Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಶಿವಮೊಗ್ಗ ನಗರದಲ್ಲಿ ಹೆಚ್ಚುತ್ತಿದೆ ಬೀದಿ...

ಶಿವಮೊಗ್ಗ ನಗರದಲ್ಲಿ ಹೆಚ್ಚುತ್ತಿದೆ ಬೀದಿ ಕಾಮಣ್ಣರ ಹಾವಳಿ

ಗಮನಹರಿಸುವರೇ ಪೊಲೀಸರು?

ವಾರ್ತಾಭಾರತಿವಾರ್ತಾಭಾರತಿ14 Jun 2016 11:31 PM IST
share

ಶಿವಮೊಗ್ಗ,ಜೂ.14: ಇತ್ತೀಚೆಗೆ ಶಿವಮೊಗ್ಗ ನಗರದಲ್ಲಿ ಬೀದಿ ಕಾಮಣ್ಣರ ಹಾವಳಿ ವಿಪರೀತ ಮಟ್ಟಕ್ಕೆ ತಲುಪಿದ್ದು ಶಾಲಾ-ಕಾಲೇಜು ವಿದ್ಯಾರ್ಥಿನಿಯರು, ಯುವತಿಯರು, ಮಹಿಳೆಯರು ತೀವ್ರ ಕಿರಿಕಿರಿ ಎದುರಿಸುತ್ತಿದ್ದಾರೆ. ಈ ಕುರಿತಂತೆ ಸಾರ್ವಜನಿಕ ವಲಯದಿಂದ ವ್ಯಾಪಕ ದೂರುಗಳು ಕೇಳಿಬರುತ್ತಿವೆ. ಪೊಲೀಸರು ಬೀದಿ ಕಾಮಣ್ಣರ ಹಾವಳಿಗೆ ಕಡಿ ವಾಣ ಹಾಕಬೇಕು. ಯುವತಿ-ಮಹಿಳೆಯರು ನಗರದ ರಸ್ತೆಗಳಲ್ಲಿ ಮುಕ್ತವಾಗಿ ಓಡಾಡುವಂತೆ ಮಾಡಬೇಕು. ವಿಶೇಷವಾಗಿ ಶಾಲಾ-ಕಾಲೇಜುಗಳಿಗೆ ತೆರಳುವ ಹಾಗೂ ಬಿಡುವ ಸಮಯದಲ್ಲಿ ಪ್ರಮುಖ ರಸ್ತೆಗಳಲ್ಲಿ ಪೊಲೀಸ್ ಗಸ್ತು ವ್ಯವಸ್ಥೆ ಹೆಚ್ಚಿಸಬೇಕು ಎಂದು ಕೆಲ ಪೋಷಕರು ಪೊಲೀಸ್ ಇಲಾಖೆಗೆ ಆಗ್ರಹಿಸಿರುವುದಾಗಿ ತಿಳಿದು ಬಂದಿದೆ. ಶಾಲಾ  ಕಾಲೇಜುಗಳು, ಬಸ್ ನಿಲ್ದಾಣಗಳು, ಪ್ರಮುಖ ರಸ್ತೆ, ಫುಟ್‌ಪಾತ್‌ಗಳಲ್ಲಿ ಬೀಡುಬಿಡುವ ಪುಂಡರು ಯುವತಿ-ಮಹಿಳೆಯರನ್ನು ಚುಡಾಯಿಸುವುದು, ಅಸಭ್ಯ ಮಾತುಗಳಿಂದ ಕರೆಯುವುದು, ಹಿಂಬಾಲಿಸುವುದು ಸೇರಿದಂತೆ ನಾನಾ ರೀತಿಯ ಉಪಟಳ ನೀಡುತ್ತಿದ್ದಾರೆ ಎಂದು ಸಾರ್ವಜನಿಕರು ದೂರಿದ್ದಾರೆ. ಅದೆಷ್ಟೋ ಯುವತಿಯರು, ವಿದ್ಯಾರ್ಥಿನಿಯರು ಭಯದಿಂದ ಪುಂಡರ ಉಪಟಳ ಪ್ರಶ್ನಿಸಲು ಹೋಗುತ್ತಿಲ್ಲ. ಮನೆಯಲ್ಲಿ ತಿಳಿಸಿದರೆ ಎಲ್ಲಿ ಸಮಸ್ಯೆ ಸೃಷ್ಟಿಯಾಗುವುದೋ, ಅರ್ಧಕ್ಕೆ ವಿದ್ಯಾಭ್ಯಾಸ ನಿಲ್ಲಿಸಿ ಬಿಡುತ್ತಾರೋ ಎಂಬ ಕಾರಣದಿಂದ ಮನೆಯವರಿಗೂ ಹೇಳುವುದಿಲ್ಲ. ಇದನ್ನೇ ಬಂಡವಾಳ ಮಾಡಿಕೊಳ್ಳುವ ಪುಂಡರು ತಮ್ಮ ಕುಕೃತ್ಯ ನಡೆಸುತ್ತಿದ್ದಾರೆ ಎಂದು ನಾಗರತ್ನ ಎಂಬ ಗೃಹಿಣಿ ದೂರುತ್ತಾರೆ. ಮತ್ತೆ ಕೆಲ ಪುಂಡರು ಹದಿಹರೆಯದ ವಯಸ್ಸಿನ ಶಾಲಾ-ಕಾಲೇಜು ಬಾಲಕಿಯರನ್ನು ಪ್ರೀತಿ-ಪ್ರೇಮದ ಬಲೆಗೆ ಬೀಳಿಸಿಕೊಂಡು ಅವರ ದಾರಿ ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ. ಮತ್ತೆ ಕೆಲ ಬೀದಿ ಕಾಮಣ್ಣರು ಕಾಲೇಜುಗಳ ಕ್ಯಾಂಪಸ್ ಆವರಣದಲ್ಲಿಯೇ ವಿದ್ಯಾರ್ಥಿಯರಿಗೆ ತೊಂದರೆ ಕೊಡುವ ಕೆಲಸ ನಡೆಸುತ್ತಿದ್ದಾರೆ. ಈ ಬಗ್ಗೆ ಶಾಲಾ-ಕಾಲೇಜುಗಳಲ್ಲಿ ಜಾಗೃತಿ ಮೂಡಿಸುವ ಕೆಲಸವನ್ನು ಪೊಲೀಸ್ ಇಲಾಖೆ ಹಾಗೂ ನಾಗರಿಕ ಸಂಘಟನೆಗಳು ಮಾಡಬೇಕಾಗಿದೆ ಎಂದು ಪೋಷಕರೊಬ್ಬರು ಹೇಳುತ್ತಾರೆ. ನಗರದ ಮಹಾವೀರ ವೃತ್ತ, ತಹಶೀಲ್ದಾರ್ ಕಚೇರಿ ಎದುರಿನ ಬಸ್ ನಿಲ್ದಾಣ, ಮಥುರಾ ಪ್ಯಾರಡೈಸ್ ಸಮೀಪದ ರಸ್ತೆ, ಗೋಪಿ ವೃತ್ತ ಸುತ್ತಮುತ್ತಲು, ನೆಹರೂ ರಸ್ತೆ, ಡಿ.ವಿ.ಎಸ್. ಕಾಲೇಜು ವೃತ್ತ, ಡಿಡಿಪಿಐ ಕಚೇರಿ ಮುಂಭಾಗದ ಬಸ್ ನಿಲ್ದಾಣ, ಕೆ.ಆರ್.ಪುರಂ ರಸ್ತೆ, ಎ.ಎ. ವೃತ್ತ, ಸೈನ್ಸ್ ಮೈದಾನ, ಗಾಂಧಿ ಉದ್ಯಾನವನ ಮುಂಭಾಗದ ಬಸ್ ನಿಲ್ದಾಣ ಸೇರಿದಂತೆ ಇನ್ನೂ ಹಲ

ವೆಡೆ ಪುಂಡರ ಉಪಟಳವಿರುವ ಬಗ್ಗೆ ಮಾಹಿತಿಗಳು ಸಾರ್ವಜನಿಕ ವಲಯದಿಂದ ಕೇಳಿಬಂದಿದೆ. ಈ ಹಿಂದೆ ಪುಂಡರ ಪತ್ತೆಗಾಗಿಯೇ ಪ್ರಮುಖ ರಸ್ತೆ, ಶಾಲಾ-ಕಾಲೇಜುಗಳ ಬಳಿ ಮಫ್ತಿಯಲ್ಲಿ ಮಹಿಳಾ ಪೊಲೀಸರು ಕಾರ್ಯಾಚರಿಸುತ್ತಿದ್ದರು. ಅದೆಷ್ಟೋ ಬಾರಿ ವಿದ್ಯಾರ್ಥಿನಿಯರು, ಯುವತಿಯರ ಬೆನ್ನು ಬೀಳುತ್ತಿದ್ದ ಪುಂಡರನ್ನು ಪತ್ತೆ ಹಚ್ಚಿ ತಕ್ಕ ಶಾಸ್ತಿ ಕೂಡ ಮಾಡಿದ್ದರು. ಇದರಿಂದ ಭಯಭೀತರಾಗಿದ್ದ ಪುಂಡರು ತಮ್ಮ ಕುಕೃತ್ಯಕ್ಕೆ ಬ್ರೇಕ್ ಹಾಕಿದ್ದರು. ನಗರದ ಪ್ರಮುಖ ಶಾಲಾ-ಕಾಲೇಜು ಹಾಗೂ ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿನಿಯರು ಓಡಾಡುವ ಮುಖ್ಯ ರಸ್ತೆಗಳು, ಬಸ್ ನಿಲ್ದಾಣಗಳ ಬಳಿ ಆಗಾಗ್ಗೆ ಮಫ್ತಿ ಪೊಲೀಸರನ್ನು ನಿಯೋಜಿಸಬೇಕು. ಈ ಮೂಲಕ ಬೀದಿ ಕಾಮಣ್ಣರ ಪತ್ತೆ ಹಚ್ಚುವ ಕೆಲಸ ಮಾಡಬೇಕು ಎಂದು ಪೊಲೀಸ್ ಇಲಾಖೆಗೆ ನಾಗರಿಕರು ಒತ್ತಾಯಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X