Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಆಧಾರ್ ಜೋಡಣೆಗೆ ಜೂ.30ರ ವರೆಗೆ ಅವಧಿ...

ಆಧಾರ್ ಜೋಡಣೆಗೆ ಜೂ.30ರ ವರೆಗೆ ಅವಧಿ ವಿಸ್ತರಣೆ: : ಆಹಾರ ಸಚಿವ ದಿನೇಶ್ ಗುಂಡೂರಾವ್

ವಾರ್ತಾಭಾರತಿವಾರ್ತಾಭಾರತಿ13 Jun 2016 7:59 PM IST
share
ಆಧಾರ್ ಜೋಡಣೆಗೆ ಜೂ.30ರ ವರೆಗೆ ಅವಧಿ ವಿಸ್ತರಣೆ: : ಆಹಾರ ಸಚಿವ ದಿನೇಶ್ ಗುಂಡೂರಾವ್

ಬೆಂಗಳೂರು, ಜೂ. 13: ಪಡಿತರ ಚೀಟಿದಾರರು ತಮ್ಮ ಪಡಿತರ ಚೀಟಿಗೆ ಆಧಾರ್ ಸಂಖ್ಯೆ ಜೋಡಣೆಗೆ ಜೂ.30ರ ವರೆಗೆ ಅವಧಿ ವಿಸ್ತರಿಸಲಾಗಿದೆ. ಈ ಅವಧಿಯೊಳಗೆ ಆಧಾರ್ ಸಂಖ್ಯೆ ಜೋಡಣೆ ಮಾಡದಿದ್ದರೆ ಆಹಾರ ಧಾನ್ಯಗಳನ್ನು ಸ್ಥಗಿತಗೊಳಿಸಲಾಗುವುದೆಂದು ಆಹಾರ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.
ಸೋಮವಾರ ವಿಕಾಸಸೌಧದಲ್ಲಿನ ತಮ್ಮ ಕೊಠಡಿಯಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ಪಡಿತರ ಚೀಟಿಗೆ ಆಧಾರ್ ಜೋಡಣೆಗೆ ಜೂ.15ರ ಗಡುವು ನೀಡಲಾಗಿತ್ತು. ಇದೀಗ ಆ ಅವಧಿಯನ್ನು ಜೂ.30ರ ವರೆಗೂ ವಿಸ್ತರಿಸಲಾಗಿದೆ ಎಂದು ಮಾಹಿತಿ ನೀಡಿದರು.
ಶೇ.75ರಷ್ಟು ದೃಢೀಕೃ: ಈಗಾಗಲೇ ಶೇ.87ರಷು ಪಡಿತರ ಚೀಟಿದಾರರು ತಮ್ಮ ಪಡಿತರ ಚೀಟಿಯೊಂದಿಗೆ ಆಧಾರ್ ಸಂಖ್ಯೆ ಜೋಡಣೆ ಮಾಡಿಕೊಂಡಿದ್ದು, ಆ ಪೈಕಿ ಶೇ.72ರಷ್ಟು ದೃಢೀಕರಣಗೊಂಡಿದೆ. ಈ ತಿಂಗಳ ಅಂತ್ಯಕ್ಕೆ ಜೋಡಣೆ ಕಾರ್ಯ ಶೇ.90ರಷ್ಟಾಗಲಿದೆ. ಒಂದು ತಿಂಗಳಲ್ಲಿ ಶೇ.100ರಷ್ಟು ಪೂರ್ಣಗೊಳ್ಳಲಿದೆ ಎಂದು ಅವರು ತಿಳಿಸಿದರು.
ಬಹುಮಾನ: ನಕಲಿ, ಬೇನಾಮಿ, ಅನರ್ಹ ಪಡಿತರ ಚೀಟಿದಾರರ ಬಗ್ಗೆ ಮಾಹಿತಿ ನೀಡುವ ಸಾರ್ವಜನಿಕರಿಗೆ 1 ಪಡಿತರ ಚೀಟಿ ಪತ್ತೆಗೆ 400ರೂ. ಬಹುಮಾನ ನೀಡಲಾಗುವುದು ಎಂದ ಅವರು, ನ್ಯಾಯಬೆಲೆ ಅಂಗಡಿಗೆ ಪೂರೈಕೆ ಆಗುವ ಆಹಾರ ಧಾನ್ಯಗಳ ಅಕ್ರಮಗಳ ಬಗ್ಗೆ ಮಾಹಿತಿದಾರರರಿಗೆ ವಶಪಡಿಸಿಕೊಂಡ ಪಡಿತರಗಳ ಒಟ್ಟು ವೌಲ್ಯದ ಶೇ.5ರಷ್ಟು ಮೊತ್ತವನ್ನು ಬಹುಮಾನ ರೂಪದಲ್ಲಿ ನೀಡಲಾಗುವುದು ಎಂದರು.
ಅನರ್ಹ ಫಲಾನುಭವಿಗಳು ಹಾಗೂ ಪಡಿತರ ಧಾನ್ಯಗಳ ಅಕ್ರಮ ದಾಸ್ತಾನುದಾರರ ಮಾಹಿತಿ ನೀಡುವ ಸಾರ್ವಜನಿಕರಿಗೆ ವಿವರಗಳನ್ನು ಗುಪ್ತವಾಗಿರಿಸಲಾಗುವುದು ಎಂದ ಅವರು, ಮಾಹಿತಿದಾರರಿಗೆ ಆನ್‌ಲೈನ್ ಮೂಲಕ ಬಹುಮಾನ ನೀಡಲಾಗುವುದು ಎಂದರು.
ಅಕ್ರಮ ತಡೆಗೆ ಜಾಗೃತ ದ: ನ್ಯಾಯಬೆಲೆ ಅಂಗಡಿಗಳ ವ್ಯಾಪ್ತಿಯಲ್ಲಿ ಅಕ್ರಮ ತಡೆಗೆ ಮೂರು ಪಡಿತರ ಚೀಟಿದಾರರ ನೇತೃತ್ವದಲ್ಲಿ ಜಾಗೃತ ದಳ ರಚಿಸಲು ತೀರ್ಮಾನಿಸಲಾಗಿದೆ ಎಂದ ಅವರು, ಆಹಾರ ಪದಾರ್ಥಗಳ ಗುಣಮಟ್ಟ ಹಾಗೂ ಅಕ್ರಮ ತಡೆಗೆ ಕ್ರಮ ಕೈಗೊಳ್ಳಲಾಗುವುದು ಎಂದರು.
ರಾಜ್ಯ ಆಹಾರ ಆಯೋಗ ರಚೆ: ‘ಆಹಾರ ಭದ್ರತಾ ಕಾಯ್ದೆ’ಯನ್ವಯ ‘ರಾಜ್ಯ ಆಹಾರ ಆಯೋಗ ರಚನೆ’ಗೆ ಕ್ರಮ ಕೈಗೊಳ್ಳಲಾಗಿದೆ. ಪಡಿತರ ವ್ಯವಸ್ಥೆಯಲ್ಲಿ ಪಾರದರ್ಶಕತೆ ತರಲು ಆಯೋಗ ಸಹಕಾರಿಯಾಗಲಿದೆ ಎಂದು ಅವರು ಭರವಸೆ ವ್ಯಕ್ತಪಡಿಸಿದರು.
ಪೂರ್ಣ ಪ್ರಮಾಣದಲ್ಲಿ ಆಯೋಗ ಅಸ್ತಿತ್ವಕ್ಕೆ ಬರುವ ವರೆಗೂ ರಾಜ್ಯ ಗ್ರಾಹಕರ ವ್ಯಾಜ್ಯಗಳ ಪರಿಹಾರ ವೇದಿಕೆಗೆ ಆ ಅಧಿಕಾರವನ್ನು ನೀಡಲು ತೀರ್ಮಾನಿಸಲಾಗಿದೆ ಎಂದ ಅವರು, ಪಡಿತರ ಚೀಟಿದಾರರಿಗೆ ನೀಡುವ ಆಹಾರ ಪದಾರ್ಥಗಳ ಗುಣಮಟ್ಟ ಸೇರಿದಂತೆ ಇನ್ನಿತರ ಲೋಪದೋಷಗಳ ಬಗ್ಗೆ ದೂರು ನೀಡಲು ಅವಕಾಶವಿದೆ ಎಂದರು.
ಮುಂದಿನ ದಿನಗಳಲ್ಲಿ ಅಂಗನವಾಡಿ ಕೇಂದ್ರಗಳು, ಬಿಸಿಯೂಟ ಯೋಜನೆಯನ್ನು ಆಹಾರ ಆಯೋಗದ ವ್ಯಾಪ್ತಿಗೆ ತರಲಾಗುವುದು ಎಂದ ಅವರು, ಈ ಆಯೋಗಕ್ಕೆ ಸ್ವಯಂಪ್ರೇರಿತ ತನಿಖೆ ಹಾಗೂ ಸರಕಾರಕ್ಕೆ ಶಿಫಾರಸು ಮಾಡುವ ಅಧಿಕಾರವಿದೆ ಎಂದು ಹೇಳಿದರು.

‘ಸಾರ್ವಜನಿಕರು ಎಪಿಎಲ್ ಪಡಿತರ ಚೀಟಿಯನ್ನು ಆಧಾರ್ ಸಂಖ್ಯೆಯೊಂದಿಗೆ ಆನ್‌ಲೈನ್ ಮೂಲಕವೆ ತಾವು ಕುಳಿತಲ್ಲೇ ಪಡೆದುಕೊಳ್ಳಲು ಅನುಕೂಲವಾಗುವಂತೆ ನಿಯಮಗಳನ್ನು ಸರಳೀಕರಣಕ್ಕೆ ಉದ್ದೇಶಿಸಿದ್ದು ಒಂದೆರಡು ತಿಂಗಳಲ್ಲಿ ನೂತನ ವ್ಯವಸ್ಥೆ ಜಾರಿಗೆ ಬರಲಿದೆ’
-ದಿನೇಶ್ ಗುಂಡೂರಾವ್ ಆಹಾರ ಸಚಿವ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X