Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಇನ್ನು ವಿಮಾನಯಾನ ಅಗ್ಗ !

ಇನ್ನು ವಿಮಾನಯಾನ ಅಗ್ಗ !

ನಾಗರೀಕ ವಿಮಾನಯಾನದ ಹೊಸ ನೀತಿಗೆ ಸಂಪುಟ ಅಸ್ತು

ವಾರ್ತಾಭಾರತಿವಾರ್ತಾಭಾರತಿ15 Jun 2016 6:17 PM IST
share
ಇನ್ನು ವಿಮಾನಯಾನ ಅಗ್ಗ !

 ಹೊಸದಿಲ್ಲಿ, ಜೂ.21: ವಿಮಾನ ಯಾನ ಸಂಸ್ಥೆಗಳ ಸಾಗರೋತ್ತರ ಹಾರಾಟ ನಿಯಮ ಸರಳೀಕರಣ, ಪ್ರಾದೇಶಿಕ ವಿಮಾನ ಸಂಪರ್ಕ ಹೆಚ್ಚಳ ಹಾಗೂ ಹೆಚ್ಚು ಜನರು ವಿಮಾನ ಬಳಸುವಂತೆ ಉತ್ತೇಜನವನ್ನು ಬಯಸಿದ್ದ. ಬಹು ವಿಳಂಬಿತ ನಾಗರಿಕ ವಿಮಾನ ಯಾನದ ಹೊಸ ನೀತಿಯೊಂದಕ್ಕೆ ಕೇಂದ್ರ ಸಂಪುಟವು ಬುಧವಾರ ಬೆಳಗ್ಗೆ ಅನುಮೋದನೆ ನೀಡಿದೆ.

ಸಣ್ಣ ನಗರಗಳು ಹಾಗೂ ಪಟ್ಟಣಗಳ ನಡುವಿನ ಒಂದು ತಾಸಿನೊಳಗಿನ ಪ್ರಯಾಣಕ್ಕೆ ರೂ.2,500 ಹಾಗೂ ಅರ್ಧ ಗಂಟೆಯೊಳಗಿನ ಪ್ರಯಾಣಕ್ಕೆ ರೂ.1200 ರ ಶುಲ್ಕ ಮಿತಿಯನ್ನು ನೀತಿಯು ಪ್ರಸ್ತಾವಿಸಿದೆ. ಸರಕಾರವು ಪ್ರಯಾಣ ದರವನ್ನು ಅಗ್ಗಗೊಳಿಸಿ, ಹೆಚ್ಚು ಜನರು ವಿಮಾನ ಯಾನ ಕೈಗೊಳ್ಳುವಂತಹ ವ್ಯವಸ್ಥೆಯೊಂದನ್ನು ಸರಕಾರ ಯೋಜಿಸಿದೆ.

ವಿಮಾನ ಸಂಸ್ಥೆಗಳಿಗೆ ಸಹಾಯ ಹಾಗೂ ಉತ್ತೇಜಕಗಳನ್ನು ನೀಡಿ ಸಣ್ಣ ಪಟ್ಟಣಗಳು ಹಾಗೂ ನಗರಗಳ ನಡುವಿನ ಮಾರ್ಗಗಳಲ್ಲಿ ಸಂಪರ್ಕ ಹೆಚ್ಚಿಸುವುದನ್ನು ನೀತಿ ಪ್ರಸ್ತಾವಿಸಿದೆ.

ಸರಕಾರವು ದೇಶಿ ವಲಯದಲ್ಲಿ 2022ದೊಳಗೆ ವರ್ಷಕ್ಕೆ 30 ಕೋಟಿ ಹಾಗೂ 2025ರೊಳಗೆ 50 ಕೋಟಿ ವಿಮಾನ ಟಿಕೆಟ್‌ಗಳ ಮಾರಾಟವನ್ನು ಕಾಣುವ ಆಶಾವಾದದಲ್ಲಿದೆ. ಅಂತಹ ಮಾರ್ಗಗಳಲ್ಲಿ ಹಾರಾಟದ ಮೂಲಕ ವಿಮಾನ ಸಂಸ್ಥೆಗಳಿಗಾಗುವ ನಷ್ಟದ ಶೇ.80ನ್ನು ಕೇಂದ್ರವು ಮರುಪಾವತಿಸುವುದೆಂದು ಅದು ಹೇಳಿದೆ.

ಅಂತಾರಾಷ್ಟ್ರೀಯ ಪ್ರಯಾಣಕ್ಕೆ ವಾರ್ಷಿಕ ಟಿಕೆಟ್ ಮಾರಾಟದ ಗುರಿ 2027ರೊಳಗೆ 20 ಕೋಟಿಯಾಗಿದೆ. ದೇಶೀಯ ಹಾಗೂ ಅಂತಾರಾಷ್ಟ್ರೀಯ ಹಾರಾಟಗಳಲ್ಲಿ ಪ್ರಾದೇಶಿಕ ಸಂಪರ್ಕ ನಿಧಿಗೆ ಶೇ.2 ತೆರಿಗೆ ವಿಧಿಸುವ ಪ್ರಸ್ತಾವ ಕರಡು ನೀತಿಯಲ್ಲಿದೆ.

20 ವಿಮಾನಗಳಿರುವ ಹೊಸ ವಿಮಾನ ಸಂಸ್ಥೆಗಳಿಗೆ ಅಂತಾರಾಷ್ಟ್ರೀಯ ವಿಮಾನ ಸಂಚಾರ ನಡೆಸಲು ಅವಕಾಶ ನೀಡುವ ಪ್ರಸ್ತಾವವೊಂದನ್ನು ವಾಯು ಯಾನ ಉದ್ಯಮವು ನೀತಿಯಲ್ಲಿ ಎದುರು ನೋಡುತ್ತಿದೆ. ಪ್ರಸ್ತುತ, ಕೇವಲ 20 ವಿಮಾನ ಗಳಿಸುವುದು ಮಾತ್ರವಲ್ಲದೆ ದೇಶೀಯ ಹಾರಾಟದಲ್ಲಿ ಕನಿಷ್ಠ 5 ವರ್ಷ ಅನುಭವವಿರುವ ವಿಮಾನ ಸಂಸ್ಥೆಗಳಿಗಷ್ಟೇ ಅಂತಾರಾಷ್ಟ್ರೀಯ ಕಾರ್ಯಾಚರಣೆಗೆ ಅವಕಾಶವಿದೆ.

 ಈ ನೀತಿಯ ಬಗ್ಗೆ ಕಳೆದ 18 ತಿಂಗಳುಗಳಲ್ಲಿ ವಿವಿಧ ಸಚಿವಾಲಯಗಳ ನಡುವೆ ಹಲವು ಸುತ್ತುಗಳ ಚರ್ಚೆ ನಡೆದಿದೆ. 2015ರಲ್ಲಿ ಈ ಕರಡು ನೀತಿಯನ್ನು ಪರಿಷ್ಕರಿಸಲಾಗಿತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X