾಷಣ ಮಾಡಲಿದ್ದಾರೆ. ಬೆಂಗಳೂರಿನ ಆರ್ಚ್ ಬಿಷಪ್ ಡಾ.ಬರ್ನಡ್ ಮೊರಾಸ್, ರಾಮಕೃಷ್ಣ ಮಠದ ಸ್ವಾಮಿ ಜಿತಕಾಮಾನಂದಜಿ, ದ.ಕ ಜಿಲ್ಲಾ ಖಾಝಿ ಅಲ್ ಹಾಜ್ ತ್ವಾಕ ಅಹ್ಮದ್ ಮುಸ್ಲಿಯಾರ್ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿರುವರು ಎಂದು ಹೇಳಿದರು.
ಪತ್ರಿಕಾಗೋಷ್ಠಿಯಲ್ಲಿ ವಿಧಾನಪರಿಷತ್ ಸದಸ್ಯ ಐವನ್ ಡಿಸೋಜ, ಕಾರ್ಯಕ್ರಮ ಸಂಚಾಲಕ ಆಳ್ವಾಸ್ ಶಿಕ್ಷಣ ಸಮೂಹ ಸಂಸ್ಥೆ ಅಧ್ಯಕ್ಷ ಡಾ.ಎಂ. ಮೋಹನ್ ಆಳ್ವ, ಜೆ.ಬಿ.ಕ್ರಾಸ್ತ , ಎಂ.ಪಿ. ನೊರೊನ್ಹಾ, ರಾಯ್ ಕ್ಯಾಸ್ಟಲಿನೋ ಉಪಸ್ಥಿತರಿದ್ದರು.







