Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಮುಸ್ಲಿಂ ದ್ವೇಷಕ್ಕೆ ಅವಕಾಶ ನೀಡದ...

ಮುಸ್ಲಿಂ ದ್ವೇಷಕ್ಕೆ ಅವಕಾಶ ನೀಡದ ನ್ಯೂಯಾರ್ಕ್ ಪ್ರಜೆಗಳು

ಒರ್ಲ್ಯಾಂಡೋ ಗೇ ಕ್ಲಬ್ ಹತ್ಯಾಕಾಂಡದ ಹಿನ್ನೆಲೆ

ವಾರ್ತಾಭಾರತಿವಾರ್ತಾಭಾರತಿ14 Jun 2016 5:30 PM IST
share
ಮುಸ್ಲಿಂ ದ್ವೇಷಕ್ಕೆ ಅವಕಾಶ ನೀಡದ ನ್ಯೂಯಾರ್ಕ್ ಪ್ರಜೆಗಳು

ನ್ಯೂಯಾರ್ಕ್ , ಜೂ. 14 : ಒರ್ಲ್ಯಾಂಡೋ ಗೇ ಕ್ಲಬ್ ಮೇಲಿನ ದಾಳಿ ನಡೆಸಿದ್ದು ಉಮರ್ ಮತೀನ್ ಎಂಬ ಹೆಸರಿನ ವ್ಯಕ್ತಿ ಎಂಬುದು ಬಹಿರಂಗವಾಗುತ್ತಲೇ ಅಮೆರಿಕದೆಲ್ಲೆಡೆ ಮತ್ತೆ ಮುಸ್ಲಿಂ ವಿರೋಧಿ ಭಾವನೆಗಳು, ಅಭಿಪ್ರಾಯಗಳು ವ್ಯಕ್ತವಾಗುತ್ತಿವೆ. ಇದರ ಮುಂದುವರಿದ ಭಾಗವಾಗಿ ಮುಸ್ಲಿಮರ ಮೇಲೆ ಹಲ್ಲೆ ನಡೆಸುವ, ಅವಹೇಳನ ಮಾಡಲು ಕೆಲವು ಬಲಪಂಥೀಯ ಗುಂಪುಗಳು ಪ್ರಯತ್ನಿಸುತ್ತಿವೆ. ಆದರೆ ನ್ಯೂಯಾರ್ಕ್ ನಲ್ಲಿ ನಡೆದ ಘಟನೆಯೊಂದು ಇಂತಹ ಶಕ್ತಿಗಳಿಗೆ ಹೆಚ್ಚಿನ ಜನಬೆಂಬಲ ಇಲ್ಲ ಹಾಗು ಹೆಚ್ಚಿನ ಜನತೆ ಪರಸ್ಪರ ಪ್ರೀತಿ , ವಿಶ್ವಾಸದಿಂದ ಬದುಕಲು ಬಯಸುವವರು ಎಂಬುದನ್ನು ಮತ್ತೊಮ್ಮೆ ಸಾಬೀತುಪಡಿಸಿದೆ. 

ಸೋಮವಾರ ಬೆಳಗ್ಗೆ ತನ್ನ ಕಚೇರಿಗೆ ಹೋಗುತ್ತಿದ್ದ ಅಮೈರ ಹಸನ್ ಎಂಬ ಮಹಿಳೆ ಈ ಘಟನೆಯನ್ನು ತನ್ನ ಫೇಸ್ ಬುಕ್ ಪೇಜ್ ನಲ್ಲಿ ಬರೆದಿದ್ದು ಸಾವಿರಾರು ಮಂದಿ ಅದನ್ನು ಶೇರ್ ಮಾಡಿಕೊಂಡಿದ್ದಾರೆ. ಅಮೈರ ಪ್ರಯಾಣಿಸುತ್ತಿದ್ದ ರೈಲಿಗೆ ನುಗ್ಗಿದ ವ್ಯಕ್ತಿಯೊಬ್ಬ ಅದರಲ್ಲಿ ಪ್ರಯಾಣಿಸುತ್ತಿದ್ದ ಇಬ್ಬರು ಹಿಜಾಬ್ ಧಾರಿ ಮಹಿಳೆಯರನ್ನು ಅವಹೇಳನ ಮಾಡತೊಡಗಿದ. " ನೀವು ಇಬ್ಬರು ವಿದೇಶಿಯರು ತಮ್ಮ ಬಾಂಬುಗಳ ಜೊತೆ ತಮ್ಮ ದೇಶಕ್ಕೆ ವಾಪಸ್ ಹೋಗಲಿ ' ಎಂದು ಆರ್ಭಟಿಸಿದ. ಇದರಿಂದ ಆಘಾತಗೊಂಡ ಅಮೈರ ಆತನನ್ನು ವಿರೋಧಿಸಲು ಬಾಯಿ ತೆಗೆಯುವ ಮೊದಲೇ ರೈಲಿನಲ್ಲಿದ್ದ ಎಲ್ಲರೂ ಒಟ್ಟಾಗಿ ಆತನ ವರ್ತನೆಯನ್ನು ತೀವ್ರವಾಗಿ ಖಂಡಿಸಿ , ಪ್ರತಿಭಟಿಸಿದರು. ಆತ ತಕ್ಷಣ ಆ ಇಬ್ಬರು ಮಹಿಳೆಯರನ್ನು ಅವರ ಪಾಡಿಗೆ ಬಿಟ್ಟು ವಾಪಸ್ ಹೋಗಬೇಕು ಎಂದು ಹೇಳಿದರು. 

ಒಬ್ಬ ವ್ಯಕ್ತಿ ಎದುರು ಬಂದು ಸ್ಪಷ್ಟವಾಗಿ " ಸರ್ , ಇದು ನ್ಯೂಯಾರ್ಕ್. ಜಗತ್ತಿನ ಅತ್ಯಂತ ವೈವಿಧ್ಯತೆಯ ನಗರ. ಇಲ್ಲಿ ನಮ್ಮ ಸುರಕ್ಷತೆಯನ್ನು ನಾವೇ ನೋಡಿಕೊಳ್ಳುತ್ತೇವೆ. ಉಳಿದವರು ಏನು ಮಾಡುತ್ತಾರೆ , ಅವರು ಯಾರನ್ನು ಪ್ರೀತಿಸುತ್ತಾರೆ ಇತ್ಯಾದಿಗಳ ಬಗ್ಗೆ ನಾವು ತಲೆಕೆಡಿಸಿಕೊಳ್ಳುವುದಿಲ್ಲ. ಹಾಗಾಗಿ ನೀವು ಈಗಲೇ ಈ ಇಬ್ಬರು ಮಹಿಳೆಯರನ್ನು ಬಿಟ್ಟು ಇಲ್ಲಿಂದ ಹೊರಡಿ " ಎಂದು ಹೇಳಿದ. 

ಇಷ್ಟು ಹೇಳಿ ರೈಲನ್ನು ನಿಲ್ಲಿಸಿ ಎಲ್ಲರು ಒಟ್ಟಾಗಿ ಆತನನ್ನು ಕೆಳಗಿಳಿಸಿ ಸಂಭ್ರಮಿಸಿದರು ಎಂದು ಅಮೈರ ಸಂತಸ ವ್ಯಕ್ತ ಪಡಿಸಿದ್ದಾರೆ. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X