Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ದೇರಳಕಟ್ಟೆ: ಕೆ.ಎಸ್.ಹೆಗ್ಡೆ...

ದೇರಳಕಟ್ಟೆ: ಕೆ.ಎಸ್.ಹೆಗ್ಡೆ ಆಸ್ಪತ್ರೆಯಲ್ಲಿ ರಕ್ತದಾನಿಗಳ ದಿನಾಚರಣೆ

ವಾರ್ತಾಭಾರತಿವಾರ್ತಾಭಾರತಿ16 Jun 2016 9:00 PM IST
share
ದೇರಳಕಟ್ಟೆ: ಕೆ.ಎಸ್.ಹೆಗ್ಡೆ ಆಸ್ಪತ್ರೆಯಲ್ಲಿ ರಕ್ತದಾನಿಗಳ ದಿನಾಚರಣೆ

ಕೊಣಾಜೆ, ಜೂ.16: ರಕ್ತದಾನ ಎನ್ನುವುದು ಒಂದು ಪುಣ್ಯದ ಕೆಲಸವಾಗಿದ್ದು, ರಕ್ತದಾನ ಮಾಡುವ ವಿಷಯದಲ್ಲಿ ಇಂದಿಗೂ ಹಲವರಲ್ಲಿ ತಪ್ಪುಕಲ್ಪನೆ ಬೇರೂರಿದೆ. ಇಂತಹ ಕಲ್ಪನೆಯಿಂದ ಹೊರಬಂದು ರಕ್ತದಾನ ಮಾಡಿ ಇನ್ನೊಬ್ಬರ ಜೀವ ಉಳಿಸಿ ಎಂದು ಕೆ.ಎಸ್.ಹೆಗ್ಡೆ ಮೆಡಿಕಲ್ ಅಕಾಡೆಮಿಯ ಡೀನ್ ಡಾ.ಸತೀಶ್ ಕುಮಾರ್ ಭಂಡಾರಿ ಹೇಳಿದ್ದಾರೆ.

ಕೆ.ಎಸ್.ಹೆಗ್ಡೆ ಮೆಡಿಕಲ್ ಅಕಾಡೆಮಿ ವತಿಯಿಂದ ಪೆಥಾಲಜಿ ವಿಭಾಗ ಹಾಗೂ ಕ್ಷೇಮಾ ವಿದ್ಯಾರ್ಥಿ ಕೌನ್ಸಿಲ್ ಸಹಕಾರದಲ್ಲಿ ಗುರುವಾರ ದೇರಳಕಟ್ಟೆ ಜಸ್ಟೀಸ್ ಕೆ.ಎಸ್.ಹೆಗ್ಡೆ ಚಾರಿಟೇಬಲ್ ಆಸ್ಪತ್ರೆಯಲ್ಲಿ ವಿಶ್ವ ರಕ್ತದಾನಿಗಳ ದಿನದ ಪ್ರಯುಕ್ತ ಅಯೋಜಿಸಲಾಗಿದ್ದ ರಕ್ತದಾನ ಶಿಬಿರ ಹಾಗೂ ಜನಜಾಗೃತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ರಕ್ತದ ಗುಂಪುಗಳನ್ನು ವರ್ಗೀಕರಿಸಿದ ಕಾರ್ಲ್ ಲಾಂಡ್ ಸ್ಟನ್ನರ್ ಜನ್ಮ ದಿನದ ಪ್ರಯುಕ್ತ ಪ್ರತಿವರ್ಷ ಜೂ.14ರಂದು ವಿಶ್ವ ರಕ್ತದಾನಿಗಳ ದಿನವನ್ನು ಆಚರಿಸಲಾಗುತ್ತಿದೆ. ಇಂದು ರಕ್ತದ ಕೊರತೆಯಿಂದ ಅದೆಷ್ಟೋ ಮಂದಿ ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ಈ ನಿಟ್ಟಿನಲ್ಲಿ ಅಯೋಜಿಸಲಾಗಿರುವ ಕಾರ್ಯಕ್ರಮ ಶ್ಲಾಘನೀಯ. ಕೆ.ಎಸ್.ಹೆಗ್ಡೆ ಮೆಡಿಕಲ್ ಅಕಾಡೆಮಿಯಲ್ಲಿ 3,000 ವಿದ್ಯಾರ್ಥಿಗಳ ಸಹಿತ ವೈದ್ಯರು, ಸಿಬ್ಬಂದಿ ಇದ್ದು ರಕ್ತದಾನಿಗಳ ಪಟ್ಟಿಯಲ್ಲಿ ಹೆಸರು ನೋಂದಾಯಿಸುವ ಭರವಸೆ ಇದೆ ಎಂದರು.

ಮನುಷ್ಯನ ಶರೀರದಲ್ಲಿ ಏಳು ಲೀಟರ್‌ನಷ್ಟು ರಕ್ತ ಇದ್ದು, 350 ಮಿ. ರಕ್ತ ತೆಗೆದರೆ ಯಾವುದೇ ಅಪಾಯ ಸಂಭವಿಸುವುದಿಲ್ಲ. ಆದರೂ ರಕ್ತ ತೆಗೆದರೆ ಶರೀರ ಕ್ಷೀಣವಾಗುವ, ಸೂಜಿ ಚುಚ್ಚುವ ಸಂದರ್ಭ ಅದರಿಂದ ರೋಗ ಬರುತ್ತದೆ, ಹೀಗೆ ವಿವಿಧ ರೀತಿಯ ತಪ್ಪುಕಲ್ಪನೆಗಳು ಜನರಲ್ಲಿವೆ. ಇಂದು ರಕ್ತದ ಕೊರತೆಯಿಂದ ಅಪಘಾತ, ಹೆರಿಗೆ ಮುಂತಾದ ಪ್ರಕರಣದಲ್ಲಿ ಮಹಿಳೆಯರು, ಮಕ್ಕಳ ಸಹಿತ ಪ್ರಾಣ ಹಾನಿಯಾಗುತ್ತಿದೆ. ಇದನ್ನು ಗಮನದಲ್ಲಿಟ್ಟುಕೊಂಡು ರಕ್ತದಾನ ಮಾಡಿ ಇನ್ನೊಬ್ಬರ ಪಾಲಿನ ಹೀರೊ ಆಗಿ ಎಂದು ತಿಳಿಸಿದರು.

ಕಾರ್ಯಕ್ರಮದ ಪ್ರಯುಕ್ತ ಕಿರುಚಿತ್ರ, ಕಿರುನಾಟಕದ ಮೂಲಕ ರಕ್ತದಾನದ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲಾಯಿತು. ಬಳಿಕ ರಕ್ತದಾನ ಶಿಬಿರ ನಡೆಯಿತು. ಕ್ಷೇಮಾ ಕುಲಸಚಿವ ಡಾ.ಜಯಪ್ರಕಾಶ್ ಶೆಟ್ಟಿ, ವೈದ್ಯಕೀಯ ಅಧೀಕ್ಷಕಿ ಕರುಣಾ ರಮೇಶ್ ಕುಮಾರ್, ಸಾಮಾನ್ಯ ಔಷಧ ವಿಭಾಗದ ಮುಖ್ಯಸ್ಥ ಡಾ.ಪಿ.ಎಸ್. ಪ್ರಕಾಶ್ ಹಾಗೂ ನಿಟ್ಟೆ ವಿವಿ ಎನ್ನೆಸ್ಸೆಸ್ ಕಾರ್ಯ ನಿರ್ವಹಣಾಧಿಕಾರಿ ಡಾ.ಮುರಳೀ ಮೋಹನ್ ಚೂಂತಾರು ಉಪಸ್ಥಿತರಿದ್ದರು.

ರಕ್ತದಾನಿಗಳಾದ ಸುಶಿ ಕಣ್ಣೂರು, ಅಜಿತ್ ದೇವಾಸ್ ಜಾರ್ಜ್ ಹಾಗೂ ದೇವಿಕಾ ಕೊಲ್ಲೂರು ಅನುಭವ ಹಂಚಿಕೊಂಡರು. ವಿದ್ಯಾರ್ಥಿನಿ ಅನಿತಾ ವಂದಿಸಿದರು. ಸಂಜನಾ ಕಾರ್ಯಕ್ರಮ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X