Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಗಲ್ಫ್
  4. ಮಸ್ಕತ್: ಅನಿವಾಸಿ ಭಾರತೀಯ ನಾಪತ್ತೆ

ಮಸ್ಕತ್: ಅನಿವಾಸಿ ಭಾರತೀಯ ನಾಪತ್ತೆ

ಹುಡುಕಿಕೊಡಲು ಪತ್ನಿಯ ಮನವಿ

ವಾರ್ತಾಭಾರತಿವಾರ್ತಾಭಾರತಿ15 Jun 2016 3:30 PM IST
share
ಮಸ್ಕತ್: ಅನಿವಾಸಿ ಭಾರತೀಯ ನಾಪತ್ತೆ

ಮಸ್ಕತ್,ಜೂ.15: ಮಸ್ಕತ್ ನಗರದಿಂದ ಸುಮಾರು 217 ಕಿ.ಮೀ. ದೂರವಿರುವ ಇಬ್ರಿ ಸಮೀಪದ ಸುನೈನಾದ ಪೆಟ್ರೋಲ್ ಬಂಕ್ ಒಂದರಲ್ಲಿ ಉದ್ಯೋಗಿಯಾಗಿರುವ ಕೇರಳ ಮೂಲದ ಅನಿವಾಸಿ ಭಾರತೀಯ ಜಾನ್ ಫಿಲಿಪ್ ಕಳೆದ ಶುಕ್ರವಾರ ರಾತ್ರಿಯಿಂದ ನಿಗೂಢವಾಗಿ ಕಾಣೆಯಾಗಿದ್ದು ಅವರನ್ನು ಹುಡುಕಿಕೊಡುವಂತೆ ಅವರ ಪತ್ನಿ ಬಿನು ಜಾನ್ ಓಮನ್ ಅಧಿಕಾರಿಗಳನ್ನು ವಿನಂತಿಸಿದ್ದಾರೆ.

ಜಾನ್ ಅವರ ಕಂಪೆನಿ ಅಧಿಕಾರಿಗಳ ಪ್ರಕಾರ ಕಚೇರಿಯಿಂದ 4,000 ರಿಂದ 5,000 ಒಮಾನಿ ರಿಯಾಲ್ ಕಾಣೆಯಾಗಿದ್ದು ಕಚೇರಿಯಲ್ಲಿ ರಕ್ತದ ಕಲೆಗಳೂ ಕಂಡು ಬಂದಿವೆ ಹಾಗೂ ಅಲ್ಲಿನ ಸಿಸಿಟಿವಿ ಕ್ಯಾಮರಾಗಳು ಹಾನಿಗೊಂಡಿವೆ.

ಶನಿವಾರ ಪೆಟ್ರೋಲ್ ಬಂಕಿಗೆ ಬಂದ ಇನ್ನೊಬ್ಬ ಉದ್ಯೋಗಿ ಅಲ್ಲಿನ ಸ್ಥಿತಿಯನ್ನು ಗಮನಿಸಿ ಪೊಲೀಸರಿಗೆ ಮಾಹಿತಿ ನೀಡಿದ್ದರು.

‘‘ಜಾನ್ ಅವರ ಪತ್ನಿ ಬಿನು ಸರಿಯಾಗಿ ಆಹಾರ ಸೇವಿಸದೆ ಇಡೀ ದಿನ ದೇವರ ಕೋಣೆಯಲ್ಲಿ ಕಳೆಯುತ್ತಿದ್ದಾರೆ. ಅವರ ಮಕ್ಕಳೂ ಶಾಲೆಗೆ ಹೋಗುತ್ತಿಲ್ಲ. ಅವರು ಸುರಕ್ಷಿತವಾಗಿ ವಾಪಸಾಗುತ್ತಾರೆಂದು ನಾವು ಪ್ರಾರ್ಥಿಸುತ್ತೇವೆ. ನಾವು ಭಾರತದ ವಿದೇಶಾಂಗ ವ್ಯವಹಾರಗಳ ಸಚಿವಾಲಯ ಹಾಗೂ ಕೇರಳ ಸರಕಾರವನ್ನು ಸಂಪರ್ಕಿಸಿ ಸಹಾಯ ಯಾಚಿಸಿದ್ದೇವೆ,’’ಎಂದು ಜಾನ್ ಅವರ ಸಹೋದರ ಜೇಕಬ್ ಫಿಲಿಪ್ ಹೇಳಿದ್ದಾರೆ.

‘‘ಆತ ಒಳ್ಳೆಯ ವ್ಯಕ್ತಿಯಾಗಿದ್ದ. ಆದರೆ ಆತ ಹಣದೊಂದಿಗೆ ಪರಾರಿಯಾಗಿದ್ದಾನೆಂದು ಕೆಲವರು ಹೇಳುತ್ತಿದ್ದಾರೆ. ಆತ ಹಾಗೆ ಯಾವತ್ತೂ ಮಾಡುವವನಲ್ಲ. ಆತ ದೇವರ ಮೇಲೆ ಭಯಭಕ್ತಿಯಿರುವ ಮನುಷ್ಯನಾಗಿದ್ದ,’’ಎಂದೂ ಅವರು ಹೇಳಿದ್ದಾರೆ.

ಜಾನ್ ಅವರ ಹಿರಿಯ ಮಗ 12ನೆ ತರಗತಿಯಲ್ಲಿ ಕಲಿಯುತ್ತಿದ್ದರೆ ಕಿರಿಯ ಪುತ್ರಿ ಐದನೆ ತರಗತಿಯಲ್ಲಿದ್ದಾಳೆ.

ಜಾನ್ ಪ್ರಕರಣದ ತನಿಖೆಯ ಪ್ರಗತಿಯ ಬಗ್ಗೆ ತಮಗೆ ಯಾವುದೇ ಮಾಹಿತಿ ದೊರೆತಿಲ್ಲ ಎಂದು ಒಮನ್‌ನಲ್ಲಿರುವ ಅವರ ಸ್ನೇಹಿತರು ಹಾಗೂ ಅವರ ಕಂಪೆನಿಯ ಮ್ಯಾನೇಜರ್ ಕಶಿಫ್ ನಿಸಾರ್‌ಹೇಳುತ್ತಾರೆ. ಜಾನ್ ನಾಪತ್ತೆ ಕುರಿತು ಪೊಲೀಸರಿಗೆ ಮಾಹಿತಿ ನೀಡಿದ ಸಹೋದ್ಯೋಗಿಯನ್ನು ವಿಚಾರಣೆಗಾಗಿ ಕಸ್ಟಡಿಗೆ ತೆಗೆದುಕೊಂಡು ಬಿಡುಗಡೆ ಮಾಡಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X