Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ವೆಸ್ಟ್‌ಬ್ಯಾಂಕ್‌ಗೆ ನೀರಿನ ಸಂಪರ್ಕ...

ವೆಸ್ಟ್‌ಬ್ಯಾಂಕ್‌ಗೆ ನೀರಿನ ಸಂಪರ್ಕ ಕಡಿತಗೊಳಿಸಿದ ಇಸ್ರೇಲ್

ಫೆಲೆಸ್ತೀನಿಯರಿಗೆ ಕುಡಿಯುವ ನೀರಿಲ್ಲದ ರಮಝಾನ್

ವಾರ್ತಾಭಾರತಿವಾರ್ತಾಭಾರತಿ15 Jun 2016 12:51 PM IST
share
ವೆಸ್ಟ್‌ಬ್ಯಾಂಕ್‌ಗೆ ನೀರಿನ ಸಂಪರ್ಕ ಕಡಿತಗೊಳಿಸಿದ ಇಸ್ರೇಲ್

ಫೆಲೆಸ್ತೀನ್, ಜೂ.15: ಇಸ್ರೇಲಿನ ನ್ಯಾಶನಲ್ ವಾಟರ್ ಕಂಪೆನಿ ಆಕ್ರಮಿತ ವೆಸ್ಟ್ ಬ್ಯಾಂಕಿನ ಹಲವು ಪ್ರದೇಶಗಳಿಗೆ ನೀರು ಸಂಪರ್ಕ ಕಡಿತಗೊಳಿಸಿದ್ದು ಪವಿತ್ರ ರಮಝಾನ್ ತಿಂಗಳಲ್ಲಿ ಸಾವಿರಾರು ಫೆಲೆಸ್ತೀನಿಯರು ಕುಡಿಯುವ ನೀರಿಲ್ಲದೆ ಪರದಾಡುವ ಪರಿಸ್ಥಿತಿ ಬಂದೊದಗಿದೆ.

ಫೆಲೆಸ್ತೀನಿ ನಗರಗಳಿಗೆ ನೀರು ಸರಬರಾಜು ಮಾಡುವ ಪ್ರಮುಖ ಕಂಪೆನಿಯಾಗಿರುವ ಮೆಕೊರೋಟ್, ಜೆನಿನ್ ಮುನಿಸಿಪಾಲಿಟಿ ಹಾಗೂ ಹಲವಾರು ನಬ್ಲು ಗ್ರಾಮಗಳು, ಸಲ್ಫಿಟ್ ನಗರ ಮತ್ತಿತರ ಗ್ರಾಮಗಳಿಗೆ ನೀರು ಸರಬರಾಜು ಕಡಿತಗೊಳಿಸಿದೆ.

ಕೆಲವು ಪ್ರದೇಶಗಳಲ್ಲಿ ನೀರು ಸರಬರಾಜು ಸ್ಥಗಿತಗೊಂಡು 40ಕ್ಕೂ ಹೆಚ್ಚು ದಿನಗಳಾಗಿವೆ ಎಂದು ಫೆಲೆಸ್ತೀನಿ ಹೈಡ್ರಾಲಜಿ ಗ್ರೂಪಿನ ಕಾರ್ಯನಿರ್ವಾಹಕ ನಿರ್ದೇಶಕ ಅಯ್ಮಾನ್ ರಬಿ ತಿಳಿಸಿದ್ದಾರೆ. ‘‘ಜನರೀಗ ನೀರಿನ ಟ್ರಕ್‌ಗಳಿಂದ ನೀರು ಖರೀದಿಸುತ್ತಿದ್ದಾರೆ. ಇಲ್ಲವೇ ಇತರ ನೀರಿನ ತೊರೆಗಳನ್ನು ಅವಲಂಬಿಸಿದ್ದಾರೆ’’ ಎಂದವರು ಮಾಹಿತಿ ನೀಡಿದರು.

‘‘ಕುಟುಂಬಗಳ ಸದಸ್ಯರು ದಿನವೊಂದಕ್ಕೆ 2,3 ಅಥವಾ 10 ಲೀಟರ್ ನೀರು ಪಡೆಯುತ್ತಿದ್ದು ಕೆಲವು ಕಡೆ ನೀರಿನ ರೇಷನಿಂಗ್ ಆರಂಭವಾಗಿದೆ,’’ಎಂದು ಅವರು ಹೇಳಿದರು.
ಜೆನಿನ್ ನಗರದಲ್ಲಿ 40,000ಕ್ಕೂ ಹೆಚ್ಚಿನ ಜನಸಂಖ್ಯೆಯಿದ್ದು ನೀರಿನ ಸಮಸ್ಯೆಯಿಂದ ಏನಾದರೂ ದುರಂತ ಸಂಭವಿಸಿದರೆ ಕಂಪೆನಿಯನ್ನೇ ಹೊಣೆಗಾರನನ್ನಾಗಿಸಲಾಗುವುದು, ಎಂದು ಜನ ಎಚ್ಚರಿಸಿದ್ದಾರೆ.

ವಿಶ್ವ ಸಂಸ್ಥೆಯ ಪ್ರಕಾರ ಪ್ರತಿಯೊಬ್ಬ ವ್ಯಕ್ತಿಗೆ ದಿನಕ್ಕೆ ಕನಿಷ್ಠ 7.5 ಲೀಟರ್ ನೀರಿನ ಅಗತ್ಯವಿದ್ದರೂ ಫೆಲೆಸ್ತೀನಿನ ಹಲವು ಕಡೆ ಉಷ್ಣಾಂಶ 35 ಡಿಗ್ರಿಗೂ ಅಧಿಕವಿರುವಾಗ ಇದು ಸಾಕಾಗದು.

1967ರಲ್ಲಿ ಇಸ್ರೇಲಿ ಪಡೆಗಳು ವೆಸ್ಟ್ ಬ್ಯಾಂಕ್ ಹಾಗೂ ಗಝಾ ಸ್ಟ್ರಿಪ್ ಆಕ್ರಮಿಸಿಕೊಂಡ ನಂತರ ಅಲ್ಲಿನ ಫೆಲೆಸ್ತೀನಿಯರಿಗೆ ನೀರು ಸರಬರಾಜನ್ನು ನಿಯಂತ್ರಿಸುತ್ತಿದೆ. ಇಸ್ರೇಲೀಯರಿಗೆ ದಿನಕ್ಕೆ ಪ್ರತಿಯೊಬ್ಬ ವ್ಯಕ್ತಿಗೆ 350 ಲೀಟರ್ ನೀರು ದೊರೆಯುತ್ತಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X