Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ರಾಜನ್ ವಿರುದ್ಧ ಆರೆಸ್ಸೆಸ್,ಬಿಜೆಪಿ...

ರಾಜನ್ ವಿರುದ್ಧ ಆರೆಸ್ಸೆಸ್,ಬಿಜೆಪಿ ಸಚಿವರ ಲಾಬಿ:ಪ್ರತಿಪಕ್ಷದ ಆರೋಪ

ವಾರ್ತಾಭಾರತಿವಾರ್ತಾಭಾರತಿ19 Jun 2016 7:34 PM IST
share
ರಾಜನ್ ವಿರುದ್ಧ ಆರೆಸ್ಸೆಸ್,ಬಿಜೆಪಿ ಸಚಿವರ ಲಾಬಿ:ಪ್ರತಿಪಕ್ಷದ ಆರೋಪ

ಹೊಸದಿಲ್ಲಿ,ಜೂ.19: ಆರ್‌ಬಿಐ ಗವರ್ನರ್ ರಘುರಾಮ ರಾಜನ್ ವಿರುದ್ಧ ಆರೆಸ್ಸೆಸ್ ಮತ್ತು ಕೆಲವು ಬಿಜೆಪಿ ಸದಸ್ಯರು ಲಾಬಿ ನಡೆಸುತ್ತಿದ್ದಾರೆ ಎಂದು ರವಿವಾರ ಆರೋಪಿಸಿದ ಕಾಂಗ್ರೆಸ್, ಎರಡನೇ ಅವಧಿಯನ್ನು ಬಯಸದಿರುವ ರಾಜನ್ ನಿರ್ಧಾರವು ದೇಶದ ಪಾಲಿಗೆ ಅತ್ಯಂತ ಅಹಿತಕರ ಸಂಗತಿಯಾಗಿದೆ ಎಂದು ಹೇಳಿದೆ.

 ರಾಜನ್ ಅವರ ಮಟ್ಟದ ವ್ಯಕ್ತಿ ಈಗಿನ ಸರಕಾರಕ್ಕೆ ಬೇಕಾಗಿಲ್ಲ ಎಂದು ಹೇಳಿದ ಹಿರಿಯ ಕಾಂಗ್ರೆಸ್ ನಾಯಕ ವೀರಪ್ಪ ಮೊಯ್ಲಿ ಅವರು, ಕಾರಣ ತನಗೆ ಗೊತ್ತಿಲ್ಲ. ಆದರೆ ಅದು ಅವರಿಗೆ ಚೆನ್ನಾಗಿ ತಿಳಿದಿದೆ. ಕೆಲವು ಬಿಜೆಪಿ ವಕ್ತಾರರು,ವಾಣಿಜ್ಯ ಸಚಿವೆ ನಿರ್ಮಲಾ ಸೀತಾರಾಮನ್,ಬಿಜೆಪಿ ನಾಯಕ ಸುಬ್ರಮಣಿಯನ್ ಸ್ವಾಮಿ ಇವರೆಲ್ಲ ಮಾತನಾಡುತ್ತಿರುವ ರೀತಿಯನ್ನು ಗಮನಿಸಿದರೆ ಆರೆಸ್ಸೆಸ್ ಸೇರಿದಂತೆ ಇವರಲ್ಲಿ ಕೆಲವರು ರಾಜನ್ ವಿರುದ್ಧ ಲಾಬಿ ಮಾಡುತ್ತಿದ್ದಾರೆ ಎಂದರು. ರಾಜನ್ ಎರಡನೇ ಅವಧಿಗೆ ಮುಂದುವರಿಯದಿರಲು ನಿರ್ಧರಿಸಿರುವುದು ಹಿತಕರ ಸುದ್ದಿಯಲ್ಲ ಎಂದು ಅವರು ಹೇಳಿದರು.

ಇಂತಹುದೇ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದ ಆರ್‌ಜೆಡಿ ವಕ್ತಾರ ಮನೋಜ ಝಾ ಅವರು, ರಾಜನ್ ಕೈಗೊಂಡಿದ್ದ ಕ್ರಮಗಳು ಅತ್ಯಂತ ಸುರಕ್ಷಿತ ಮತ್ತು ಸುಭದ್ರ ಎನ್ನುವ ಭಾವನೆ ಜನರಲ್ಲಿದೆ ಎಂದರು.

ಆದರೆ ಇತ್ತೀಚಿನ ಕೆಲವು ದಿನಗಳಿಂದ ರಾಜನ್ ಅವರ ಸಾಧನೆ ಮತ್ತು ಕಾರ್ಯ ನಿರ್ವಹಣೆಯ ಕುರಿತು ಬೆಟ್ಟು ಮಾಡಲಾಗುತ್ತಿದೆ. ಅವರ ವಿರುದ್ಧ ಸಲ್ಲದ ಆರೋಪಗಳನ್ನು ಮಾಡಲಾಗುತ್ತಿದೆ. ಹೀಗಿರುವಾಗ ನೈತಿಕ ನೆಲೆಗಟ್ಟು ಹೊಂದಿರುವ,ತನ್ನ ವೌಲ್ಯಗಳಿಗೆ ಬದ್ಧರಾಗಿರುವ ರಾಜನ್‌ರಂತಹ ವ್ಯಕ್ತಿ ಬೇರೇನು ಮಾಡಲು ಸಾಧ್ಯ? ಎರಡನೆ ಅವಧಿಗೆ ಅಧಿಕಾರದಲ್ಲಿ ಮುಂದುವರಿಯಲು ಅವರು ಬಯಸಿದ್ದರೆ, ಅವರು ಸ್ವಾಮಿಯವರಂತಹ ವ್ಯಕ್ತಿಯೊಂದಿಗೆ ಕಾರ್ಯ ನಿರ್ವಹಿಸಬೇಕಾಗುತ್ತಿತ್ತು ಎಂದರು.

ರಾಜನ್ ವಿರುದ್ಧ ನಿರಂತರ ದಾಳಿಯನ್ನು ನಡೆಸುತ್ತಿದ್ದ ಸ್ವಾಮಿ ಮುಂದಿನ ಅವಧಿಗೆ ಮುಂದುವರಿಯದಿರುವ ಅವರ ನಿರ್ಧಾರದ ಬಗ್ಗೆ ವ್ಯಂಗ್ಯವಾಡಿದ್ದಾರೆ. ವಾಸ್ತವವನ್ನು ಮರೆಮಾಚಲು ಅವರು ಯಾವುದೇ ಮಾರ್ಗ ಅನುಸರಿಸಲಿ..ಜನರು ಅದನ್ನು ಮರೆತು ಅವರಿಗೆ ಶುಭವಿದಾಯವನ್ನು ಕೋರಬೇಕು ಎಂದಿದ್ದಾರೆ.

ರಾಜನ್ ನಿರ್ಧಾರವು ತನಗೆ ನಿರಾಶೆಯ ಜೊತೆಗೆ ಗಾಢನೋವನ್ನುಂಟು ಮಾಡಿದೆ. ಆದರೆ ಇದು ತನಗೆ ಅಚ್ಚರಿಯನುಂಟು ಮಾಡಿಲ್ಲ. ಈಗಿನ ಸರಕಾರಕ್ಕೆ ರಾಜನ್‌ರಂತಹ ವ್ಯಕ್ತಿಗಳು ಬೇಕಾಗಿಲ್ಲ ಎಂದು ಮಾಜಿ ವಿತ್ತಸಚಿವ ಪಿ.ಚಿದಂಬರಂ ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X