Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮೂಡುಬಿದಿರೆ: ಗೌರಿಕೆರೆಯ ಆವರಣದಲ್ಲಿ...

ಮೂಡುಬಿದಿರೆ: ಗೌರಿಕೆರೆಯ ಆವರಣದಲ್ಲಿ ಶ್ರಮದಾನ

ವಾರ್ತಾಭಾರತಿವಾರ್ತಾಭಾರತಿ14 Jun 2016 9:24 PM IST
share
ಮೂಡುಬಿದಿರೆ: ಗೌರಿಕೆರೆಯ ಆವರಣದಲ್ಲಿ ಶ್ರಮದಾನ

ಮೂಡುಬಿದಿರೆ, ಜೂ.14: ಇಲ್ಲಿನ 18 ಕೆರೆಗಳಲ್ಲಿ ಜೀವಂತವಾಗಿರುವ ಕೆರೆಗಳಲ್ಲಿ ಒಂದಾಗಿರುವ ಗೌರಿಕೆರೆಯಲ್ಲಿ ಮತ್ತು ಆವರಣದಲ್ಲಿ ತುಂಬಿಕೊಂಡಿದ್ದ ಕಸಕಡ್ಡಿ ಮತ್ತು ಗಿಡಗಂಟಿಗಳನ್ನು ಶ್ರಮದಾನದ ತೆಗೆದು ಸ್ವಚ್ಛಗೊಳಿಸುವ ಕಾರ್ಯಕ್ರಮ ನಡೆಯಿತು.

ಕಳೆದ ಕೆಲ ವರ್ಷಗಳಿಂದ ಗೌರಿಕೆರೆಯ ಸುತ್ತ ಗಿಡಗಂಟಿಗಳು ಬೆಳೆದುಕೊಂಡಿತ್ತಲ್ಲದೆ ಕೆರೆಯಲ್ಲಿ ಕಸಕಡ್ಡಿಗಳಿಂದ ತುಂಬಿಕೊಂಡು ನೀರು ಹಾಳಾಗಿತ್ತು. ಇದನ್ನರಿತ ದೇವಾಡಿಗರ ಸುಧಾರಕ ಸಂಘ, ಯುವ ವೇದಿಕೆ, ಮಹಿಳಾ ವೇದಿಕೆ ಸದಸ್ಯರು ಹಾಗೂ ಸುತ್ತಮುತ್ತಲಿನ ನಾಗರಿಕರು ಸೇರಿ ಶ್ರಮದಾನದ ಮೂಲಕ ಕೆರೆಯ ಸುತ್ತಲಿನ ಪ್ರದೇಶವನ್ನು ಸ್ವಚ್ಛಗೊಳಿಸಿದರು.

ಪುರಸಬಾ ಸದಸ್ಯ ರತ್ನಾಕರ ದೇವಾಡಿಗ, ದೇವಾಡಿಗ ಸುಧಾರಕ ಸಂಘದ ಅಧ್ಯಕ್ಷ ಶಶಿಧರ್ ಶಿರ್ತಾಡಿ, ಕಾರ್ಯದರ್ಶಿ ಶ್ಯಾಮ್ ದೇವಾಡಿಗ, ಮಾಜಿ ಅಧ್ಯಕ್ಷರಾದ ವಿಶ್ವನಾಥ ದೇವಾಡಿಗ, ರತ್ನಾಕರ ಸಿ.ಮೊಯ್ಲಿ, ಯುವ ವೇದಿಕೆಯ ಅಧ್ಯಕ್ಷ ಸಂತೋಷ್ ಕುಮಾರ್, ಮಹಿಳಾ ವೇದಿಕೆಯ ಅಧ್ಯಕ್ಷೆ ರಮಾ ಪದ್ಮನಾ, ಸಂಘದ ಸದಸ್ಯರುಗಳಾದ ವಸಂತ ದೇವಾಡಿಗ, ಪುರಂದರ ದೇವಾಡಿಗ, ಭಾರತಿ ರತ್ನಾಕರ ದೇವಾಡಿಗ, ವಿಜಯಲಕ್ಷ್ನೀ ರತ್ನಾಕರ್, ಹೇಮಲತಾ ಶೇರಿಗಾರ್ ಮತ್ತಿತರರು ಶ್ರಮದಾನದಲ್ಲಿ ಪಾಲ್ಗೊಂಡಿದ್ದರು.

ಮೂಡುಬಿದಿರೆಯು 18 ಬಸದಿಗಳು 18 ದೇವಸ್ಥಾನಗಳು ಹಾಗೂ 18 ಕೆರೆಗಳಿಗೆ ಹೆಸರುವಾಸಿಯಾಗಿದೆ. ಆದರೆ ಇದೀಗ ಹೆಚ್ಚಿನ ಕೆರೆಗಳು ಹೂಳು ಮತ್ತು ಕಸಕಡ್ಡಿಗಳು ತುಂಬಿಕೊಂಡು ಮುಚ್ಚಿ ಹೋಗಿವೆ. ಇದೀಗ ಉಳಿದಿರುವ ಕೆರೆಗಳಲ್ಲಿ ಗೌರಿ ಕೆರೆಯಲ್ಲಿ ನೀರಿನ ಸಂಪನ್ಮೂಲವಿದೆ. ಇಲ್ಲಿ ಕಸಕಡ್ಡಿಗಳನ್ನು ಹಾಕುತ್ತಿರುವುದರಿಂದ ನೀರು ಹಾಳಾಗಿದೆ. ಇದರಿಂದಾಗಿ ಬೇಸರವಾಗಿ ಈ ಬಾರಿ ಶ್ರಮದಾನ ಮಾಡುವ ಯೋಜನೆಯನ್ನು ದೇವಾಡಿಗರ ಸುಧಾರಕ ಸಂಘವು ಹಾಕಿಕೊಂಡು ಸ್ವಚ್ಛಗೊಳಿಸಿದೆ. ಮುಂದೆ ಇದನ್ನು ಅಭಿವೃದ್ಧಿಗೊಳಿಸಲು ಅನುದಾನಕ್ಕಾಗಿ ಸಚಿವರಿಗೆ ಹಾಗೂ ಪುರಸಭೆಗೆ ಮನವಿ ನೀಡಲಾಗುವುದು.

ರತ್ನಾಕರ ದೇವಾಡಿಗ, ಪುರಸಭಾ ಸದಸ್ಯ

  ಗೌರಿಕೆರೆಯ ಪ್ರದೇಶ ಪ್ರಖ್ಯಾತವಾಗಿದೆ. ಮೂಡುಬಿದಿರೆಯಲ್ಲಿರುವ 18 ಕೆರೆಗಳಲ್ಲಿ ಈಗ 5-6 ಕೆರೆಗಳು ಮಾತ್ರ ಜೀವಂತವಾಗಿವೆ. ಮೊದಲು ಈ ಕೆರೆಯ ನೀರನ್ನು ಬಳಸಿ ಕೃಷಿ ಪರಿಸರದವರು ಮೂರು ಬೆಳೆ ಮಾಡುತ್ತಿದ್ದರು. ಈ ಕೆರೆಯಲ್ಲಿ ಎಪ್ರಿಲ್-ಮೇವರೆಗೆ ನೀರು ಇರುತ್ತದೆ. ಆದರೆ ಕಸ ತುಂಬಿ ಮತ್ತು ಪುರಸಭೆ ಕೂಡಾ ಚರಂಡಿಯ ನೀರನ್ನು ಕೆರೆಗೆ ಬಿಡುತ್ತಿರುವುದರಿಂದ ಕುಡಿಯಲು ಸಾಧ್ಯವಿಲ್ಲದಂತಾಗಿದೆ. ಪಕ್ಕದಲ್ಲೇ ಇರುವ ಪೊಟ್ಟು ಕೆರೆಯನ್ನು ಪುರಾತತ್ವ ಇಲಾಖೆಯವರು ಸರಿಪಡಿಸಿದ್ದಾರೆ. ಆದರೆ ಇದರಲ್ಲಿ ಮಳೆಗಾಲದಲ್ಲಿ ಮಾತ್ರ ನೀರು ತುಂಬುತ್ತದೆ ಹೊರತು ಬೇಸಿಗೆ ಕಾಲದಲ್ಲಿ ನೀರು ಬತ್ತಿ ಹೋಗಿರುತ್ತದೆ. ಆದರೆ ಗೌರಿಕೆರೆಯಲ್ಲಿ ನೀರಿರುತ್ತದೆ. ಸರಕಾರ ಎಚ್ಚೆತ್ತುಕೊಂಡು ಈ ಕೆರೆಯನ್ನು ಅಭಿವೃದ್ಧಿ ಪಡಿಸಬೇಕಾಗಿದೆ. ಈ ಕೆರೆ ಅಭಿವೃದ್ಧಿಯಾದರೆ ಪರಿಸರದ 100-150 ಬಾವಿಗಳಿಗೆ ನೀರು ತುಂಬಲು ಸಾಧ್ಯವಿದೆ.

ರತ್ನಾಕರ ಸಿ.ಮೊಯ್ಲಿ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X