Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ‘ಆರೋಗ್ಯ ಚೆನ್ನಾಗಿರಬೇಕಾದರೆ ಸ್ವಚ್ಛತೆ...

‘ಆರೋಗ್ಯ ಚೆನ್ನಾಗಿರಬೇಕಾದರೆ ಸ್ವಚ್ಛತೆ ಅಗತ್ಯ: ಡಾ.ದೊಡ್ಡಮಲ್ಲಪ್ಪ

ಸ್ವಚ್ಛತಾ ಸಪ್ತಾಹ ಕಾರ್ಯಕ್ರಮ

ವಾರ್ತಾಭಾರತಿವಾರ್ತಾಭಾರತಿ18 Jun 2016 11:32 PM IST
share
‘ಆರೋಗ್ಯ ಚೆನ್ನಾಗಿರಬೇಕಾದರೆ ಸ್ವಚ್ಛತೆ ಅಗತ್ಯ: ಡಾ.ದೊಡ್ಡಮಲ್ಲಪ್ಪ

ಕಡೂರು, ಜೂ. 18: ಆರೋಗ್ಯ ಚೆನ್ನಾಗಿರಬೇಕಾದರೆ ಮೊದಲು ಸ್ವಚ್ಛತೆ ಇರಬೇಕು. ಆರೋಗ್ಯ ಭಾಗ್ಯ ಚೆನ್ನಾಗಿರಬೇಕಾದರೆ ಸ್ವಚ್ಛತೆ ಅಗತ್ಯ ಎಂದು ಸ್ವಚ್ಛತಾ ಅಭಿಯಾನದ ಜಿಲ್ಲಾ ನೋಡಲ್ ಅಧಿಕಾರಿ ಡಾ.ದೊಡ್ಡಮಲ್ಲಪ್ಪ ಹೇಳಿದರು.

 ಪಟ್ಟಣದ 12ನೆ ವಾರ್ಡಿನ ಗಾಂಧಿನಗರದಲ್ಲಿ ಪುರಸಭೆೆ ಮತ್ತು ಆರೋಗ್ಯ ಇಲಾಖೆಯ ಆಶ್ರಯದಲ್ಲಿ ನಡೆದ ಸ್ವಚ್ಛತಾ ಸಪ್ತಾಹ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಸ್ವಚ್ಛತೆ ಇಲ್ಲದಿದ್ದರೆ ಅನಾರೋಗ್ಯ ಸಮಸ್ಯೆಗಳು ಕಾಡುತ್ತವೆ. ಸ್ವಚ್ಛತೆ ಎಂದರೆ ದೇವರು, ಸ್ವಚ್ಛತೆ ಎಲ್ಲಿರುತ್ತದೆಯೋ ಅಲ್ಲಿ ದೇವರಿರುತ್ತಾನೆ. ಹಣದಿಂದ ರೋಗ ಗೆಲ್ಲಲು ಸಾಧ್ಯವಿಲ್ಲ. ಜಾಣತನದಿಂದ ರೋಗಗಳು ಬರುವುದನ್ನು ತಡೆಗಟ್ಟಬಹುದು. ಸ್ವಚ್ಛತೆ ಕಾಪಾಡುವುದರಿಂದ, ಪ್ರಾಣಹಾನಿ ಕಡಿಮೆ ಮಾಡಬಹುದು ಎಂದು ಹೇಳಿದರು.

ಸ್ವಚ್ಛತಾ ಸಪ್ತಾಹ ಕಾರ್ಯಕ್ರಮ ಜೂ.22ರ ವರೆಗೆ ನಡೆಯಲಿದೆ. ಜೂ.19 ರಂದು ಎಲ್ಲಾ ಸರಕಾರಿ ಕಟ್ಟಡಗಳಲ್ಲಿ, 20 ರಂದು ಸಾರ್ವಜನಿಕ ಪ್ರದೇಶಗಳಲ್ಲಿ, 21 ರಂದು ಸಾರ್ವಜನಿಕ ಮತ್ತು ಖಾಸಗಿ ಆಸ್ಪತ್ರೆಗಳಲ್ಲಿ ಹಾಗೂ 22 ರಂದು ಕಾರ್ಖಾನೆಗಳಿರುವ ಪ್ರದೇಶಗಳಲ್ಲಿ ಒಂದು ವಾರಗಳ ಕಾಲ ಸ್ವಚ್ಛತಾ ಅಭಿಯಾನ ಸಪ್ತಾಹ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದರು.

ಸ್ವಚ್ಛತಾ ಸಪ್ತಾಹ ಕಾರ್ಯಕ್ರಮಕ್ಕೆ ಹಸಿರು ಬಾವುಟ ತೋರಿಸಿ ಚಾಲನೆ ನೀಡಿದ ಪುರಸಭಾ ಅಧ್ಯಕ್ಷೆ ಅನಿತಾರಾಜ್‌ಕುಮಾರ್ ಮಾತನಾಡಿ, ಇತ್ತೀಚೆಗೆ ಮಲೇರಿಯಾ, ಹಂದಿ ಜ್ವರ, ಚಿಕುನ್‌ಗುನ್ಯಾ, ಡೆಂಗ್ ಜ್ವರ, ವಾಂತಿ ಭೇದಿ, ಕಾಲರದಂತಹ ಸಾಂಕ್ರಾಮಿಕ ರೋಗಗಳು ವ್ಯಾಪಕವಾಗಿವೆ. ಸಾರ್ವಜನಿಕರು ಮುಂಜಾಗ್ರತಾ ಕ್ರಮವನ್ನು ಅನುಸರಿಸಬೇಕು. ಪುರಸಭೆಯ ಆರೋಗ್ಯ ಅಧಿಕಾರಿಗಳು ಈ ಬಗ್ಗೆ ಕ್ರಮ ವಹಿಸುವಂತೆ ಕರೆ ನೀಡಿದರು.

ತಾಲೂಕು ಆರೋಗ್ಯ ಅಧಿಕಾರಿ ಡಾ.ಪ್ರಭು ಮಾತನಾಡಿ, ತಾಲೂಕು ಆಡಳಿತದ ವತಿಯಿಂದ ಡೆಂಗ್ ಜ್ವರ ಮತ್ತು ಮಲೇರಿಯಾ ಹಾಗೂ ಇತರೆ ಸಾಂಕ್ರಾಮಿಕ ರೋಗಗಳ ಬಗ್ಗೆ ಈಗಾಗಲೇ ಆರೋಗ್ಯ ಇಲಾಖೆಯ ಆಶಾ ಕಾರ್ಯಕತೆರ್ಯರು ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ. ಇದಕ್ಕೆ ಪುರಸಭೆೆಯ ಸದಸ್ಯರು ಮತ್ತು ಆರೋಗ್ಯ ನಿರೀಕ್ಷಕರು ಸಹಕರಿಸುವಂತೆ ಮನವಿ ಮಾಡಿದರು.

ಕಾರ್ಯಕ್ರಮಕ್ಕೂ ಮೊದಲು ಕಾಮಧೇನು ನರ್ಸಿಂಗ್ ವಿದ್ಯಾರ್ಥಿಗಳು ಮನೆ-ಮನೆಗೆ ಭೇಟಿ ನೀಡಿ ಸ್ವಚ್ಛತೆಯ ಬಗ್ಗೆ ಕರಪತ್ರ ಹಂಚಿದರು. ಪುರಸಭೆಯ ಸಿಬ್ಬಂದಿ ಸ್ವಚ್ಛತೆ ಕಾರ್ಯ ನಡೆಸಿದರು.

ಈ ಸಂದರ್ಭ ಪುರಸಭೆ ಉಪಾಧ್ಯಕ್ಷ ಮಂಜುನಾಥ್, ಸದಸ್ಯ ಜಯಣ್ಣ, ಆರೋಗ್ಯ ನಿರೀಕ್ಷರಾದ ಹರೀಶ್, ಈಶ್ವರ್, ಕಾಮಧೇನು ನರ್ಸಿಂಗ್ ಶಾಲೆಯ ಗಿರೀಶ್ ಮತ್ತಿತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X