Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಆಮ್ ಆದ್ಮಿ ವಕ್ತಾರೆ ಅಲ್ಕಾ ಅಮಾನತು

ಆಮ್ ಆದ್ಮಿ ವಕ್ತಾರೆ ಅಲ್ಕಾ ಅಮಾನತು

ಸಚಿವರ ರಾಜೀನಾಮೆ ಕುರಿತು ಭಿನ್ನ ಹೇಳಿಕೆ

ವಾರ್ತಾಭಾರತಿವಾರ್ತಾಭಾರತಿ16 Jun 2016 11:57 PM IST
share
ಆಮ್ ಆದ್ಮಿ ವಕ್ತಾರೆ ಅಲ್ಕಾ ಅಮಾನತು


ಹೊಸದಿಲ್ಲಿ, ಜೂ.16: ಭ್ರಷ್ಟಾಚಾರ ಆರೋಪ ಹೊತ್ತ ಸಚಿವರೊಬ್ಬರ ರಾಜೀನಾಮೆ ಕುರಿತು ಭಿನ್ನ ಹೇಳಿಕೆ ನೀಡಿದ ಆರೋಪದ ಮೇಲೆ ಆಮ್ ಆದ್ಮಿ ಪಾರ್ಟಿಯ ವಕ್ತಾರೆ ಅಲ್ಕಾ ಲಾಂಬಾ ಅವರನ್ನು ಹುದ್ದೆಯಿಂದ ಕಿತ್ತೊಗೆಯಲಾಗಿದೆ.
ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಆದೇಶದಂತೆ ದಿಲ್ಲಿಯ ಸಾರಿಗೆ ಸಚಿವ ಗೋಪಾಲ್ ರೈ ರಾಜೀನಾಮೆ ನೀಡಿದ್ದಾರೆಂದು ಅಲ್ಕಾ ಹೇಳಿದ ಕೆಲವೇ ಗಂಟೆಗಳಲ್ಲಿ ಆಕೆಯ ವಿರುದ್ಧ ಕ್ರಮ ಜರಗಿಸಲಾಗಿದೆ. ರೈ ಅವರು ಆರೋಗ್ಯ ಕಾರಣಗಳಿಗಾಗಿ ರಾಜೀನಾಮೆ ನೀಡಿದ್ದಾರೆಂದು ಪಕ್ಷ ಇದಕ್ಕೂ ಮುಂಚೆ ಹೇಳಿಕೊಂಡಿತ್ತು.
‘‘ನಾನು ಪಕ್ಷದ ಶಿಸ್ತಿನ ಕಾರ್ಯಕರ್ತೆ ಹಾಗೂ ಅದರ ಎಲ್ಲ್ಲ ನಿರ್ಧಾರಗಳನ್ನೂ ಗೌರವಿಸುತ್ತೇನೆ. ಅರಿಯದೆ ನಾನೇನಾದರೂ ತಪ್ಪುಮಾಡಿದ್ದರೆ ಅದನ್ನು ಸರಿ ಪಡಿಸಿಕೊಳ್ಳುತ್ತೇನೆ. ನನ್ನಿಂದ ಭ್ರಷ್ಟಾಚಾರ ವಿರುದ್ಧದ ಪಕ್ಷದ ಹೋರಾಟಕ್ಕೆ ತಡೆಯಾಗಬಾರದು’’ ಎಂದು ಎರಡು ತಿಂಗಳುಗಳ ಕಾಲ ಅಮಾನತು ಆದೇಶ ಪಡೆದಿರುವ ಅಲ್ಕಾ ಟ್ವೀಟ್ ಮಾಡಿದ್ದಾರೆ.
ಖಾಸಗಿ ಬಸ್ ಆಪರೇಟರ್ ಒಬ್ಬರಿಗೆ ಸರಕಾರ ಕಳೆದ ತಿಂಗಳು ಜಾರಿಗೊಳಿಸಿದ ಯೋಜನೆಯ ಪ್ರಯೋಜನ ದೊರೆಯುವಂತೆ ಮಾಡಲು ರೈ ಸಹಾಯ ಮಾಡಿದ್ದರು ಎಂಬ ಆರೋಪ ಅವರ ಮೇಲಿತ್ತು. ಆದರೆ ಸಾರಿಗೆ ಸಚಿವಾಲಯದ ಕೆಲಸದ ಹೊರೆಯನ್ನು ಇತ್ತೀಚೆಗೆ ಶಸ್ತ್ರಕ್ರಿಯೆಗೊಳಗಾದ ಸಚಿವರಿಗೆ ನಿಭಾಯಿಸಲು ಕಷ್ಟವಾಗಬಹುದೆಂದು ಅವರು ರಾಜೀನಾಮೆ ನೀಡಿದ್ದರೆಂದು ಪಕ್ಷ ಹೇಳಿತ್ತು. ಹಲವಾರು ವರ್ಷಗಳಿಂದ ತಮ್ಮ ಕುತ್ತಿಗೆಯಲ್ಲಿ ಉಳಿದಿದ್ದ ಬುಲೆಟ್ ಒಂದನ್ನು ತೆಗೆಯಲು ಸಚಿವರು ಇತ್ತೀಚೆಗೆ ಶಸ್ತ್ರಕ್ರಿಯೆಗೆ ಒಳಗಾಗಿದ್ದರು.
ಆದರೆ ಅಲ್ಕಾ ಮಾಧ್ಯಮಕ್ಕೆ ನೀಡಿದ ಹೇಳಿಕೆಯಲ್ಲಿ ಸಚಿವರ ವಿರುದ್ಧದ ಆರೋಪದ ನಿಷ್ಪಕ್ಷಪಾತ ತನಿಖೆಗೆ ಸಹಕಾರಿಯಾಗಲು ಅವರಿಗೆ ರಾಜೀನಾಮೆ ನೀಡಲು ಹೇಳಲಾಗಿತ್ತು ಎಂದಿದ್ದರು. ಅವರ ವಿರುದ್ಧದ ಆರೋಪದಲ್ಲಿ ಹುರುಳಿಲ್ಲವೆಂದು ವಾದಿಸುತ್ತಿರುವ ಪಕ್ಷಕ್ಕೆ ಅಲ್ಕಾ ಹೇಳಿಕೆ ಸಿಟ್ಟು ತರಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X