Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಶೈಕ್ಷಣಿಕ ಸಾಲ ಸೌಲಭ್ಯ ವಿಸ್ತರಣೆ:...

ಶೈಕ್ಷಣಿಕ ಸಾಲ ಸೌಲಭ್ಯ ವಿಸ್ತರಣೆ: ಡಾ.ಫೌಜ್ದಾರ್

ಜಿಲ್ಲಾ ಅಲ್ಪಸಂಖ್ಯಾತರ ನೂತನ ಕಚೇರಿ ಉದ್ಘಾಟನೆ ಸಮಾರಂಭ

ವಾರ್ತಾಭಾರತಿವಾರ್ತಾಭಾರತಿ18 Jun 2016 11:38 PM IST
share
ಶೈಕ್ಷಣಿಕ ಸಾಲ ಸೌಲಭ್ಯ ವಿಸ್ತರಣೆ: ಡಾ.ಫೌಜ್ದಾರ್

ಮಡಿಕೇರಿ, ಜೂ.18 : ಪ್ರಸಕ್ತ ಸಾಲಿನಲ್ಲಿ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ವತಿಯಿಂದ ಅರಿವು ಯೋಜನೆಯಡಿ ಸಾಮಾನ್ಯ ಪದವಿ, ಸ್ನಾತಕೋತ್ತರ ಪದವಿದರರಿಗೂ ಶೈಕ್ಷಣಿಕ ಸಾಲ ಸೌಲಭ್ಯ ಕಲ್ಪಿಸಲು ಸರಕಾರ ತೀರ್ಮಾನಿಸಿದ್ದು, ಅರ್ಹರು ಇದರ ಸದುಪಯೋಗಪಡಿಸಿಕೊಳ್ಳ ಬೇಕೆಂದು ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ಅಧ್ಯಕ್ಷ ಡಾ. ಎಸ್.ವೈ.ಎಂ. ಮಸೂದ್ ಫೌಜ್ದಾರ್ ಕರೆ ನೀಡಿದ್ದಾರೆ. ನಗರದ ಕಾಲೇಜು ರಸ್ತೆಯ ರಾಮಮಂದಿರ ಬಳಿಗೆ ಸ್ಥಳಾಂತರವಾಗಿರುವ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ಜಿಲ್ಲಾ ನೂತನ ಕಚೇರಿಯನ್ನು ಉದ್ಘಾಟಿಸಿ ಬಳಿಕ ಮಾತನಾಡುತ್ತಿದ್ದರು. ಅರಿವು ಯೋಜನೆಯಡಿ ಈ ಹಿಂದೆ ವೃತ್ತಿಪರ ವ್ಯಾಸಂಗ ಮಾಡುತ್ತಿರುವವರಿಗೆ ಮಾತ್ರ ವಿದ್ಯಾಭ್ಯಾಸಕ್ಕಾಗಿ 50 ಸಾವಿರ ರೂ.ವರೆಗೆ ಸಾಲ ಸೌಲಭ್ಯ ನೀಡಲಾಗುತ್ತಿತ್ತು, ಈ ವರ್ಷದಿಂದ ಸಾಮಾನ್ಯ ಪದವಿ, ಸ್ನಾತಕೋತ್ತರ ಪದವಿ ಓದುತ್ತಿರುವ ವಿದ್ಯಾರ್ಥಿಗಳಿಗೂ ಸಾಲ ಸೌಲಭ್ಯ ವಿಸ್ತರಿಸಲಾಗಿದೆ ಎಂದು ತಿಳಿಸಿದರು. ಸರಕಾರ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ಮೂಲಕ ಸ್ವಾವಲಂಬನೆ, ಶ್ರಮಶಕ್ತಿ, ಅರಿವು, ಕಿರುಸಾಲ, ಗಂಗಾ ಕಲ್ಯಾಣ, ಕೃಷಿಭೂಮಿ ಯೋಜನೆ, ಗೃಹ ಸಾಲ ಯೋಜನೆ ಮೇಲೆ ಬಡ್ಡಿ ಸಹಾಯಧನ ಹೀಗೆ ಹಲವು ಯೋಜನೆಗಳನ್ನು ಜಾರಿಗೆ ತಂದಿದೆ. ಆ ಮೂಲಕ ಅಲ್ಪಸಂಖ್ಯಾತರ ಶ್ರೇಯೋಭಿವೃದ್ಧಿಗೆ ಸುಮಾರು 241 ಕೋಟಿ ರೂ. ಸಾಲ ಸೌಲಭ್ಯವನ್ನು ವಿತರಿಸಿ ಸುಮಾರು 91 ಸಾವಿರ ಫಲಾನುಭವಿಗಳು ಇದರ ಸದುಪಯೋಗ ಪಡೆದುಕೊಂಡಿದ್ದಾರೆ. ಶೇ.50ಕ್ಕೂ ಹೆಚ್ಚು ಸಾಲ ಮರುಪಾವತಿಯಾಗಿದೆ ಎಂದು ಅವರು ಹೇಳಿದರು. ಸ್ವಾವಲಂಬನ ಯೋಜನೆಯಡಿ ಸೇವಾ ವಲಯದಲ್ಲಿ ಬರುವ ಚಟುವಟಿಕೆಗಳಿಗೆ ಬ್ಯಾಂಕ್‌ಗಳು ಹಣಕಾಸು ಸಂಸ್ಥೆಗಳ ಸಹಯೋಗದೊಂದಿಗೆ ಗರಿಷ್ಠ 5 ಲಕ್ಷ ರೂ. ವರೆಗೆ ಆರ್ಥಿಕ ನೆರವು ಒದಗಿಸಲಾಗುತ್ತಿದೆ. ಶ್ರಮಶಕ್ತಿ ಯೋಜನೆಯಡಿ ಗ್ರಾಮೀಣ ಕುಶಲ ಕರ್ಮಿಗಳು ಹಾಗೂ ವೃತ್ತಿ ಕುಶಲ ಕಸುಬುದಾರರಿಗೆ ಕುಶಲತೆ ಮತ್ತು ತಂತ್ರಜ್ಞಾನ ಉತ್ತಮ ಪಡಿಸಿಕೊಳ್ಳಲು ತರಬೇತಿ ನೀಡಲಾಗುತ್ತದೆ. ಇದಕ್ಕಾಗಿ 25 ಸಾವಿರ ರೂ.ವರೆಗೆ ಸಾಲ ಸೌಲಭ್ಯ ಕಲ್ಪಿಸಲಾಗುತ್ತಿದೆ ಎಂದು ಅವರು ಮಾಹಿತಿ ನೀಡಿದರು. ಕೊಡಗು ಜಿಲ್ಲೆಗೆ ಸಂಬಂಧಿಸಿದಂತೆ 2014-15ನೆ ಸಾಲಿನಲ್ಲಿ ಒಟ್ಟು 964 ಫಲಾನುಭವಿಗಳಿಗೆ 312.7 ಲಕ್ಷ ರೂ. ಗುರಿ ನಿಗದಿಪಡಿಸಲಾಗಿತ್ತು, ಮಾರ್ಚ್ 2015 ಮಾಹೆಯವರೆಗೆ ಒಟ್ಟು 605 ಫಲಾನುಭವಿಗಳಿಗೆ 183.39 ಲಕ್ಷ ರೂ. ಸಾಲವನ್ನು ವಿತರಣೆ ಮಾಡಿ ಶೇ.59 ರಷ್ಟು ಪ್ರಗತಿ ಸಾಧಿಸಲಾಗಿದೆ ಎಂದು ಮಾಹಿತಿ ನೀಡಿದರು.

2015-16 ನೆ ಸಾಲಿನಲ್ಲಿ ಜಿಲ್ಲೆಯಲ್ಲಿ ಒಟ್ಟು 1009 ಫಲಾನುಭವಿಗಳಿಗೆ 234.62 ಲಕ್ಷ ರೂ. ಗುರಿ ನಿಗದಿಪಡಿಸಲಾಗಿತ್ತು. ಈ ಮಾಹೆವರೆಗೂ ಒಟ್ಟು 445 ಫಲಾನುಭವಿಗಳಿಗೆ 117.84 ಲಕ್ಷ ರೂ. ಸಾಲವನ್ನು ವಿತರಣೆ ಮಾಡಲಾಗಿದ್ದು, ಶೇ. 51 ರಷ್ಟು ಆರ್ಥಿಕ ಪ್ರಗತಿಯನ್ನು ಸಾಧಿಸಲಾಗಿದೆ ಎಂದರು. 2016ನೆ ಸಾಲಿನಲ್ಲಿ ಒಟ್ಟು ರೂ. 7,64,900 ಸಾಲ ಮರುಪಾವತಿಯಾಗಿದೆ. ವಿವಿಧ ಯೋಜನೆಗಳಡಿ ಸಾಲ ಬಾಕಿ ಉಳಿಸಿಕೊಂಡಿದ್ದ 2,332 ಫಲಾನುಭವಿಗಳಿಗೆ ರೂ. 2,81,70,293 ನ್ನು ಸಾಲ ಮನ್ನಾ ಮಾಡಲಾಗಿದೆ ಎಂದು ಡಾ.ಎಸ್.ವೈ.ಎಂ. ಮಸೂದ್ ಫೌಜ್ದ್ದಾರ್ ಅವರು ತಿಳಿಸಿದರು. ಈ ಸಂದರ್ಭದಲ್ಲಿ ಮಡಿಕೇರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷೆ ಸುರಯ್ಯೆ ಅಬ್ರಾರ್, ಕರ್ನಾಟಕ ರಾಜ್ಯ ಮದ್ಯಪಾನ ಮಂಡಳಿ ನಿರ್ದೇಶಕ ಯಾಕುಬ್, ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕ ನಾಗೇಂದ್ರ ಪ್ರಸಾದ್ ಮತ್ತಿತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X