Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ವಿಶೇಷ-ವರದಿಗಳು
  4. ವೀಡಿಯೊ ಅಥವಾ ಮಾಂಸವನ್ನು ಬದಲಿಸುವುದರಿಂದ...

ವೀಡಿಯೊ ಅಥವಾ ಮಾಂಸವನ್ನು ಬದಲಿಸುವುದರಿಂದ ದೇಶ ಬದಲಾಗದು:ಪ್ರಧಾನಿ ಮೋದಿಗೆ ಕನ್ಹಯ್ಯ ಸಲಹೆ

ವಾರ್ತಾಭಾರತಿವಾರ್ತಾಭಾರತಿ14 Jun 2016 11:40 AM IST
share
ವೀಡಿಯೊ ಅಥವಾ ಮಾಂಸವನ್ನು ಬದಲಿಸುವುದರಿಂದ ದೇಶ ಬದಲಾಗದು:ಪ್ರಧಾನಿ ಮೋದಿಗೆ ಕನ್ಹಯ್ಯ ಸಲಹೆ

ಜವಾಹರಲಾಲ್ ನೆಹರು ವಿಶ್ವವಿದ್ಯಾನಿಲಯದ ವಿದ್ಯಾರ್ಥಿ ನಾಯಕ ಕನ್ಹಯ್ಯ ಕುಮಾರ್ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಟೀಕಾ ಪ್ರಹಾರವನ್ನೇ ಮಾಡಿದ್ದಾರೆ. ರಾಷ್ಟ್ರದ ವಿಶ್ವವಿದ್ಯಾನಿಲಯಗಳಲ್ಲಿ ತುರ್ತು ಪರಿಸ್ಥಿತಿಯಂತಹ ವಾತಾವರಣವು ಸೃಷ್ಟಿಯಾಗಿದೆ ಮತ್ತು ಮಾಂಸ ಅಥವಾ ವೀಡಿಯೊಗಳನ್ನು ಬದಲಿಸುವುದರಿಂದ ದೇಶದಲ್ಲಿ ವಾಸ್ತವದಲ್ಲಿ ಬದಲಾವಣೆಯಾಗದು ಎಂದೂ ಅವರು ಹೇಳಿದ್ದಾರೆ.
 
 ಪ್ರಧಾನಿ ಮೋದಿ ಅವರಿಗೆ ಬರೆದ ಬಹಿರಂಗ ಪತ್ರದಲ್ಲಿ ಕನ್ಹಯ್ಯ ದಾದ್ರಿ ಕೊಲೆ ಪ್ರಕರಣವನ್ನು ಉದಾಹರಣೆಯಾಗಿ ನೀಡಿದ್ದಾರೆ. ಕುಟುಂಬವೊಂದು ಮನೆಯಲ್ಲಿ ದನದ ಮಾಂಸ ಇಟ್ಟಿದ್ದಾರೆ ಮತ್ತು ತಿಂದಿದ್ದಾರೆ ಎನ್ನುವ ಸಂಶಯದಲ್ಲಿ ಮನೆಯ ವ್ಯಕ್ತಿಯನ್ನೇ ಕೊಲೆ ಮಾಡಲಾಗಿತ್ತು. ಅಲ್ಲದೆ ಜೆಎನ್‌ಯುನಲ್ಲಿ ಫೆಬ್ರವರಿ 9ರಂದು ನಡೆದ ವಿವಾದಾತ್ಮಕ ಕಾರ್ಯಕ್ರಮದ ನಕಲಿ ವೀಡಿಯೋಗಳು ಪ್ರಸಾರವಾದ ಬಗ್ಗೆಯೂ ಅವರು ಪತ್ರದಲ್ಲಿ ಬರೆದಿದ್ದಾರೆ. ಮೋದಿಯವರೇ, ಮಾಂಸ ಅಥವಾ ವೀಡಿಯೋವನ್ನು ಬದಲಿಸುವುದರಿಂದ ದೇಶ ಬದಲಾಗದು. ದೇಶದ ಜನರ ಜೀವನ ಸುಧಾರಿಸಿದಾಗಲೇ ದೇಶ ಬದಲಾಗುತ್ತದೆ. ನಿಮ್ಮ ಅಧಿಕಾರಾವಧಿಯಲ್ಲಿ ಪರಿಸ್ಥಿತಿ ಅಧೋಗತಿಗಿಳಿದಿದೆ. ಯುವಕರು ಮತ್ತು ವಿದ್ಯಾರ್ಥಿಗಳು ನಿಮ್ಮನ್ನು ಬಹಳ ನಿರೀಕ್ಷೆಗಳಿಂದ ಆರಿಸಿದ್ದರು. ಪ್ರತೀ ವಿಶ್ವವಿದ್ಯಾಲಯದಲ್ಲಿಯೂ ತುರ್ತು ಪರಿಸ್ಥಿತಿ ನಿರ್ಮಾಣವಾದಂತಿದೆ. ದೇಶದ ಉದ್ದಗಲಕ್ಕೂ ತಿರುಗಾಡಿ ಅಚ್ಛೇದಿನ್ ಎನ್ನುವ ಘೋಷಣೆ ಕೂಗಿದಾಗ ನೀವು ಭರವಸೆ ನೀಡಿರುವ ಪರಿಸ್ಥಿತಿ ಇದೇ ಏನು? ಎಂದು ಅವರು ಪತ್ರದಲ್ಲಿ ಪ್ರಶ್ನಿಸಿದ್ದಾರೆ. ಫೆಬ್ರವರಿಯಲ್ಲಿ ಜೆಎನ್‌ಯುನಲ್ಲಿ ನಡೆದ ಅಫ್ಝಲ್ ಗುರು ಸಂಬಂಧಿಸಿದ ಕಾರ್ಯಕ್ರಮದಲ್ಲಿ ರಾಷ್ಟ್ರವಿರೋಧಿ ಘೋಷಣೆ ಕೂಗಿರುವುದಕ್ಕೆ ಸಂಬಂಧಿಸಿ ದೇಶದ್ರೋಹದ ಆರೋಪದಲ್ಲಿ ಕನ್ಹಯ್ಯ ಜಾಮೀನು ಪಡೆದು ಹೊರಬಂದಿದ್ದಾರೆ. ಕಳೆದ ಎರಡು ವರ್ಷಗಳಲ್ಲಿ ನೀವು ಅಭಿವೃದ್ಧಿ ಮಾಡಿದ್ದಲ್ಲಿ ಅದರ ಪ್ರಚಾರಕ್ಕಾಗಿ ಕೋಟಿಗಟ್ಟಲೆ ಹಣ ಹಾಕುವ ಅಗತ್ಯವಿರಲಿಲ್ಲ. ನಾನು ಇಲ್ಲಿ ವಿದ್ಯಾರ್ಥಿಯಾಗಿ ನಿಮ್ಮನ್ನು ಪ್ರಶ್ನಿಸುತ್ತೇನೆ. ನೀವು ರೂ. 200 ಕೋಟಿಯನ್ನು ಜಾಹೀರಾತುಗಳಿಗೆ ಖರ್ಚು ಮಾಡಿದ್ದೀರಿ. ಆದರೆ ಸಂಶೋಧನಾ ವಿದ್ಯಾರ್ಥಿಗಳಿಗೆ ನಾನ್-ಎನ್‌ಇಟಿ ಸ್ಕಾಲರ್ಶಿಪ್ ಕೊಡಲು ನಿಮ್ಮ ಬಳಿ ರೂ. 99 ಕೋಟಿ ಇಲ್ಲ. ಹೊಸ ಉದ್ಯೋಗಗಳು ಸೃಷ್ಟಿಯಾಗಿಲ್ಲ. ರೈತರು ಹತಾಶೆಯಿಂದ ಮತ್ತು ಸಾಲಗಾರರ ಭಯದಿಂದ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ, ಬಡವರು ಇನ್ನಷ್ಟು ಬಡವರಾಗುತ್ತಿದ್ದಾರೆ. ವಿದ್ಯಾರ್ಥಿಗಳಿಗೆ ವಿದ್ಯೆ ಸಿಗುತ್ತಿಲ್ಲ. ವಿವಿಧ ವಿಶ್ವವಿದ್ಯಾಲಯಕ್ಕೆ ಭಡ್ತಿ ಹೊಂದಿದರೂ ಜಾತಿ ಆಧಾರಿತ ಅವಹೇಳನೆ ಮತ್ತು ತಾರತಮ್ಯ ಎದುರಿಸುತ್ತಿದ್ದಾರೆ. ಕೆಲವೊಂದು ಅಚ್ಚರಿಯ ಪರಿಣಾಮಗಳಿಂದ ಅವರು ಅವೆಲ್ಲವನ್ನೂ ಎದುರಿಸಲು ಶಕ್ತರಾದರೂ ಅವರ ಉನ್ನತ ವ್ಯಾಸಂಗಕ್ಕೆ ಅಡ್ಡಿ ಮಾಡಲು ಫೆಲೋಶಿಪ್ ಗಳನ್ನು ತಡೆಹಿಡಿಯಲಾಗುತ್ತಿದೆ ಎಂದು ಅವರು ಪತ್ರದಲ್ಲಿ ಬರೆದಿದ್ದಾರೆ.

ಕೃಪೆ: indianexpress.com

share
ವಾರ್ತಾಭಾರತಿ
ವಾರ್ತಾಭಾರತಿ
Next Story
X