Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ‘ಬೆಂಗಳೂರಲ್ಲಿ ಮಿನಿಸ್ಟರ್; ಸಾಗರದಲ್ಲಿ...

‘ಬೆಂಗಳೂರಲ್ಲಿ ಮಿನಿಸ್ಟರ್; ಸಾಗರದಲ್ಲಿ ಸ್ಪೀಕರ್’

ದಿಲ್ಲಿಗೆ ತೆರಳದ ಶಿವಮೊಗ್ಗ ಜಿಲ್ಲೆಯ ಕಾಂಗ್ರೆಸ್ ನಾಯಕರು!

ವಾರ್ತಾಭಾರತಿವಾರ್ತಾಭಾರತಿ17 Jun 2016 11:27 PM IST
share

ಶಿವಮೊಗ್ಗ, ಜೂ. 17: ಸಚಿವ ಸಂಪುಟ ಪುನಾರಚನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ನಿರ್ಧರಿಸಿರುವುದು, ರಾಜ್ಯ ಸರಕಾರದಲ್ಲಿ ಸಂಚಲನ ಮೂಡಿಸಿದೆ. ಈ ನಿಟ್ಟಿನಲ್ಲಿ ಹೈಕಮಾಂಡ್ ಅನುಮತಿ ಪಡೆಯಲು ರಾಷ್ಟ್ರ ರಾಜಧಾನಿ ದಿಲ್ಲಿಗೆ ದೌಡಾಯಿಸಿದ್ದಾರೆ. ಈ ನಡುವೆ ಸಚಿವ ಸ್ಥಾನದ ಮೇಲೆ ಕಣ್ಣಿಟ್ಟಿರುವ ಶಾಸಕರು, ಸಚಿವ ಸ್ಥಾನ ಕೈತಪ್ಪುವ ಆತಂಕದಲ್ಲಿರುವ ಕೆಲ ಸಚಿವರು ಕೂಡ ದಿಲ್ಲಿಗೆ ತೆರಳಿ ಲಾಬಿ ನಡೆಸಲಾರಂಭಿಸಿದ್ದಾರೆ. ಪ್ರಭಾವಿ ನಾಯಕರ ಮೇಲೆ ಹೈಕಮಾಂಡ್ ಮೇಲೆ, ಪ್ರಭಾವ ಬೀರುವ ಕೆಲಸ ಮಾಡುತ್ತಿದ್ದಾರೆ ಎಂಬ ಮಾತುಗಳು ಪಕ್ಷದ ಮೂಲಗಳಿಂದ ಕೇಳಿ ಬರುತ್ತಿವೆ. ಸಚಿವ ಸ್ಥಾನ ಕೈ ತಪ್ಪಲಿದೆ ಎಂದು ಹೇಳಲಾಗುತ್ತಿರುವ ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಕಿಮ್ಮನೆ ರತ್ನಾಕರ ಹಾಗೂ ಸಚಿವ ಸಂಪುಟ ಸೇರಲಿದ್ದಾರೆ ಎಂದು ಹೇಳಲಾಗುತ್ತಿರುವ ವಿಧಾನಸಭೆ ಸ್ಪೀಕರ್ ಕಾಗೋಡು ತಿಮ್ಮಪ್ಪ ದಿಲ್ಲಿಯತ್ತ ಮುಖ ಮಾಡಿಲ್ಲ. ಈ ಇಬ್ಬರು ನಾಯಕರು ಯಾವುದೇ ಲಾಬಿ ಮಾಡುವ ಗೋಜಿಗೆ ಹೋಗದೆ ತಮ್ಮ ಪಾಡಿಗೆ ಆರಾಮಾಗಿದ್ದಾರೆ ಎಂದು ಕಾಂಗ್ರೆಸ್‌ನ ಆಪ್ತರೊಬ್ಬರು ಪತ್ರಿಕೆಗೆ ತಿಳಿಸಿದ್ದಾರೆ.

  ಖರ್ಗೆ ಬೆಂಬಲ: ಕಾಗೋಡು ತಿಮ್ಮಪ್ಪರವರ ಪರವಾಗಿ ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡ, ಲೋಕಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆಯವರು ಬ್ಯಾಟಿಂಗ್ ನಡೆಸುತ್ತಿದ್ದಾರೆ. ಶತಾಯಗತಾಯ ಪ್ರಸ್ತುತ ಸಂಪುಟ ಪುನಾರಚನೆಯಲ್ಲಿ ಕಾಗೋಡು ತಿಮ್ಮಪ್ಪರಿಗೆ ಅವಕಾಶ ಕಲ್ಪಿಸಬೇಕೆಂದು ಸಿಎಂ ಸಿದ್ದರಾಮಯ್ಯರಿಗೆ ಕಟ್ಟಪ್ಪಣೆ ಹೊರಡಿಸಿದ್ದಾರೆ ಎನ್ನಲಾಗುತ್ತಿದ್ದು, ದಿಲ್ಲಿಯ ವರಿಷ್ಠರೊಂದಿಗೆ ಈ ಬಗ್ಗೆ ಮಾತುಕತೆ ನಡೆಸಿದ್ದಾರೆ ಎಂದು ಕಾಂಗ್ರೆಸ್‌ನ ಉನ್ನತ ಮೂಲಗಳು ಮಾಹಿತಿ ನೀಡುತ್ತವೆ. ಉದ್ದೇಶಪೂರ್ವಕವಾಗಿಯೇ ಕಾಗೋಡುರವರನ್ನು ಸಚಿವ ಸಂಪುಟದಿಂದ ದೂರವಿಟ್ಟು, ಅವರ ಕೋಪತಾಪಕ್ಕೆ ತುತ್ತಾಗುತ್ತಿರುವ ಸಿಎಂ ಸಿದ್ದರಾಮಯ್ಯ ಕೂಡ ಕಾಗೋಡುರವರನ್ನು ಸಚಿವ ಸಂಪುಟಕ್ಕೆ ಸೇರ್ಪಡೆ ಮಾಡಿಕೊಳ್ಳಲು ನಿರ್ಧರಿಸಿದ್ದಾರೆ. ಈ ಹಿನ್ನೆಲೆಯಲ್ಲಿಯೇ ತಮ್ಮ ನಂಬಿಕಸ್ಥ ಶಿಕ್ಷಣ ಸಚಿವ ಕಿಮ್ಮನೆ ರತ್ನಾಕರ ಅವರನ್ನು ಸಚಿವ ಸ್ಥಾನದಿಂದ ಕೈಬಿಡಲು ನಿರ್ಧರಿಸಿದ್ದಾರೆ ಎಂದು ಕಾಂಗ್ರೆಸ್ ಮೂಲಗಳು ಹೇಳುತ್ತಿವೆ. ‘ಕಿಮ್ಮನೆಯವರನ್ನು ಸಚಿವ ಸ್ಥಾನದಿಂದ ಕೈಬಿಡಲು ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಸುತರಾಂ ಇಷ್ಟವಿಲ್ಲವಾಗಿದೆ. ಅವರ ಸಚಿವ ಸಂಪುಟದಲ್ಲಿರುವ ನಂಬಿಕಸ್ಥ ಸಚಿವರಲ್ಲಿ ಅವರೂ ಓರ್ವರಾಗಿದ್ದಾರೆ. ಆದರೆ ಕಾಗೋಡು ತಿಮ್ಮಪ್ಪರಿಗೆ ಅವಕಾಶ ಕಲ್ಪಿಸಲು ಕಿಮ್ಮನೆಯವರನ್ನು ಸಚಿವ ಸ್ಥಾನದಿಂದ ಕೈಬಿಡುವ ನಿರ್ಧಾರವನ್ನು ಸಿಎಂ ಮಾಡಬಹುದು. ಇದು ಸಿಎಂಗೆ ಅನಿವಾರ್ಯ ಎಂದು ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡರೊಬ್ಬರು ಹೇಳುತ್ತಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X