Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮುಡಿಪು: ಸ್ಕಾರ್ಪಿಯೋ ವಾಹನದಲ್ಲಿ ಬಂದ...

ಮುಡಿಪು: ಸ್ಕಾರ್ಪಿಯೋ ವಾಹನದಲ್ಲಿ ಬಂದ ತಂಡದಿಂದ ಟೈಲರ್ ಅಪಹರಣ

ವಾರ್ತಾಭಾರತಿವಾರ್ತಾಭಾರತಿ18 Jun 2016 9:57 PM IST
share
ಮುಡಿಪು: ಸ್ಕಾರ್ಪಿಯೋ ವಾಹನದಲ್ಲಿ ಬಂದ ತಂಡದಿಂದ ಟೈಲರ್ ಅಪಹರಣ

       ಕೊಣಾಜೆ: ಅಪರಿಚಿತರ ತಂಡ ಸ್ಕಾರ್ಪಿಯೋ ವಾಹನದಲ್ಲಿ ಮುಡಿಪುವಿನ ಟೈಲರ್ ಓರ್ವರನ್ನು ಅಪಹರಿಸಿರುವ ಘಟನೆ ಮುಡಿಪು ಜಂಕ್ಷನ್ನಿನಲ್ಲಿ ಶುಕ್ರವಾರ ತಡರಾತ್ರಿ ವೇಳೆ ನಡೆದಿದ್ದು, ಅಪಹರಣಗೈದ ತಂಡವು ಹಲ್ಲೆಗೈದು ಅವರಲ್ಲಿದ್ದ ನಗದು ಹಾಗೂ ಚಿನ್ನಾಭರಣವನ್ನು ದರೋಡೆ ನಡೆಸಿ ಪುತ್ತೂರು ಸಮೀಪ ರಸ್ತೆಗೆ ಎಸೆದು ಹೋಗಿದ್ದಾರೆ.

        ಮುಡಿಪುವಿನಲ್ಲಿ ಟೈಲರ್ ಅಂಗಡಿ ಹೊಂದಿರುವ ಮೂಲತ: ಮಾಣಿ ನಿವಾಸಿ ಧರಣಪ್ಪ ಪೂಜಾರಿ (42) ಅಪಹರಣಗೊಳಗಾದವರು. ಮುಡಿಪು ಪೋಸ್ಟ್ ಆಫೀಸ್ ಸಮೀಪ ಬಾಡಿಗೆ ಮನೆ ಹೊಂದಿರುವ ಅವರು ಶುಕ್ರವಾರ ತಡರಾತ್ರಿ 9.30 ಸುಮಾರಿಗೆ ಅಂಗಡಿಯನ್ನು ಮುಚ್ಚಿ ಹೋಗುವ ಸಂದರ್ಭ , ಆಗಂತುಕನೋರ್ವ ಗ್ರಾಹಕನ ಸೋಗಿನಲ್ಲಿ ಬಂದು ಪ್ಯಾಂಟ್ ಹೊಲಿಯಲಿದೆ ಎಂದು ತಿಳಿಸಿದ್ದಾನೆ. ಅದರಂತೆ ಅಂಗಡಿ ಮುಚ್ಚಿದ್ದರಿಂದಾಗಿ ಆತನಿದ್ದ ಸ್ಕಾರ್ಪಿಯೋ ಬಳಿ ತೆರಳುತ್ತಿದ್ದಂತೆ ಸ್ಕಾರ್ಪಿಯೋ ವಾಹನದಲ್ಲಿದ್ದ ನಾಲ್ವರು ಸೇರಿಕೊಂಡು ವಾಹನದೊಳಕ್ಕೆ ಧರಣಪ್ಪ ಅವರನ್ನು ಹಾಕಿ ಅಪಹರಿಸಿದ್ದಾರೆ. ಈ ಕುರಿತು ಕೊಣಾಜೆ ಠಾಣೆಯಲ್ಲಿ ಅವರ ಪತ್ನಿ ಜಯಲಕ್ಷ್ಮೀ ಎಂಬವರು ಅಪಹರಣ ಪ್ರಕರಣದ ಬಗ್ಗೆ ಶುಕ್ರವಾರ ತಡರಾತ್ರಿ ದೂರು ನೀಡಿದ್ದರು.

                        ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ಶನಿವಾರ ಬೆಳಗ್ಗೆ ದಾಖಲಾದ ಧರಣಪ್ಪ ಅವರ ಹೇಳಿಕೆಯಂತೆ ‘ ಮುಡಿಪುವಿನಿಂದ ಸ್ಕಾರ್ಪಿಯೋ ವಾಹನದಲ್ಲಿ ಅಪಹರಣಗೈದ ತಂಡ ಮೊದಲಿಗೆ ಕೇರಳ ಕಡೆಗೆ ಕೊಂಡೊಯ್ದಿತ್ತು. ಅಲ್ಲಿಂದ ಮರಳಿ ಮಂಗಳೂರು ಕಡೆಗೆ ಕೊಂಡೊಯ್ದಿದ್ದರು. ಬಳಿಕ ಉಪ್ಪಿನಂಗಡಿ ಕಡೆಗೆ ಕೊಂಡೊಯ್ಯುವ ಸಂದರ್ಭ ಸೇತುವೆಯಲ್ಲಿ ಪೊಲೀಸರು ತಪಾಸಣೆ ನಡೆಸುತ್ತಿರುವುದನ್ನು ಕಂಡು ಅಲ್ಲಿಂದ ಹಿಂದಕ್ಕೆ ತೆರಳಿ ಹಲ್ಲೆಗೈದು ಕೈಯಲ್ಲಿದ್ದ ರೂ.10,000 ನಗದು ಹಾಗೂ ನಾಲ್ಕು ಪವನ್ ತೂಕದ ಚಿನ್ನದ ಸರವನ್ನು ಕಳವುಗೈದು, ವಾಹನದಿಂದ ಹೊರದೂಡಿ ಪರಾರಿಯಾಗಿದ್ದಾರೆ. ಗಾಯಗೊಂಡು ರಾತ್ರಿಯಿಡೀ ಸ್ಥಳ ಯಾವುದೆಂದು ತಿಳಿಯದೆ ಬಸ್ ನಿಲ್ದಾಣದಲ್ಲಿ ಮಲಗಿ ಬಳಿಕ ಪುತ್ತೂರಿನ ಸರಕಾರಿ ಆಸ್ಪತ್ರೆಗೆ ಶನಿವಾರ ಬೆಳಗ್ಗೆ ರಿಕ್ಷಾ ಮೂಲಕ ತೆರಳಿ ಒಳರೋಗಿಯಾಗಿ ದಾಖಲಾಗಿದ್ದಾರೆ. ಈ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X