Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಮುಖ್ಯ ಆರೋಪಿ ಅಸ್ಸಾಂ ವಲಸೆ ಕಾರ್ಮಿಕ...

ಮುಖ್ಯ ಆರೋಪಿ ಅಸ್ಸಾಂ ವಲಸೆ ಕಾರ್ಮಿಕ ಬಂಧನ

ಕೇರಳ ದಲಿತ ಯುವತಿಯ ಅತ್ಯಾಚಾರ, ಕೊಲೆ ಪ್ರಕರಣ

ವಾರ್ತಾಭಾರತಿವಾರ್ತಾಭಾರತಿ17 Jun 2016 11:50 PM IST
share

ಕೊಚ್ಚಿ, ಜೂ.17: ದಲಿತ ಕಾನೂನು ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರ ಎಸಗಿ ಭೀಕರವಾಗಿ ಹತ್ಯೆ ಮಾಡಿದ ಪ್ರಕರಣ ಸಂಬಂಧ ಘಟನೆ ನಡೆದು 49 ದಿನಗಳ ಬಳಿಕ ಪ್ರಮುಖ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಅಸ್ಸಾಂ ಮೂಲದ ವಲಸೆ ಕಾರ್ಮಿಕ ಅಮೀರುಲ್ ಇಸ್ಲಾಂ ಬಂಧಿತ ಆರೋಪಿ.

ದಿಲ್ಲಿಯ ನಿರ್ಭಯಾ ಪ್ರಕರಣದ ರೀತಿಯಲ್ಲೇ ಈ ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರ ಎಸಗಿ ಹತ್ಯೆ ಮಾಡಲಾಗಿತ್ತು. ಸಂತ್ರಸ್ತೆಯ ದೇಹದಲ್ಲಿ 38 ಗಾಯಗಳು ಕಂಡುಬಂದಿದ್ದವು. ಪೆರಂಬವೂರು ಗ್ರಾಮದ ತನ್ನ ಮನೆಯ ಎದುರೇ ಎಪ್ರಿಲ್ 28ರಂದು ಮೃತದೇಹ ಪತ್ತೆಯಾಗಿತ್ತು. ಎರಡು ಬಾರಿ ಪುನಾರಚನೆಗೊಂಡ ವಿಶೇಷ ತನಿಖಾ ತಂಡ ಒಂದೇ ತಾಲೂಕಿನಲ್ಲಿ 1500ಕ್ಕೂ ಹೆಚ್ಚು ಮಂದಿ ಶಂಕಿತರನ್ನು ವಿಚಾರಣೆಗೆ ಗುರಿಪಡಿಸಿತ್ತು ಹಾಗೂ 5 ಸಾವಿರ ಮಂದಿಯ ಬೆರಳಚ್ಚು ಪರಿಶೀಲನೆ ನಡೆಸಿತ್ತು. ಬಳಿಕ ಸುಮಾರು 20 ಲಕ್ಷ ಮೊಬೈಲ್ ಸಂಖ್ಯೆಗಳ ಕರೆಗಳ ಪರೀಶೀಲನೆ ನಡೆಸಿತ್ತು.
ತಮಿಳುನಾಡಿನ ಕಾಂಚೀಪುರಂನಲ್ಲಿ ಕೆಲ ದಿನಗಳ ಹಿಂದೆಯೇ ಆರೋಪಿಯನ್ನು ವಶಕ್ಕೆ ಪಡೆದ ಪೊಲೀಸರು, ತ್ರಿಶ್ಶೂರಿನ ರಹಸ್ಯ ಸ್ಥಳದಲ್ಲಿ ವಿಚಾರಣೆಗೆ ಗುರಿಪಡಿಸಿ, ಗುರುವಾರ ಬಂಧನವನ್ನು ಘೋಷಿಸಿದರು. ಆರೋಪಿ, ಅಸ್ಸಾಂ ನಲಗಾಂ ಜಿಲ್ಲೆಯ ವಲಸೆ ಕಾರ್ಮಿಕ. ಆರೋಪಿ ತಪ್ಪೊಪ್ಪಿಗೆ ಹೇಳಿಕೆ ನೀಡಿ, ವೈಯಕ್ತಿಕ ದ್ವೇಷವೇ ಹತ್ಯೆಗೆ ಕಾರಣ ಎಂದು ಹೇಳಿದ್ದಾನೆ. ಸಂತ್ರಸ್ತೆಯ ಮನೆ ಸಮೀಪ ನಿರ್ಮಾಣ ಕಂಪನಿಯೊಂದರಲ್ಲಿ ಈತ ಕೆಲಸ ಮಾಡುತ್ತಿದ್ದ.
ಪೊಲೀಸ್ ಹೇಳಿಕೆಯ ಪ್ರಕಾರ, ಘಟನೆ ನಡೆದ ದಿನ ಕ್ಯಾನಲ್‌ಬಂಡ್ ರಸ್ತೆಯಲ್ಲಿದ್ದ ತನ್ನ ಮನೆಯ ಎದುರು ಸಂತ್ರಸ್ತೆ ನಿಂತಿದ್ದಳು. ಆಗ, ಆರೋಪಿ ಅದೇ ಮಾರ್ಗದಿಂದ ಹೋಗುತ್ತಿದ್ದ. ಹಿಂದಿನ ವ್ಯಾಜ್ಯಕ್ಕೆ ಸಂಬಂಧಿಸಿದಂತೆ ಆವರಿಬ್ಬರ ನಡುವೆ ಜಗಳ ನಡೆಯಿತು. ಆದರೆ ಇಸ್ಲಾಂ ವಾಪಸಾದ. ಸಂಜೆ ಕಂಠಪೂರ್ತಿ ಕುಡಿದು ಆಕೆಯನ್ನು ಎಳೆದಾಡಿ, ತಲೆ ಮೇಲೆ ಕಬ್ಬಿಣದ ಸಲಾಕೆಯಿಂದ ಹೊಡೆದ. ಅಂತಿಮವಾಗಿ ಆಕೆ ಪ್ರಜ್ಞೆ ತಪ್ಪಿಬಿದ್ದಾಗ, ಅತ್ಯಾಚಾರಕ್ಕೂ ಯತ್ನಿಸಿದ. ಘಟನೆ ಬಳಿಕ ಅಸ್ಸಾಂಗೆ ರೈಲಿನಲ್ಲಿ ಹೋದ ಇಸ್ಲಾಂ, ಸಿಮ್‌ಕಾರ್ಡ್ ನಾಶಮಾಡಿದ. ಬಳಿಕ ತಮಿಳುನಾಡಿನ ತಂಜಾವೂರಿಗೆ ಹೊಸ ಕೆಲಸಕ್ಕೆ ಬಂದ. ಆದರೆ ಹೊಸ ಮೊಬೈಲ್‌ನಿಂದ ಸ್ನೇಹಿತನಿಗೆ ಕರೆ ಮಾಡಿದ. ಸುಳಿವಿನ ಜಾಡು ಹಿಡಿದ ಪೊಲೀಸರು ಆತನನ್ನು ಬಂಧಿಸುವಲ್ಲಿ ಯಶಸ್ವಿಯಾದರು ಎಂದು ಮೂಲಗಳು ಹೇಳಿವೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X