Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಕೈರಾನಾದಿಂದ ವಲಸೆ ಪ್ರಮಾಣ ಇನ್ನೂ...

ಕೈರಾನಾದಿಂದ ವಲಸೆ ಪ್ರಮಾಣ ಇನ್ನೂ ಹೆಚ್ಚು: ಬಿಜೆಪಿ ಸಂಸದ ಹುಕುಂ ಸಿಂಗ್ ಹೇಳಿಕೆ

ಜಿಲ್ಲಾಧಿಕಾರಿಯಿಂದ ನಿರಾಕರಣೆ

ವಾರ್ತಾಭಾರತಿವಾರ್ತಾಭಾರತಿ14 Jun 2016 6:44 PM IST
share
ಕೈರಾನಾದಿಂದ ವಲಸೆ ಪ್ರಮಾಣ ಇನ್ನೂ ಹೆಚ್ಚು: ಬಿಜೆಪಿ ಸಂಸದ ಹುಕುಂ ಸಿಂಗ್ ಹೇಳಿಕೆ

ಕೈರಾನಾ(ಉ.ಪ್ರ.),ಜೂ.14: ಶಾಮ್ಲಿ ಜಿಲ್ಲೆಯ ಕೈರಾನಾದಿಂದ ಹಿಂದುಗಳ ವಲಸೆಯ ಕುರಿತು ತನ್ನ ದಾಳಿಯನ್ನು ಇನ್ನಷ್ಟು ತೀವ್ರಗೊಳಿಸಿರುವ ಸ್ಥಳೀಯ ಬಿಜೆಪಿ ಸಂಸದ ಹುಕುಂ ಸಿಂಗ್ ಅವರು, ತಮ್ಮ ಆಸ್ತಿಪಾಸ್ತಿಗಳನ್ನು ತೊರೆದು ಗುಳೆ ಹೋಗಿರುವ ಹಿಂದು ಕುಟುಂಬಗಳ ಸಂಖ್ಯೆ 400ರಿಂದ 500ಕ್ಕೇರಬಹುದು ಎಂದು ಹೇಳಿದ್ದಾರೆ. ಆದರೆ ಕೆಲವು ಜನರು ಊರನ್ನು ತೊರೆದಿದ್ದಾರೆ, ಇದಕ್ಕೆ ಆರ್ಥಿಕ ಸಮಸ್ಯೆಗಳು ಕಾರಣವೇ ಹೊರತು ಕೋಮುವಾದಿ ಚಟುವಟಿಕೆಗಳಲ್ಲ ಎಂದು ಜಿಲ್ಲಾಧಿಕಾರಿ ಸುಜೀತ ಕುಮಾರ್ ಸ್ಪಷ್ಟಪಡಿಸಿದ್ದಾರೆ.

 ಊರನ್ನು ತೊರೆದಿರುವ ಕುಟುಂಬಗಳ ಸಂಖ್ಯೆ ನಾಲ್ಕೈದು ನೂರಕ್ಕೆ ತಲುಪಬಹುದು. ಇಲ್ಲಿ ಆರೋಪಿ ಒಬ್ಬನಲ್ಲ, ಅವರು ಡಝನ್ನುಗಟ್ಟಲೆ ಸಂಖ್ಯೆಯಲ್ಲಿದ್ದಾರೆ ಎಂದು ಸಿಂಗ್ ಹೇಳಿದರು. ಅವರ ಹೆಸರುಗಳಿಂದಲೇ ಅವರು ಯಾರು ಎಂದು ಊಹಿಸಬಹುದು ಎಂದರು. ಕೈರಾನಾದಲ್ಲಿ ಶೇ.85ರಷ್ಟು ಜನರು ಮುಸ್ಲಿಮ ಸಮುದಾಯಕ್ಕೆ ಸೇರಿದ್ದು,ಗೂಂಡಾಗಳ ಉಪದ್ರವ ತಾಳಲಾಗದೆ 346 ಕುಟುಂಬಗಳು ಊರನ್ನು ತೊರೆದಿವೆ ಎಂದು ಸಿಂಗ್ ಈ ಹಿಂದೆ ಹೇಳಿದ್ದರು.

ಕೈರಾನಾ 2013ರಲ್ಲಿ ಕೋಮು ಹಿಂಸಾಚಾರಕ್ಕೆ ಸಾಕ್ಷಿಯಾಗಿತ್ತು.

ಆದರೆ ಕೆಲವು ಜನರು ಕೈರಾನಾವನ್ನು ತೊರೆದಿರುವುದಕ್ಕೆ ಕೋಮು ವಿಷಯ ಅಥವಾ ಕಾನೂನು ಮತ್ತು ಸುವ್ಯವಸ್ಥೆ ಸ್ಥಿತಿ ಕಾರಣ ಎನ್ನುವುದನ್ನು ಸುಜೀತ ಕುಮಾರ ತಳ್ಳಿಹಾಕಿದ್ದಾರೆ.

   ಈವರೆಗೆ 119 ಕುಟುಂಬಗಳ ಪಟ್ಟಿಯನ್ನು ನಾವು ತನಿಖೆಗೊಳಪಡಿಸಿದ್ದೇವೆ. ಅದರಲ್ಲಿಯ ಸುಮಾರು 10-15 ಕುಟುಂಬಗಳು ಇನ್ನೂ ಕೈರಾನಾದಲ್ಲಿಯೇ ವಾಸವಾಗಿವೆ. ಸುಮಾರು 68 ಕುಟುಂಬಗಳು ಆರ್ಥಿಕ ಕಾರಣಗಳಿಂದಾಗಿ 10-15 ವರ್ಷಗಳ ಹಿಂದೆಯೇ ಈ ಪ್ರದೇಶದಿಂದ ವಲಸೆ ಹೋಗಿವೆ. ಕಾನೂನು ಮತ್ತು ಸುವ್ಯವಸ್ಥೆ ಸಮಸ್ಯೆಯಿಂದಾಗಿ ಊರು ತೊರೆದಿರುವ ಒಂದೂ ಕುಟುಂಬ ನಮಗೆ ಈವರೆಗೆ ಪತ್ತೆಯಾಗಿಲ್ಲ ಎಂದು ಒತ್ತಿ ಹೇಳಿದ ಅವರು, ಕೈರಾನಾ ಪಟ್ಟಣವು ಸದಾ ಶಾಂತಿಯುತವಾಗಿದ್ದು,ಯಾವುದೇ ಕೋಮು ಚಟುವಟಿಕೆಗಳು ಅಲ್ಲಿ ನಡೆಯುತ್ತಿಲ್ಲ. 1992ರಲ್ಲಿ ಬಾಬ್ರಿ ಮಸೀದಿ ಧ್ವಂಸ ಸಂದರ್ಭದಲ್ಲಿ ಈ ಪ್ರದೇಶವು ಶಾಂತವಾಗಿತ್ತು. 2013ರ ಮುಝಫ್ಫರನಗರ ದಂಗೆಗಳ ಸಂದರ್ಭದಲ್ಲಿಯೂ ಇಲ್ಲಿಯ ಜನರು ಪ್ರಬಲ ಭ್ರಾತೃತ್ವ ಸಂದೇಶಗಳನ್ನು ರವಾನಿಸಿದ್ದರು ಎಂದರು.

ಅಲಹಾಬಾದ್‌ನಲ್ಲಿ ಇತ್ತೀಚಿಗೆ ಎರಡು ದಿನಗಳ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯ ಸಂದರ್ಭ ಹಿರಿಯ ಬಿಜೆಪಿ ನಾಯಕರು ರಾಜ್ಯದ ಎಸ್‌ಪಿ ಸರಕಾರದ ವಿರುದ್ಧ ದಾಳಿ ನಡೆಸಲು ಕೈರಾನಾದಿಂದ ಹಿಂದುಗಳ ವಲಸೆ ವಿಷಯವನ್ನು ಕೆದಕಿದ್ದರು. ಮುಂದಿನ ವರ್ಷ ಈ ರಾಜ್ಯದಲ್ಲಿ ವಿಧಾನಸಭಾ ಚುನಾವಣೆ ನಡೆಯಲಿದೆ.

ರವಿವಾರ ರಾಷ್ಟ್ರೀಯ ಕಾರ್ಯಕಾರಿಣಿಯನುದ್ದೇಶಿಸಿ ಮಾತನಾಡಿದ್ದ ಬಿಜೆಪಿ ಅಧ್ಯಕ್ಷ ಅಮಿತ್ ಶಾ ಅವರು ಕೈರಾನಾ ವಿಷಯವನ್ನು ಪ್ರಸ್ತಾಪಿಸಿದ್ದರು.

ಕೈರಾನಾಕ್ಕೆ ಭೇಟಿ ನೀಡಿ ಅಲ್ಲಿಯ ಸ್ಥಿತಿಯನ್ನು ಅಧ್ಯಯನ ಮಾಡಲು ಸಮಿತಿಯೊಂದನ್ನು ಸಹ ಬಿಜೆಪಿ ರಚಿಸಿದೆ.

ತನ್ಮಧ್ಯೆ ಬಿಜೆಪಿ ನಾಯಕರು ಅಪ್ರಾಮಾಣಿಕರು ಎಂದು ಜರೆದಿರುವ ಮುಖ್ಯಮಂತ್ರಿ ಅಖಿಲೇಶ ಯಾದವ, ಈ ವಿಷಯದಲ್ಲಿ ಅವರು ಸುಳ್ಳುಗಳನ್ನು ಹೇಳುತ್ತಿದ್ದಾರೆ. ಬಿಜೆಪಿಯಿಂದ ಒಳ್ಳೆಯ ಕಾರ್ಯಗಳನ್ನು ತಾನು ನಿರೀಕ್ಷಿಸುತ್ತಿದ್ದೇನೆ ಎಂದು ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X