Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಬೈಲೂರಿನಲ್ಲಿ ಜಿ.ಪಂ.ಸದಸ್ಯನ ಕೊಲೆ ಯತ್ನ

ಬೈಲೂರಿನಲ್ಲಿ ಜಿ.ಪಂ.ಸದಸ್ಯನ ಕೊಲೆ ಯತ್ನ

ಏಳು ಜನರಿಗೆ ತಲವಾರಿನಿಂದ ಹಲ್ಲೆ

ವಾರ್ತಾಭಾರತಿವಾರ್ತಾಭಾರತಿ16 Jun 2016 7:50 PM IST
share
ಬೈಲೂರಿನಲ್ಲಿ ಜಿ.ಪಂ.ಸದಸ್ಯನ ಕೊಲೆ ಯತ್ನ

ಕಾರ್ಕಳ, ಜೂ.16: ಬೈಲೂರು ಜಿ.ಪಂ.ಸದಸ್ಯ ಸುಮಿತ್ ಶೆಟ್ಟಿ ಕೌಡೂರು ಎಂಬಾತನ ಮೇಲೆ ಓಮ್ನಿಯಲ್ಲಿ ಬಂದ ತಂಡವು ಕೊಲೆ ಯತ್ನಕ್ಕೆ ಮುಂದಾಗಿದ್ದು, ಸುಮಿತ್ ಶೆಟ್ಟಿ ಅನುಪಸ್ಥಿತಿಯನ್ನು ಕಂಡ ತಂಡ ಅಲ್ಲಿದ್ದ ಏಳು ಜನರ ಮೇಲೆ ತಲವಾರಿನಿಂದ ಹಲ್ಲೆ ನಡೆಸಿ ಪರಾರಿಯಾಗಿದೆ.ಬಿಜೆಪಿ ಯುವ ಮೋರ್ಚಾದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹಾಗೂ ಜಿ.ಪಂ.ಸದಸ್ಯ ಸುಮಿತ್ ಶೆಟ್ಟಿ ಹತ್ಯೆಗೆ ಸಂಚು ರೂಪಿಸಿ, ಈ ಹಲ್ಲೆ ಪ್ರಕರಣ ನಡೆದಿದೆ ಎನ್ನಲಾಗಿದ್ದು, ಒರುವಾಡಿ ಪ್ರವೀಣ್ ಕುಲಾಲ್ ಮತ್ತು ಕೊಡಿಕೆರೆ ವಿಶ್ವನಾಥ ಪೂಜಾರಿ ನೇತೃತ್ವದ ತಂಡ ದಾಳಿ ನಡೆಸಿದೆ ಎನ್ನಲಾಗಿದೆ.

ಎರಡು ದಿನಗಳ ಹಿಂದೆ ವಿಶ್ವನಾಥ ಪೂಜಾರಿ ಕೋಡಿಕಲ್ ಎಂಬಾತ ಸುಮಿತ್ ಶೆಟ್ಟಿಗೆ ಫೋನಾಯಿಸಿ ಹಣ ನೀಡುವಂತೆ ಒತ್ತಾಯಿಸಿದ್ದ. ಬಳಿಕ ಜೂ.15ರಂದು ಮಧ್ಯಾಹ್ನದ ವೇಳೆ ಒರುವಾಡಿ ಪ್ರವೀಣ್ ಕುಲಾಲ್ ಸುಮಿತ್ ಶೆಟ್ಟಿ ಬಳಿ ಫೋನಾಯಿಸಿ ನಿನ್ನಲ್ಲಿ ನನಗೆ ಮಾತನಾಡಲಿಕ್ಕಿದೆ ಎಂದಿದ್ದ. ಬಳಿಕ ಹಿರಿಯಡ್ಕದಲ್ಲಿ ಸುಮಿತ್ ಶೆಟ್ಟಿಯನ್ನು ಭೇಟಿ ಮಾಡಿ, ಆತ ಕೂಡಾ ಹಣದ ಬೇಡಿಕೆ ಮುಂದಿಟ್ಟಿದ್ದ. ನನ್ನಲ್ಲಿ ಹಣ ಇಲ್ಲ ಎಂದು ಸುಮಿತ್ ಶೆಟ್ಟಿ ನಿರಾಕರಿಸಿದ ಹಿನ್ನೆಲೆಯಲ್ಲಿ ಆತ ಕೋಪಗೊಂಡಿದ್ದ ಎನ್ನಲಾಗಿದೆ.

ಅದೇ ದಿನ ರಾತ್ರಿ ಸುಮಿತ್ ಶೆಟ್ಟಿಗೆ ರೌಡಿಶೀಟರ್ ತೆಳ್ಳಾರು ಸೋಮು ಎಂಬಾತ ಕೂಡಾ ಫೆನಾಯಿಸಿ, ನನಗೆ ಹಣ ನೀಡಬೇಕೆಂದನಲ್ಲದೆ, ಹಣ ಪಡೆಯಲು ರಾತ್ರಿ ಸಮಾರು 8:30ರ ವೇಳೆ ಬೈಲೂರಿಗೆ ಆಗಮಿಸಿದ್ದ. ಅದೇ ವೇಳೆ ಸುಮಿತ್ ನೇತೃತ್ವದ ತಂಡ ಸೋಮುನನ್ನು ಅಲ್ಲಿಯೇ ಹಿಡಿದಿಟ್ಟು, ಒರುವಾಡಿ ಪ್ರವೀಣನಿಗೆ ಕರೆ ಮಾಡಿದ್ದರು. ಪ್ರವೀಣ್ ತಾನು ತಕ್ಷಣ ಬರುವುದಾಗಿ ಹೇಳಿಕೊಂಡಿದ್ದ. ಆದರೆ ರಾತ್ರಿ 10:30ರ ತನಕ ಬೈಲೂರಿಗೆ ಆಗಮಿಸದಿರುವುದರಿಂದ ಕಾದು ಕುಳಿತ ಯುವಕರ ತಂಡದ ಪೈಕಿ ಹೆಚ್ಚಿನವರು ತಮ್ಮಮ್ಮ ಮನೆಗೆ ತೆರಳಿದ್ದರು.

ಈ ವೇಳೆ ಒರುವಾಡಿ ಪ್ರವೀಣ್ ಮತ್ತು ಆತನ ಇತರ ಸಹಚರರು ಸೇರಿ ಒಟ್ಟು 13 ಜನರ ತಂಡವು ಓಮ್ನಿ ಕಾರಿನಿಂದ ಬೈಲೂರಿಗಾಗಮಿಸಿತ್ತು. ಕಾರಿನಲ್ಲಿ ಇಳಿದಾಗ ಪ್ರವೀಣ್ ಪಿಸ್ತೂಲ್‌ನಿಂದ ನೆಲಕ್ಕೆ ಗುಂಡು ಹಾರಿಸಿ, ಸುಮಿತ್ ಶೆಟ್ಟಿ ಎಲ್ಲಿ ಎಂದು ಗದರಿಸಿದ್ದ. ಈ ವೇಳೆ ಅಲ್ಲಿ ಸುತ್ತ ನೆರೆದಿದ್ದವರಿಗೆ ಓಮ್ನಿಯಲ್ಲಿ ಬಂದ ಪ್ರವೀಣನ ಸಹಚರರು ತಲುವಾರಿನಿಂದ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ.

ತಲವಾರು ಬೀಸಿದ ಪರಿಣಾಮ ದೀಪಕ್ ನಕ್ರೆ, ಸುಧೀರ್ ನಿಟ್ಟೆ, ದೇವದಾಸ್ ಜೋಡುರಸ್ತೆ, ಅಮಿತ್ ಶೆಟ್ಟಿ ಜೋಡುರಸ್ತೆ, ವಾಸು ರಾವ್ ಕಾರ್ಕಳ, ರಾಕೇಶ್, ಸಂದೀಪ್ ಎಂಬವರು ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ. ಈ ಬಗ್ಗೆ ಕಾರ್ಕಳ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X