Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಕಾಂಗ್ರೆಸ್ ಪಕ್ಷದಿಂದ ನಿಷ್ಠಾವಂತ...

ಕಾಂಗ್ರೆಸ್ ಪಕ್ಷದಿಂದ ನಿಷ್ಠಾವಂತ ಕಾರ್ಯಕರ್ತರಿಗೆ ಗೌರವ: ಶಾಸಕ ಲೋಬೊ

ನಿರ್ದೇಶಕರಾಗಿ ನೇಮಕಗೊಂಡ ಟಿ.ಕೆ. ಸುಧೀರ್, ಜೆ. ಸದಾಶಿವ ಅಮೀನ್‌ರಿಗೆ ಅಭಿನಂದನೆ

ವಾರ್ತಾಭಾರತಿವಾರ್ತಾಭಾರತಿ15 Jun 2016 5:43 PM IST
share
ಕಾಂಗ್ರೆಸ್ ಪಕ್ಷದಿಂದ ನಿಷ್ಠಾವಂತ ಕಾರ್ಯಕರ್ತರಿಗೆ ಗೌರವ: ಶಾಸಕ ಲೋಬೊ

ಮಂಗಳೂರು, ಜೂ.15: ಕಾಂಗ್ರೆಸ್ ಪಕ್ಷವು ನಿಷ್ಠಾವಂತ ಹಾಗೂ ಹಿರಿಯ ಕಾರ್ಯಕರ್ತರನ್ನು ಗುರುತಿಸಿ, ಪಕ್ಷಕ್ಕೆ ಅವರು ಸಲ್ಲಿಸಿರುವ ಸೇವೆಯನ್ನು ಪರಿಗಣಿಸಿ ಅವರನ್ನು ರಾಜ್ಯ ಸರಕಾರದ ವಿವಿಧ ನಿಗಮ, ಮಂಡಳಿಗಳಿಗೆ ನಿರ್ದೇಶಕರನ್ನಾಗಿ ನೇಮಿಸಿರುವುದು ಅತೀವ ಸಂತಸ ತಂದಿದೆ. ಈ ಮೂಲಕ ಪಕ್ಷವು ನಿಷ್ಠಾವಂತ ಕಾರ್ಯಕರ್ತರಿಗೆ ಗೌರವವನ್ನು ನೀಡಿದೆ ಎಂದು ಮಂಗಳೂರು ದಕ್ಷಿಣ ಕ್ಷೇತ್ರದ ಶಾಸಕ ಜೆ.ಆರ್.ಲೋಬೊ ಹೇಳಿದ್ದಾರೆ.

ಅವರು ಮಂಗಳೂರು ದಕ್ಷಿಣ ಬ್ಲಾಕ್ ಕಾಂಗ್ರೆಸ್ ಸಮಿತಿಯ ಮಾಸಿಕ ಸಭೆಯಲ್ಲಿ ಇತ್ತೀಚೆಗೆ ರಾಜ್ಯ ಸರಕಾರದ ವತಿಯಿಂದ ಕೆಎಸ್ಸಾರ್ಟಿಸಿ ನಿಗಮ ಮಂಡಳಿಗೆ ನಿರ್ದೇಶಕ ನೇಮಕಗೊಂಡ ಟಿ.ಕೆ. ಸುಧೀರ್ ಹಾಗೂ ಮೆಸ್ಕಾಂ ನಿರ್ದೇಶಕರಾಗಿ ನೇಮಕಗೊಂಡ ಜೆ. ಸದಾಶಿವ ಅಮೀನ್‌ರವರಿಗೆ ಅಭಿನಂದಿಸಿ ಮಾತನಾಡಿದರು.

ಇತ್ತೀಚೆಗೆ ನಡೆದ ವಿಧಾನ ಪರಿಷತ್ ಚುನಾವಣೆ ಹಾಗೂ ರಾಜ್ಯ ಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ತನ್ನ ಸ್ಥಾನಗಳನ್ನು ಗೆಲ್ಲುವುದರ ಮೂಲಕ ಕಾಂಗ್ರೆಸ್ ಪಕ್ಷ ಬಲಿಷ್ಠವಾಗಿದೆ ಎಂದು ತೋರಿಸಿಕೊಟ್ಟಿದೆ. ದೇಶದಲ್ಲಿ ಮೋದಿ ಸರಕಾರ ಚುನಾವಣೆಯ ಸಂದರ್ಭದಲ್ಲಿ ಕೊಟ್ಟ ಯಾವುದೇ ಆಶ್ವಾಸನೆಯನ್ನು ಪೂರೈಸದೇ ಇದ್ದುದರಿಂದ ತನ್ನ ವೈಫಲ್ಯಗಳನ್ನು ತೋರಿಸಿದೆ. ಇದರಿಂದ ಅವರ ಜನಪ್ರಿಯತೆ ದಿನದಿಂದ ದಿನಕ್ಕೆ ಕುಗ್ಗುತ್ತಾ ಬಂದಿದೆ. ಮುಂದಿನ ಮಹಾಚುನಾವಣೆಯಲ್ಲಿ ಮತ್ತೆ ಕೇಂದ್ರದಲ್ಲಿ ಕಾಂಗ್ರೆಸ್ ಸರಕಾರ ಅಸ್ತಿತ್ವಕ್ಕೆ ಬರಲಿದೆ ಎಂದರು.

ಸಭೆಯಲ್ಲಿ ಉಪಸ್ಥಿತರಿದ್ದ ಕರ್ನಾಟಕ ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ ಮಾತನಾಡಿ, ವಿಧಾನಪರಿಷತ್‌ನ 4 ಸ್ಥಾನ ಹಾಗೂ ರಾಜ್ಯ ಸಭೆಯ 3 ಸ್ಥಾನಗಳನ್ನು ಗೆದ್ದುಕೊಳ್ಳುವುದರ ಮೂಲಕ ಕಾಂಗ್ರೆಸ್ ತನ್ನ ಬಲವನ್ನು ತೋರಿಸಿಕೊಂಡಿದೆ. 2018ರಲ್ಲಿ ನಡೆಯಲಿರುವ ರಾಜ್ಯ ವಿಧಾನಸಭೆ ಚುನಾವಣೆಗೆ ನಾವು ಈಗಿಂದಲೇ ತಯಾರಿ ನಡೆಸಬೇಕು. ಸರಕಾರದ ಜನಪ್ರಿಯ ಕಾರ್ಯಕ್ರಮಗಳನ್ನು ಜನತೆಗೆ ತಲುಪಿಸುವಲ್ಲಿ ಶ್ರಮಿಸಬೇಕು ಎಂದರು.

ಬ್ಲಾಕ್ ಅಧ್ಯಕ್ಷ ಬಾಲಕೃಷ್ಣ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಸಭೆಯಲ್ಲಿ ಮಾಜಿ ಮೇಯರ್ ಜೆಸಿಂತಾ ಅಲ್ಫ್ರೆಡ್, ಕಾರ್ಪೊರೇಟರ್‌ಗಳಾದ ರತಿಕಲಾ, ಶೈಲಜಾ, ಕವಿತಾ ವಾಸು, ಪ್ರವೀಣ್ ಆಳ್ವ, ಆಶಾ ಡಿಸಿಲ್ವ, ಪಕ್ಷದ ಮುಖಂಡರಾದ ಪ್ರಭಾಕರ ಶ್ರೀಯಾನ್, ಎಂ. ಫಾರೂಕ್, ಶೇಖರ ಸುವರ್ಣ, ನಮಿತಾ ರಾವ್. ದುರ್ಗಾಪ್ರಸಾದ್, ರಮಾನಂದ ಪೂಜಾರಿ, ಸುರೇಶ್ ಶೆಟ್ಟಿ, ಬೆನೆಟ್ ಡಿಮೆಲ್ಲೊ, ಭಾಸ್ಕರ ರಾವ್, ಶಾಫಿ ಬೋಳಾರ, ಕೃತಿನ್ ಕುಮಾರ್, ಸುನಿಲ್ ದೇವಾಡಿಗ, ವಿದ್ಯಾ, ಹುಸೈನ್ ಬೋಳಾರ, ಸೀತಾರಾಮ, ಅಶ್ರಫ್ ಬಜಾಲ್, ರಫೀಕ್ ಕಣ್ಣೂರು ಮೊದಲಾದವರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X