Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಇಂಗ್ಲೀಷ್ ಏಕಾಧಿಪತ್ಯದಿಂದ ದೇಶಿ ಭಾಷೆಗಳ...

ಇಂಗ್ಲೀಷ್ ಏಕಾಧಿಪತ್ಯದಿಂದ ದೇಶಿ ಭಾಷೆಗಳ ಸ್ಥಾನ ಪಲ್ಲಟ

ಸಂಸ್ಕೃತ ವಿವಿ ಸಂಸ್ಥಾಪನಾ ದಿನಾಚರಣೆ, ನಿವೃತ್ತ ಅಧ್ಯಾಪಕರಿಗೆ ಸನ್ಮಾನ

ವಾರ್ತಾಭಾರತಿವಾರ್ತಾಭಾರತಿ16 Jun 2016 11:57 PM IST
share
ಇಂಗ್ಲೀಷ್ ಏಕಾಧಿಪತ್ಯದಿಂದ ದೇಶಿ ಭಾಷೆಗಳ ಸ್ಥಾನ ಪಲ್ಲಟ

 ಬೆಂಗಳೂರು, ಜೂ.16: ರಾಜ್ಯದಲ್ಲಿನ ವಿಶ್ವವಿದ್ಯಾನಿಲಯ ಹಾಗೂ ಪದವಿ ಕಾಲೇಜುಗಳಲ್ಲಿನ ಬಹುತೇಕ ಪ್ರಾಧ್ಯಾಪಕರಿಗೆ ಹಳಗನ್ನಡ ಕೃತಿಗಳನ್ನು ಅಭ್ಯಾಸ ಮಾಡಿ ಬೋಧಿಸಲು ಬರುವುದಿಲ್ಲ ಎಂದು ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷ ಡಾ.ಬಂಜಗೆರೆ ಜಯಪ್ರಕಾಶ್ ಬೇಸರ ವ್ಯಕ್ತಪಡಿಸಿದ್ದಾರೆ.
ನಗರದ ಕಸಾಪದಲ್ಲಿ ಕರ್ನಾಟಕ ಸಂಸ್ಕೃತ ವಿಶ್ವವಿದ್ಯಾಲಯ ಆಯೋಜಿಸಿದ್ದ ವಿಶ್ವವಿದ್ಯಾನಿಲಯದ ಸಂಸ್ಥಾಪನಾ ದಿನಾಚರಣೆ ಹಾಗೂ ನಿವೃತ್ತ ಅಧ್ಯಾಪಕರಿಗೆ ಸನ್ಮಾನ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.
 
 ಯಾವುದೇ ಭಾಷೆಯಾಗಲಿ ನಿರಂತರ ಬಳಕೆ ಮತ್ತು ಪರಿಶ್ರಮದಿಂದ ತನ್ನತನವನ್ನು ಉಳಿಸಿಕೊಳ್ಳಲು ಸಾಧ್ಯ. ಇಲ್ಲದಿದ್ದರೆ ಭಾಷೆಯ ಮೂಲ ಸೌಂದರ್ಯವನ್ನು ಆಸ್ವಾದಿಸಿ ಪಾಠ ಮಾಡಲು ಅಸಾಧ್ಯ. ಆದುದರಿಂದಲೇ ಇಂದು ನಿರಂತರ ಬಳಕೆ ಇಲ್ಲದ ಕಾರಣ ಸಂಸ್ಕೃತ, ಹಳಗನ್ನಡ ಭಾಷೆಗಳು ಅಳಿವಿನ ಅಂಚಿಗೆ ತಲುಪಿವೆ. ಹೀಗಾಗಿ ವಿಶ್ವ ವಿದ್ಯಾನಿಲಯ ಹಾಗೂ ಪದವಿ ಕಾಲೇಜುಗಳ ಪ್ರಾಧ್ಯಾಪಕರು ಹಳಗನ್ನಡ ಹಾಗೂ ಸಂಸ್ಕೃತವನ್ನು ಅಭ್ಯಾಸ ಮಾಡುವುದನ್ನು ರೂಢಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.

ಬಹಳ ಹಿಂದಿನ ದಿನಗಳಲ್ಲಿ ಸಂಸ್ಕೃತವನ್ನು ಅಭ್ಯಾಸ ಮಾಡುತ್ತಿದ್ದವರೆಲ್ಲ ಇಂದು ಇಂಗ್ಲಿಷ್ ಭಾಷೆಯ ಮೊರೆ ಹೋಗಿರುವುದರ ಪರಿಣಾಮ ಸಂಸ್ಕೃತ ಭಾಷೆಯೆ ಮರೆಯಾಗುತ್ತಿದ್ದು, ಇದೀಗ ಹಳಗನ್ನಡವೂ ಸೇರಿಕೊಂಡಿದೆ. ಒಂದು ಕಡೆ ದೇಶಿ ಭಾಷೆಗಳು ನೆಲೆ ಕಳೆದುಕೊಳ್ಳುತ್ತಿರುವ ಹಿನ್ನೆಲೆಯಲ್ಲಿಯೇ ಪದವಿ ಪಠ್ಯಗಳಲ್ಲಿ ಹಳಗನ್ನಡ ಪಾಠಗಳು ಬೇಡ ಎಂದು ಪಠ್ಯಪುಸ್ತಕ ಸಮಿತಿ ತೀರ್ಮಾನ ಮಾಡುವ ಹಂತಕ್ಕೆ ಬಂದಿರುವುದು ದುರದುಷ್ಟಕರ ಸಂಗತಿ ಎಂದು ಹೇಳಿದರು. ಸಂಸ್ಕೃತದಲ್ಲಿರುವ ಸಂಪ್ರದಾಯ ಪದ್ಧತಿಗಳು, ಮಂತ್ರಗಳು, ಸ್ತೋತ್ರಗಳನ್ನು ನೋಡಿ ಅದು ಬ್ರಾಹ್ಮಣರಿಗೆ ಸೀಮಿತವಾದ ಭಾಷೆ ಎಂಬ ಭಾವನೆ ಮೂಡುತ್ತದೆ. ಆದರೆ, ಇದಿಷ್ಟೇ ಸಂಸ್ಕೃತ ಭಾಷೆಯಲ್ಲ. ಸಂಸ್ಕೃತ 500 ವರ್ಷಗಳ ಹಿಂದೆ ರಾಜ್ಯದಲ್ಲಿ ಆಡಳಿತ ಭಾಷೆಯಾಗಿ, ವಿದ್ವಾಂಸರ ಭಾಷೆಯಾಗಿ, ಶಾಸ್ತ್ರ ಮತ್ತು ಪೌರೋಹಿತ್ಯ ಭಾಷೆಯಾಗಿತ್ತು. ಕಾಲ ಕ್ರಮೇಣ ಬದಲಾದಂತೆ ಭಾಷೆಗಳು ಬದಲಾದ ಹಿನ್ನೆಲೆಯಲ್ಲಿ ಅದು ವಿದ್ವಾಂಸ ಭಾಷೆಯಾಗಿ ಮಾತ್ರ ಉಳಿದುಕೊಂಡಿದೆ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ವಿಶ್ರಾಂತ ಕುಲಪತಿ ಪ್ರೊ.ಕೆ.ವಿ.ರಾಮಕೃಷ್ಣಮಾಚಾರ್ಯ, ಕರ್ನಾಟಕ ಸಂಸ್ಕೃತ ವಿಶ್ವವಿದ್ಯಾಲಯದ ಕುಲಸಚಿವ ಪ್ರೊ.ವೈ.ಎಸ್.ಸಿದ್ದೇಗೌಡ ಉಪಸ್ಥಿತರಿದ್ದರು. ಇದೇ ವೇಳೆಯಲ್ಲಿ ವಿಶ್ವವಿದ್ಯಾನಿಲಯದಲ್ಲಿ ಸೇವೆ ಸಲ್ಲಿಸಿ ನಿವೃತ್ತರಾದ ಪ್ರಾಧ್ಯಾಪಕರಿಗೆ ಸನ್ಮಾನಿಸಿ ಗೌರವಿಸಲಾಯಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X