Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಎನ್‌ಜಿಒ ನಿಧಿ ನಿರ್ಬಂಧ ಕಾಯ್ದೆ ಬೇಡ :...

ಎನ್‌ಜಿಒ ನಿಧಿ ನಿರ್ಬಂಧ ಕಾಯ್ದೆ ಬೇಡ : ಭಾರತಕ್ಕೆ ವಿಶ್ವಸಂಸ್ಥೆಯ ಮಾನವಹಕ್ಕು ರಾಯಭಾರಿಗಳ ಕರೆ

ವಾರ್ತಾಭಾರತಿವಾರ್ತಾಭಾರತಿ17 Jun 2016 8:13 PM IST
share
ಎನ್‌ಜಿಒ ನಿಧಿ ನಿರ್ಬಂಧ ಕಾಯ್ದೆ ಬೇಡ : ಭಾರತಕ್ಕೆ ವಿಶ್ವಸಂಸ್ಥೆಯ ಮಾನವಹಕ್ಕು ರಾಯಭಾರಿಗಳ ಕರೆ

ವಿಶ್ವಸಂಸ್ಥೆ, ಜೂ. 17: ಸರಕಾರೇತರ ಸಂಘಟನೆ (ಎನ್‌ಜಿಒ)ಗಳು ವಿದೇಶಿ ನಿಧಿ ಪಡೆಯುವುದನ್ನು ನಿರ್ಬಂಧಿಸುವ ಕಾನೂನನ್ನು ರದ್ದುಪಡಿಸುವಂತೆ ವಿಶ್ವಸಂಸ್ಥೆಯ ಮಾನವಹಕ್ಕುಗಳ ಪರಿಣತರು ಭಾರತಕ್ಕೆ ಕರೆ ನೀಡಿದ್ದಾರೆ. ಸರಕಾರದ ನೀತಿಗಳನ್ನು ವಿರೋಧಿಸುವ ಗುಂಪುಗಳನ್ನು ‘ವೌನವಾಗಿಸಲು’ ಈ ಕಾನೂನಿನ ವಿಧಿಗಳನ್ನು ಹೆಚ್ಚೆಚ್ಚು ಬಳಸಲಾಗುತ್ತಿದೆ ಎಂದು ಅವರು ಹೇಳಿದ್ದಾರೆ.

‘‘ನಾಗರಿಕ, ರಾಜಕೀಯ, ಆರ್ಥಿಕ, ಸಾಮಾಜಿಕ, ಪರಿಸರ ಅಥವಾ ಸಾಂಸ್ಕೃತಿಕ ಕ್ಷೇತ್ರಗಳಲ್ಲಿ ಕೆಲಸ ಮಾಡುವ ಸಂಘಟನೆಗಳನ್ನು ವೌನವಾಗಿಸಲು ವಿದೇಶಿ ದೇಣಿಗೆ ನಿಯಂತ್ರಣ ಕಾಯ್ದೆ (ಎಫ್‌ಸಿಆರ್‌ಎ)ಯ ವಿಧಿಗಳನ್ನು ಹೆಚ್ಚೆಚ್ಚು ಬಳಸಲಾಗುತ್ತಿರುವ ಬಗ್ಗೆ ನಾವು ಕಳವಳಗೊಂಡಿದ್ದೇವೆ. ಅವುಗಳ ನೀತಿಗಳು ಸರಕಾರದ ನೀತಿಗಳಿಗಿಂತ ಭಿನ್ನವಾಗಿರಬಹುದಾಗಿದೆ’’ ಎಂದು ವಿಶ್ವಸಂಸ್ಥೆಯ ಮೂವರು ಮಾನವಹಕ್ಕುಗಳ ವಿಶೇಷ ರಾಯಭಾರಿಗಳು ಹೇಳಿದ್ದಾರೆ.

ಎಫ್‌ಸಿಆರ್‌ಎಯನ್ನು ಹಿಂದಕ್ಕೆ ಪಡೆಯುವಂತೆ ಮಾನವಹಕ್ಕುಗಳ ರಕ್ಷಕರ ಪರಿಸ್ಥಿತಿಯ ಕುರಿತ ರಾಯಭಾರಿ ಮೈಕಲ್ ಫಾರ್ಸ್ಟ್, ಅಭಿವ್ಯಕ್ತಿ ಸ್ವಾತಂತ್ರ ಕುರಿತ ರಾಯಭಾರಿ ಡೇವಿಡ್ ಕೇಯ್ ಮತ್ತು ಸಂಘಟನಾ ಸ್ವಾತಂತ್ರ ಕುರಿತ ರಾಯಭಾರಿ ಮೈನಾ ಕಿಯಾಯ್ ಭಾರತಕ್ಕೆ ಕರೆ ನೀಡಿದ್ದಾರೆ. ಈ ಕಾನೂನು ಅಂತಾರಾಷ್ಟ್ರೀಯ ಮಾನವ ಹಕ್ಕುಗಳ ವ್ಯಾಖ್ಯಾನ ಮತ್ತು ಮಟ್ಟಕ್ಕೆ ಹೊಂದಿಕೆಯಾಗುವುದಿಲ್ಲ ಹಾಗೂ ನಾಗರಿಕ ಸಮಾಜವು ವಿದೇಶಿ ನಿಧಿಯನ್ನು ಪಡೆಯುವುದನ್ನು ತಡೆಯುವುದಕ್ಕಾಗಿ ಅದನ್ನು ಹೆಚ್ಚೆಚ್ಚಾಗಿ ಬಳಸಲಾಗುತ್ತಿದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ತನ್ನ ವಿರುದ್ಧದ ಎಲ್ಲ ಆರೋಪಗಳನ್ನು ಅಲ್ಲಗಳೆಯಲು ಹಾಗೂ ಎಲ್ಲ ವಿದೇಶಿ ದೇಣಿಗೆಗಳನ್ನು ಎಫ್‌ಸಿಆರ್‌ಎ ಪ್ರಕಾರವೇ ಖರ್ಚು ಮಾಡಲಾಗಿದೆ ಹಾಗೂ ಲೆಕ್ಕ ಇಡಲಾಗಿದೆ ಎಂಬುದನ್ನು ಸಾಬೀತುಪಡಿಸಲು ‘ಲಾಯರ್ಸ್ ಕಲೆಕ್ಟಿವ್’ ವಿವರವಾದ ಪುರಾವೆಯನ್ನು ಒದಗಿಸಿದರೂ, ಅದರ ಅಮಾನತು ಈಗಲೂ ಮುಂದುವರಿದಿದೆ ಎಂದು ಅವರು ಹೇಳಿದ್ದಾರೆ.

ಇದಕ್ಕೆ ಸಂಬಂಧಿಸಿದ ಹೇಳಿಕೆಯೊಂದನ್ನು ವಿಶ್ವಸಂಸ್ಥೆಯ ಮಾನವಹಕ್ಕುಗಳ ಹೈಕಮಿಶನರ್ ಕಚೇರಿಯಿಂದ ಮಾನವಹಕ್ಕುಗಳ ರಾಯಭಾರಿಗಳು ಹೊರಡಿಸಿದ್ದಾರೆ.

‘‘ವಿದೇಶಿ ನಿಧಿಗಳನ್ನು ಪಡೆಯುವುದರಿಂದ ಎನ್‌ಜಿಒಗಳನ್ನು ನಿರ್ಬಂಧಿಸುವುದು ರಾಜಕೀಯ ಪ್ರೇರಿತವಾಗಿರುತ್ತದೆ ಹಾಗೂ ಸರಕಾರದ ನೀತಿಗಳನ್ನು ವಿರೋಧಿಸಿರುವುದಕ್ಕಾಗಿ ಅವುಗಳನ್ನು ಬೆದರಿಸುವ ಹಾಗೂ ಬಾಯಿ ಮುಚ್ಚಿಸುವ ಉದ್ದೇಶ ಹೊಂದಿದೆ ಎಂಬ ವರದಿಗಳಿಂದ ನಾವು ಆಘಾತಗೊಂಡಿದ್ದೇವೆ’’ ಎಂದು ಮಾನವಹಕ್ಕುಗಳ ಪರಿಣತರು ಹೇಳುತ್ತಾರೆ.

ಏನು ಲಾಯರ್ಸ್ ಕಲೆಕ್ಟಿವ್?

ಸಾರ್ವಜನಿಕ ಹಿತಾಸಕ್ತಿಯ ಅರ್ಜಿ (ಪಿಐಎಲ್)ಗಳನ್ನು ಸಲ್ಲಿಸುವುದಕ್ಕೆ ಹಾಗೂ ಭಾರತೀಯ ಸಮಾಜದ ಶೋಷಿತ ವರ್ಗದ ಸದಸ್ಯರ ಪರವಾಗಿ ವಾದಿಸುವುದಕ್ಕೆ ಲಾಯರ್ಸ್ ಕಲೆಕ್ಟಿವ್ ಹೆಸರುವಾಸಿಯಾಗಿದೆ.

ಈ ಸಂಸ್ಥೆಯ ಸ್ಥಾಪಕರು ಹಾಗೂ ಮಾನವಹಕ್ಕುಗಳ ವಕೀಲರಾದ ಇಂದಿರಾ ಜೈಸಿಂಗ್ ಮತ್ತು ಆನಂದ್ ಗ್ರೋವರ್ ಸೂಚಿನ ಉದ್ದೇಶಕ್ಕಲ್ಲದೆ ಅನ್ಯ ಉದ್ದೇಶಗಳಿಗೆ ವಿದೇಶಿ ನಿಧಿಯನ್ನು ಬಳಸುವ ಮೂಲಕ ಕಾಯಿದೆಯನ್ನು ಉಲ್ಲಂಘಿಸಿದ್ದಾರೆ ಎಂಬ ಆರೋಪದಲ್ಲಿ ‘ಲಾಯರ್ಸ್ ಕಲೆಕ್ಟಿವ್’ ಸಂಸ್ಥೆಯ ಮೇಲೆ ನಿಷೇಧ ವಿಧಿಸಲಾಗಿದೆ ಎಂದು ಹೇಳಿಕೆ ಅಭಿಪ್ರಾಯಪಟ್ಟಿದೆ.

ಸೆಟಲ್ವಾದ್ ಎನ್‌ಜಿಒ ನೋಂದಣಿ ರದ್ದು

ನಾಗರಿಕ ಹಕ್ಕುಗಳ ಕಾರ್ಯಕರ್ತೆ ತೀಸ್ತಾ ಸೆಟಲ್ವಾದ್ ಮತ್ತು ಅವರ ಪತಿ ಜಾವೇದ್ ಆನಂದ್ ನಡೆಸುತ್ತಿರುವ ಸಬ್ರಂಗ್ ಟ್ರಸ್ಟ್‌ನ ಖಾಯಂ ನೋಂದಣಿಯನ್ನು ತಕ್ಷಣದಿಂದ ಜಾರಿಗೆ ಬರುವಂತೆ ಕೇಂದ್ರ ಸರಕಾರ ರದ್ದುಪಡಿಸಿದೆ.

ಇದಕ್ಕೆ ಸಂಬಂಧಿಸಿದಂತೆ ಗೃಹ ಸಚಿವಾಲಯವು ಗುರುವಾರ ಹೊಸ ಆದೇಶವೊಂದನ್ನು ಹೊರಡಿಸಿರುವುದನ್ನು ಇಲ್ಲಿ ಸ್ಮರಿಸಬಹುದಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X