Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ತನ್ನ ಉತ್ತರ ಪತ್ರಿಕೆಯನ್ನು ತಾನೇ...

ತನ್ನ ಉತ್ತರ ಪತ್ರಿಕೆಯನ್ನು ತಾನೇ ಮೌಲ್ಯಮಾಪನ ಮಾಡಿ 100ಕ್ಕೆ 100 ಅಂಕ ಪಡೆದ!

‘ಶಿಕ್ಷಕಿಗೆ ತೊಂದರೆ ನೀಡದ ಒಳ್ಳೆಯ ಹುಡುಗ’

ವಾರ್ತಾಭಾರತಿವಾರ್ತಾಭಾರತಿ15 Jun 2016 8:55 AM IST
share
ತನ್ನ ಉತ್ತರ ಪತ್ರಿಕೆಯನ್ನು ತಾನೇ ಮೌಲ್ಯಮಾಪನ ಮಾಡಿ 100ಕ್ಕೆ 100 ಅಂಕ ಪಡೆದ!

ಅಹ್ಮದಾಬಾದ್, ಜೂ.15: 12ನೇ ತರಗತಿಯ ವಿದ್ಯಾರ್ಥಿಯೊಬ್ಬ ಗುಜರಾತ್ ಸೆಕೆಂಡರಿ ಪರೀಕ್ಷಾ ಮಂಡಳಿ ಪರೀಕ್ಷೆಯಲ್ಲಿ ತನ್ನ ಅರ್ಥಶಾಸ್ತ್ರ ಉತ್ತರ ಪತ್ರಿಕೆಯನ್ನು ಬರೆದು, ತಾನೇ ಕೆಂಪು ಶಾಯಿಯಿಂದ ಮೌಲ್ಯಮಾಪನ ಮಾಡಿಕೊಂಡು, ಪರೀಕ್ಷಕರಿಗೆ ನೀಡಿದ ಪ್ರಕರಣ ಬೆಳಕಿಗೆ ಬಂದಿದೆ.

ಇದೀಗ ವಿದ್ಯಾರ್ಥಿ ವಿರುದ್ಧ ನಕಲು ಪ್ರಕರಣ ದಾಖಲಿಸಲಾಗಿದೆ. ಭೂಗೋಳಶಾಸ್ತ್ರ ಹಾಗೂ ಅರ್ಥಶಾಸ್ತ್ರ ಎರಡೂ ವಿಷಯಗಳಲ್ಲಿ ವಿದ್ಯಾರ್ಥಿ ಸ್ವಯಂ ಮೌಲ್ಯಮಾಪನ ಮಾಡಿಕೊಂಡಿರುವುದು ಪತ್ತೆಯಾಗಿದೆ. ಜಾಗೃತದಳದ ಶಿಕ್ಷಕರು ಮೌಲ್ಯಮಾಪನ ನಡೆಸಿದ ವೇಳೆ ಭೂಗೋಳ ಶಾಸ್ತ್ರದ ಅವ್ಯವಹಾರ ಪತ್ತೆಯಾಯಿತು. ಈ ವಿಷಯದಲ್ಲಿ ವಿದ್ಯಾರ್ಥಿ ಹರ್ಷದ್ ಸರ್ವಯ್ಯ 34 ಅಂಕ ಪಡೆದರೆ, ಅರ್ಥಶಾಸ್ತ್ರದಲ್ಲಿ 100ಕ್ಕೆ 100 ಅಂಕ ಪಡೆದಿದ್ದ. ಆದರೆ ವೌಲ್ಯಮಾಪನ ಮಾಡುವ ಶಿಕ್ಷಕರಿಗೆ ಇದು ಗಮನಕ್ಕೆ ಬಂದಿಲ್ಲ ಎಂದು ಮಂಡಳಿ ಕಾರ್ಯದರ್ಶಿ ಜಿ.ಡಿ.ಪಟೇಲ್ ಹೇಳಿದ್ದಾರೆ.

ವಿದ್ಯಾರ್ಥಿಯನ್ನು ಪರೀಕ್ಷಾ ಸುಧಾರಣಾ ಸಮಿತಿಯ ಮುಂದೆ ಕರೆದು, ಆತ ತಪ್ಪಿತಸ್ಥ ಎಂದು ಖಚಿತವಾದರೆ ಎರಡು ಪರೀಕ್ಷೆಗಳಿಂದ ಡಿಬಾರ್ ಮಾಡಲಾಗುವುದು ಎಂದು ಅವರು ಹೇಳಿದರು. ಸಂಶಯ ಬಾರದಂತೆ ಮಾಡುವ ಸಲುವಾಗಿ ವಿದ್ಯಾರ್ಥಿ, ಅಂಕವನ್ನು ಮುಖಪುಟದಲ್ಲಿ ಒಟ್ಟು ನಮೂದಿಸಿಲ್ಲ. ಪ್ರತಿ ಪ್ರಶ್ನೆಯನ್ನು ಏಳು ಶಿಕ್ಷಕರ ಗುಂಪು ಮೌಲ್ಯಮಾಪನ ಮಾಡಿ, ಸಹಿ ಮಾಡಬೇಕು. ಆದ್ದರಿಂದ ಈ ಪ್ರಕರಣ ಬೆಳಕಿಗೆ ಬಂದಿದೆ.

ಶಿಕ್ಷಕರು ಅಂಕವನ್ನು ಕ್ರೋಢೀಕರಿಸಿ 100ಕ್ಕೆ 100 ಎಂದು ಅಂತಿಮಪಡಿಸಿದ್ದರು. ಸಂಬಂಧಪಟ್ಟ ಶಿಕ್ಷಕರಿಗೂ ನೋಟಿಸ್ ನೀಡಲಾಗಿದೆ ಎಂದು ತಿಳಿಸಿದ್ದಾರೆ.
ಅರ್ಥಶಾಸ್ತ್ರದಲ್ಲಿ 100ಕ್ಕೆ 100 ಅಂಕ ಪಡೆದಿದ್ದ ಈ ವಿದ್ಯಾರ್ಥಿ ಗುಜರಾತಿಯಲ್ಲಿ 12, ಇಂಗ್ಲಿಷ್‌ನಲ್ಲಿ 12, ಸಂಸ್ಕೃತದಲ್ಲಿ 4, ಸಮಾಜಶಾಸ್ತ್ರದಲ್ಲಿ 20, ಮನಃಶಾಸ್ತ್ರದಲ್ಲಿ 5 ಮತ್ತು ಭೂಗೋಳಶಾಸ್ತ್ರದಲ್ಲಿ 35 ಅಂಕಗಳನ್ನು ಪಡೆದಿದ್ದ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X