Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ರೊಹಿಂಗ್ಯ ಮುಸ್ಲಿಮರಿಗೆ ರಮಝಾನ್ ಉಡುಗೊರೆ

ರೊಹಿಂಗ್ಯ ಮುಸ್ಲಿಮರಿಗೆ ರಮಝಾನ್ ಉಡುಗೊರೆ

ಭೇಟಿ ನೀಡಿ ಸಂತೈಸಿದ ಟರ್ಕಿಯ ವಿದೇಶ ಸಚಿವ

ವಾರ್ತಾಭಾರತಿವಾರ್ತಾಭಾರತಿ15 Jun 2016 5:24 PM IST
share
ರೊಹಿಂಗ್ಯ ಮುಸ್ಲಿಮರಿಗೆ ರಮಝಾನ್ ಉಡುಗೊರೆ

ನೇಪಿಡೋ, ಜೂ. 15: ಮ್ಯಾನ್ಮಾರ್ ಪ್ರವಾಸದಲ್ಲಿರುವ ಟರ್ಕಿಯ ವಿದೇಶ ಸಚಿವ ವೌಲುತ್ ಕಾವುಸೊಗ್ಲು ಸೋಮವಾರ ರಖೈನ್ ರಾಜ್ಯಕ್ಕೆ ಭೇಟಿ ನೀಡಿದರು. ಅಲ್ಲಿ ಸಂಜೆ ಅವರು ಸ್ಥಳೀಯ ಮುಸ್ಲಿಮರನ್ನು ಭೇಟಿಯಾಗಿ ಇಫ್ತಾರ್ ಕೂಟ ಏರ್ಪಡಿಸಿದರು.
ರಖೈನ್‌ಗೆ ತೆರಳುವ ಮುನ್ನ ಮಾಧ್ಯಮಗಳೊಂದಿಗೆ ಮಾತನಾಡಿದ ಕಾವುಸೊಗ್ಲು, ಮುಸ್ಲಿಮರಿಗೆ ಮಾತ್ರವಲ್ಲ, ಈ ಬಡ ಪ್ರದೇಶದಲ್ಲಿರುವ ಎಲ್ಲರಿಗೆ ಸಹಾಯ ಮಾಡಲು ಟರ್ಕಿ ನಿರ್ಧರಿಸಿದೆ ಎಂದು ಹೇಳಿದರು.
ತನ್ನ ಮ್ಯಾನ್ಮಾರ್ ಪ್ರವಾಸದ ವೇಳೆ ಕಾವುಸೊಗ್ಲು ದೇಶದ ಆಡಳಿತ ಪಕ್ಷದ ನಾಯಕಿ ಆಂಗ್ ಸಾನ್ ಸೂ ಕಿ, ಅಧ್ಯಕ್ಷ ಹಟಿನ್ ಕ್ಯಾವ್ ಮತ್ತು ಸಶಸ್ತ್ರ ಪಡೆಗಳ ಪ್ರಧಾನ ದಂಡನಾಯಕ ಮಿನ್ ಆಂಗ್ ಹಲಯಂಗ್‌ರನ್ನು ಭೇಟಿಯಾದರು.
ಈ ವರ್ಷದ ಮಾರ್ಚ್ ತಿಂಗಳಲ್ಲಿ ಅಧಿಕಾರಕ್ಕೆ ಬಂದಿರುವ ಮ್ಯಾನ್ಮಾರ್‌ನ ನೂತನ ಪ್ರಜಾಸತ್ತಾತ್ಮಕ ಸರಕಾರವನ್ನು ಶ್ಲಾಘಿಸಿದ ಅವರು, ದೇಶಕ್ಕೆ ನೀಡಲಾಗುತ್ತಿರುವ ‘‘ನೈತಿಕ ಮತ್ತು ಆರ್ಥಿಕ’’ ಬೆಂಬಲವನ್ನು ಮುಂದುವರಿಸುವುದಾಗಿ ಘೋಷಿಸಿದರು.
50 ವರ್ಷಗಳಿಗೂ ಅಧಿಕ ಅವಧಿಯಲ್ಲಿ ಅಸ್ತಿತ್ವದಲ್ಲಿದ್ದ ಸೇನಾ ಸರಕಾರದ ಜಾಗದಲ್ಲಿ ಪ್ರಜಾಪ್ರಭುತ್ವ ಸರಕಾರ ಅಸ್ತಿತ್ವಕ್ಕೆ ಬಂದಿದೆ.
ಇಫ್ತಾರ್‌ಗೂ ಮುನ್ನ ಸುಮಾರು 4,000 ರೊಹಿಂಗ್ಯರನ್ನು ಉದ್ದೇಶಿಸಿ ಮಾತನಾಡಿದ ಕಾವುಸೊಗ್ಲು, ಅವರೊಂದಿಗೆ ತಾನಿದ್ದೇನೆ ಎಂಬ ಭರವಸೆ ನೀಡಿದರು. ಸಿಟ್ವೆಯಲ್ಲಿ ಟರ್ಕಿ ಸರಕಾರವು ಟರ್ಕಿ ಸಹಕಾರ ಮತ್ತು ಸಮನ್ವಯ ಸಂಸ್ಥೆ (ಟಿಐಕೆಎ)ಯ ಮೂಲಕ ಶಾಲೆಗಳು, ಆಸ್ಪತ್ರೆಗಳು ಮತ್ತು ಮೂಲಸೌಕರ್ಯಗಳನ್ನು ನಿರ್ಮಿಸುವುದು ಎಂದು ಹೇಳಿದರು.
 ಇದೇ ಸಂಧರ್ಭದಲ್ಲಿ ಟಿಐಕೆಎ ನವೀಕರಿಸಿದ ಅನಾಥಾಲಯ ಮತ್ತು ಶಾಲೆಗೆ ಟರ್ಕಿ ವಿದೆಶ ಸಚಿವರು ಭೇಟಿ ನೀಡಿದರು. ಮ್ಯಾನ್ಮಾರ್ ಸರಕಾರ ಮತ್ತು ದೇಶದ ಮುಸ್ಲಿಮ್ ಸಮುದಾಯದ ನಡುವಿನ ಶಾಂತಿ ಪ್ರಕ್ರಿಯೆಗೆ ಬೆಂಬಲ ನೀಡುವುದನ್ನು ಟರ್ಕಿ ಮುಂದುವರಿಸುವುದು ಎಂದು ಈ ಸಂದರ್ಭದಲ್ಲಿ ಅವರು ಘೋಷಿಸಿದರು.
ಇತ್ತೀಚಿನ ದಿನಗಳಲ್ಲಿ ಮ್ಯಾನ್ಮಾರ್‌ನ ರೊಹಿಂಗ್ಯ ಮುಸ್ಲಿಮರ ಮೇಲೆ ನಡೆಯುತ್ತಿರುವ ಹಿಂಸಾಚಾರ ಪ್ರಮಾಣದಲ್ಲಿ ಹೆಚ್ಚಳವಾಗಿರುವುದನ್ನು ಸ್ಮರಿಸಬಹುದಾಗಿದೆ. ಮ್ಯಾನ್ಮಾರ್‌ನ ಶಿಬಿರಗಳಲ್ಲಿ ವಾಸಿಸುತ್ತಿರುವ ರೊಹಿಂಗ್ಯ ಮುಸ್ಲಿಮರು, ಇತರ ಜನಾಂಗೀಯ ಹಾಗೂ ಧಾರ್ಮಿಕ ಅಲ್ಪಸಂಖ್ಯಾತರು ಅಂತಾರಾಷ್ಟ್ರೀಯ ನೆರವನ್ನು ಅವಲಂಬಿಸುತ್ತಿದ್ದಾರೆ.
‘‘ಮಾನವೀಯ ನೆರವಿನ ಮುಖಾಂತರ ಇಲ್ಲಿನ ಜನರಿಗೆ ನೆರವು ನೀಡಲು ಟರ್ಕಿ ಸಿದ್ಧವಾಗಿದೆ. ಸ್ಥಳೀಯ ಆಡಳಿತ ಮತ್ತು ಸರಕಾರಗಳಿಗೂ ಸಹಕಾರ ನೀಡಲು ನಾವು ಸಿದ್ಧರಿದ್ದೇವೆ. ಪೌರತ್ವ ಮುಂತಾದ ವಿಷಯಗಳ ಬಗ್ಗೆ ಈಗಾಗಲೇ ಚರ್ಚೆಯನ್ನು ಕೈಗೆತ್ತಿಕೊಳ್ಳಲಾಗಿದೆ’’ ಎಂದರು.
ಅವರ ಈ ಭೇಟಿಯ ವೇಳೆ ಸ್ಥಳೀಯರಿಗೆ 50 ಕೆಜಿ ಅಕ್ಕಿ ಮತ್ತು ಇತರ ಆಹಾರ ಧಾನ್ಯಗಳನ್ನು ಟಿಐಕೆಎ ಮೂಲಕ ರಂಝಾನ್ ಕೊಡುಗೆ ರೂಪದಲ್ಲಿ ವಿತರಿಸಲಾಯಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X