ಶಿರಾಡಿ: ಗ್ಯಾಸ್ ಟ್ಯಾಂಕರ್ ಪಲ್ಟಿ

ಉಪ್ಪಿನಂಗಡಿ, ಜೂ.19: ಗ್ಯಾಸ್ ಟ್ಯಾಂಕರ್ ಪಲ್ಟಿಯಾಗಿ ವಾಹನ ಸಂಚಾರಕ್ಕೆ ಅಡಚಣೆ ಉಂಟಾದ ಘಟನೆ ರಾಷ್ಟ್ರೀಯ ಹೆದ್ದಾರಿ 75ರ ಶಿರಾಡಿ ಗ್ರಾಮದ ಗುಂಡ್ಯ ಎಂಬಲ್ಲಿ ರವಿವಾರ ನಡೆದಿದೆ.
ಮಂಗಳೂರಿನಿಂದ ಬೆಂಗಳೂರಿಗೆ ಅನಿಲ ಸಾಗಾಟ ಮಾಡುತ್ತಿದ್ದ ಟ್ಯಾಂಕರ್ ಗುಂಡ್ಯದಲ್ಲಿ ಚಾಲಕನ ನಿಯಂತ್ರಣ ಕಳೆದುಕೊಂಡು ಪಲ್ಟಿಯಾಗಿದೆ. ಈ ವೇಳೆ ಗ್ಯಾಸ್ ಟ್ಯಾಂಕ್ ವಾಹನದಿಂದ ಬೇರ್ಪಟ್ಟು ಬಿದ್ದಿದೆ. ಆದರೆ ಅನಿಲ ಸೋರಿಕೆಯಾಗದಿರುವುದರಿಂದ ಸಂಬಾವ್ಯ ಅಪಾಯ ತಪ್ಪಿದೆ.
ಮುಂಜಾಗ್ರತಾ ಕ್ರಮವಾಗಿ ಅಗ್ನಿಶಾಮಕ ವಾಹನವನ್ನು ಸ್ಥಳಕ್ಕೆ ಕರೆಸಲಾಗಿತ್ತು. ಬಳಿಕ ಪಲ್ಟಿಯಾಗಿದ್ದ ಟ್ಯಾಂಕರನ್ನು ಕ್ರೇನ್ ಮೂಲಕ ಸರಿಪಡಿಸಿ ಇನ್ನೊಂದು ವಾಹನಕ್ಕೆ ಜೋಡಿಸಿ ಬೆಂಗಳೂರಿಗೆ ಕೊಂಡೊಯ್ಯಲಾಯಿತು.
Next Story





