Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ತವರು ತೊಟ್ಟಿಲಿನಿಂದ ತಾಯಿ ಮಡಿಲು ಸೇರಿದ...

ತವರು ತೊಟ್ಟಿಲಿನಿಂದ ತಾಯಿ ಮಡಿಲು ಸೇರಿದ ಕಂದಮ್ಮ

ವಾರ್ತಾಭಾರತಿವಾರ್ತಾಭಾರತಿ18 Jun 2016 6:17 PM IST
share
ತವರು ತೊಟ್ಟಿಲಿನಿಂದ ತಾಯಿ ಮಡಿಲು ಸೇರಿದ ಕಂದಮ್ಮ

ಹಾಸನ, ಜೂ.18: ಹಲವು ದಿನಗಳಿಂದ ವಿವಾದಕ್ಕೆ ಕಾರಣವಾಗಿದ್ದ ಮಗು ಮತ್ತೆ ತಾಯಿ ಮಡಿಲಿಗೆ ಸೇರಿಸುವ ಮೂಲಕ ತವರು ಚಾರಿಟೇಬಲ್ ವಿವಾದ ಸದ್ಯಕ್ಕೆ ಅಂತ್ಯ ಕಂಡಂತಾಗಿದೆ.

       ನಗರದ ಪಾರ್ಕ್ ರಸ್ತೆಯಲ್ಲಿರುವ ಬಾಲಮಂದಿರದಲ್ಲಿ ಕೇಂದ್ರ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ನಿರ್ದೇಶನದ ಪ್ರಕಾರ ಶನಿವಾರ ಸಹಿ ಹಾಕಿಸಿಕೊಂಡು ನಿಯಮನುಸಾರ ತವರು ಪಬ್ಲಿಕ್ ಚಾರಿಟಬಲ್ ಟ್ರಸ್ಟ್‌ನ ಮುಖ್ಯಸ್ಥರಾದ ಡಾ॥ಹೆಚ್.ಕೆ. ಪಾಲಾಕ್ಷ ಅವರು ಮಗುವನ್ನು ತಾಯಿ ಶ್ವೇತಾ ಎಂಬವರಿಗೆ ಒಪ್ಪಿಸುವ ಮೂಲಕ ವಿವಾದಕ್ಕೆ ತೆರೆಕಂಡಂತಾಗಿದೆ. ಮಗುವನ್ನು ಬಲವಂತವಾಗಿ ಪಡೆಯಲಾಗಿದೆ ಎಂದು ಪೊಲೀಸ್ ಠಾಣೆಯಲ್ಲಿ ದೂರುದಾಖಲಿಸಿದ ಹಿನ್ನಲೆಯಲ್ಲಿ ವಿಚಾರಣೆ ನಡೆಯುತ್ತಿತ್ತು.ಎರಡು ತಿಂಗಳ ನಂತರ ಮಗುವನ್ನು ಪೊಲೀಸ್ ರಕ್ಷಣೆಯಲ್ಲಿ ವಾಪಸ್ ನೀಡಲಾಗಿದೆ.

ಡಾ॥ಹೆಚ್.ಕೆ. ಪಾಲಾಕ್ಷ

      ತವರು ಪಬ್ಲಿಕ್ ಚಾರಿಟಬಲ್ ಟ್ರಸ್ಟ್‌ನ ಮುಖ್ಯಸ್ಥರಾದ ಡಾ॥ಹೆಚ್.ಕೆ. ಪಾಲಾಕ್ಷ ಸುದ್ದಿಗಾರರೊಂದಿಗೆ ಮಾತನಾಡಿ, ಮೊದಲು ನಮ್ಮ ಟ್ರಸ್ಟ್‌ಗೆ ಮಗುವನ್ನು ನೀಡಿ, ನಂತರ ಮತ್ತೆ ಬೇಕು ಎಂದು ಕೇಳಿದ್ದರು. ನೇರವಾಗಿ ನಮ್ಮ ಬಳಿ ಬರದೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು. ಕಳೆದ ಎರಡು ತಿಂಗಳಿನಿಂದ ನಾವೇ ಪೋಷಣೆ ಮಾಡಿದ್ದು, ಈ ವಿಚಾರವಾಗಿ ಕೇಂದ್ರ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ ಪತ್ರ ಬರೆಯಲಾಗಿತ್ತು. ಮುಂದಿನ ಆದೇಶ ಬರುವವರೆಗೂ ಮಗುವನ್ನು ಪಾಲನೆ ಮಾಡಲು ಹೇಳಲಾಗಿತ್ತು. ಈಗ ಮಗುವನ್ನು ತಾಯಿಗೆ ಮರುಳಿಸಲಾಗಿದೆ ಎಂದರು.

ಶ್ವೇತಾ:

      ಮಗುವನ್ನು ಬಲವಂತವಾಗಿ ಪಡೆಯಲಾಗಿದೆ ಎಂದು ದೂರಿ ಪೊಲೀಸ್ ಠಾಣೆಗೆ ದೂರು ದಾಖಲು ಮಾಡಿದ್ದ ಮಗುವಿನ ತಾಯಿ ತಾಲ್ಲೂಕಿನ ಮಸಳೆಹೊಸಳ್ಳಿ ಗ್ರಾಂ ಬಳಿ ಇರುವ ಮತ್ತತ್ತಿ ಗ್ರಾಮದ ಶ್ವೇತಾ ಸುದ್ದಿಗಾರರೊಂದಿಗೆ ಮಾತನಾಡಿ, ನನಗೆ ನನ್ನ ಮಗು ಬೇಕು. ಬೇಡ ಎಂದು ಹೇಳಿಲ್ಲ. ಆದರೇ ನನಗೆ ತಿಳಿಯದಂತೆ ಕೆಲವರು ಸೇರಿ ನನ್ನನ್ನು ಚನ್ನರಾಯಪಟ್ಟಣದ ಒಂದರಲ್ಲಿ ಇರಿಸಿದ್ದರು.

ಸೇವಾ ಸಮಸ್ಥೆಯ ಗೀತಾ ಎಂಬುವರು ಮಗುವನ್ನು ಬಿಟ್ಟು ಬಿಡಿ 40 ಸಾವಿರ ರೂ ಹಣ ನೀಡುವುದಾಗಿ ಹೇಳಿದ್ದರು. ನನಗೆ ಮೊದಲೆ ಒಂದು ಗಂಡು ಮಗು ಇದ್ದು, ಅವನಿಗೆ 4 ವರ್ಷಗಳು ತುಂಬಿದೆ. ನನ್ನ ಗಂಡ ಕೆಎಸ್‌ಆರ್‌ಟಿಸಿ ಬಸ್ ಚಾಲಕನಾಗಿ ಕೆಲಸ ಮಾಡುತ್ತಿದ್ದು, ಅಪಘಾತದಲ್ಲಿ ಸಾವನಪ್ಪಿದ್ದು, ನಂತರ ಮತ್ತೋರ್ವ ಲಾರಿ ಚಾಲಕನ್ನು ಮದುವೆಯಾದೆ. ಬಾಲ ಮಂದಿರ ಸಂಸ್ಥೆಯ ದೇವರಾಜ್ ಎಂಬುವರು ನನಗೆ 12 ಸಾವಿರ ಹಣ ನೀಡಬೇಕಾಗಿದ್ದು, ಇದುವರೆಗೂ ಕೇವಲ 3 ಸಾವಿರ ರೂಗಳನ್ನು ನೀಡಿ ಉಳಿದ 8 ಸಾವಿರ ರೂ ಹಣ ಕೊಡದೆ ಸತಾಯಿಸುತ್ತಿದ್ದಾರೆ ಹೇಳಿದರು.

       ಒಟ್ಟಾರೆ ತವರು ಪಬ್ಲಿಕ್ ಚಾರಿಟಬಲ್ ಟ್ರಸ್ಟ್‌ನ ವಿವಾದ ಮಗುವನ್ನು ತಾಯಿಗೆ ಒಪ್ಪಿಸುವ ಮೂಲಕ ಸದ್ಯಕ್ಕೆ ತೆರೆ ಕಂಡರು, ಶ್ವೇತಾ ನೀಡಿರುವ ದೂರು ಪೊಲೀಸ್ ಠಾಣೆಯಲ್ಲಿ ಇನ್ನು ತನಿಖೆಯಲ್ಲಿದ್ದು, ಸತ್ಯಾಂಶ ಹೊರ ಬಂದ ಮೇಲೆ ಡಾ॥ಹೆಚ್.ಕೆ. ಪಾಲಾಕ್ಷ ಆರೋಪಿಯೇ ಇಲ್ಲವೇ ನಿರಪರಾಧಿಯೇ ಎಂಬುದು ನಿರ್ಧಾರವಾಗಲಿದೆ.

      ಈ ವೇಳೆ ಪೊಲೀಸ್ ಸಬ್ಇನ್ಸ್‌ಪೆಕ್ಟರ್ ಹಾಗೂ ಸಿಬ್ಬಂದಿಯವರು ಸ್ಥಳದಲ್ಲಿದ್ದು,ಟ್ರಸ್ಟ್‌ನ ಶೇಷಮ್ಮ ಇತರರು ಇದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X