Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಯೋಗ ದಿನದ ನನ್ನ ಕರೆಗೆ ಇಷ್ಟೊಂದು ಭಾರೀ...

ಯೋಗ ದಿನದ ನನ್ನ ಕರೆಗೆ ಇಷ್ಟೊಂದು ಭಾರೀ ಸ್ಪಂದನೆ ನಿರೀಕ್ಷಿಸಿರಲಿಲ್ಲ:ಪ್ರಧಾನಿ ಮೋದಿ

ವಾರ್ತಾಭಾರತಿವಾರ್ತಾಭಾರತಿ19 Jun 2016 7:38 PM IST
share
ಯೋಗ ದಿನದ ನನ್ನ ಕರೆಗೆ ಇಷ್ಟೊಂದು ಭಾರೀ ಸ್ಪಂದನೆ ನಿರೀಕ್ಷಿಸಿರಲಿಲ್ಲ:ಪ್ರಧಾನಿ ಮೋದಿ

ಹೊಸದಿಲ್ಲಿ,ಜೂ.19: ವಿಶ್ವ ಯೋಗ ದಿನವನ್ನು ಆಚರಿಸಬೇಕೆಂಬ ತನ್ನ ಕರೆಗೆ ವಿಶ್ವಾದ್ಯಂತ ಇಷ್ಟೊಂದು ಭಾರೀ ಉತ್ಸಾಹವನ್ನು ತಾನು ನಿರೀಕ್ಷಿಸಿರಲಿಲ್ಲ ಎಂದು ಹೇಳಿರುವ ಪ್ರಧಾನಿ ನರೇಂದ್ರ ಮೋದಿಯವರು, ಯೋಗವು ದೈಹಿಕ ಕಸರತ್ತಿಗಿಂತ ಹೆಚ್ಚಿನದಾಗಿದೆ ಎಂದು ಒತ್ತಿ ಹೇಳಿದ್ದಾರೆ. ಮೋದಿಯವರ ಒತ್ತಾಸೆಯ ಮೇರೆಗೆ ವಿಶ್ವಸಂಸ್ಥೆಯು ಪ್ರತಿ ವರ್ಷ ಜೂನ್ 21ನ್ನು ವಿಶ್ವ ಯೋಗ ದಿನವೆಂದು ಕಳೆದ ವರ್ಷದ ಸೆಪ್ಟೆಂಬರ್‌ನಲ್ಲಿ ಘೋಷಿಸಿತ್ತು.

ಕಳೆದ ವರ್ಷ ಮತ್ತು ಈ ವರ್ಷ ಇನ್ನೊಮ್ಮೆ ಜನರ ಬೆಂಬಲ ಮತ್ತು ಪಾಲ್ಗೊಳ್ಳುವಿಕೆಯು ಈ ಪುರಾತನ ವಿದ್ಯೆಯನ್ನು ಪೋಷಿಸುವ ಮತ್ತು ಉತ್ತೇಜಿಸುವ ಬದ್ಧತೆಯನ್ನು ಪನರಾವರ್ತಿಸಿದೆ ಮತ್ತು ಯೋಗವು ‘ವಸುಧೈವ ಕುಟುಂಬಕಂ(ವಿಶ್ವ ಕುಟುಂಬ)’ನ ಆದರ್ಶಪ್ರಾಯ ಅಭಿವ್ಯಕ್ತಿಯಾಗಿದೆ ಎನ್ನುವುದನ್ನು ಮತ್ತೊಮ್ಮೆ ದೃಢಪಡಿಸಿದೆ ಎಂದು ಮಂಗಳವಾರ ನಡೆಯಲಿರುವ ಎರಡನೇ ವಿಶ್ವ ಯೋಗ ದಿನಾಚರಣೆಗೆ ಮುನ್ನ ವೀಡಿಯೊ ಸಂದೇಶದಲ್ಲಿ ಮೋದಿ ಹೇಳಿದ್ದಾರೆ.

ಕಳೆದ ವರ್ಷದ ಯೋಗ ದಿನಾಚರಣೆಯ ಚಿತ್ರಗಳು ತನ್ನ ಕಣ್ಣ ಮುಂದಿವೆ. ಪೆಸಿಫಿಕ್ ದ್ವೀಪಗಳಿಂದ ಪೋರ್ಟ್ ಆಫ್ ಸ್ಪೇನ್‌ವರೆಗೆ, ವ್ಲಾಡಿವೊಸ್ಟಕ್‌ನಿಂದ ವ್ಯಾಂಕೂವರ್ ಮತ್ತು ಕೋಪನ್ ಹೇಗನ್‌ನಿಂದ ಕೇಪ್‌ಟೌನ್‌ವರೆಗೆ ಸಾವಿರಾರು ಜನರು ಯೋಗಾಭ್ಯಾಸದಲ್ಲಿ ಪಾಲ್ಗೊಂಡಿದ್ದರು ಎಂದು ಅವರು ಹೇಳಿದ್ದಾರೆ.

ಯೋಗವು ದೈಹಿಕ ವ್ಯಾಯಾಮಕ್ಕಿಂತ ಎಷ್ಟೋ ಮೇಲಿನದಾಗಿದೆ. ಅದು ನಮ್ಮತನದ ಹೊಸ ಆಯಾಮವನ್ನು ಕಂಡುಕೊಳ್ಳುವಂತೆ ಮಾಡುತ್ತದೆ, ಆರೋಗ್ಯ ರಕ್ಷಣೆಗೆ ನೆರವಾಗುತ್ತದೆ ಎಂದು ಮೋದಿ ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X