Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. 19 ಕ್ಷೇತ್ರಗಳಲ್ಲಿ ಜೆಡಿಎಸ್ ಪ್ರಾಬಲ್ಯ:...

19 ಕ್ಷೇತ್ರಗಳಲ್ಲಿ ಜೆಡಿಎಸ್ ಪ್ರಾಬಲ್ಯ: ಮಧು ಬಂಗಾರಪ್ಪ ವಿಶ್ವಾಸ

ತಾಪಂ ಚುನಾವಣೆ

ವಾರ್ತಾಭಾರತಿವಾರ್ತಾಭಾರತಿ19 Jun 2016 11:27 PM IST
share
19 ಕ್ಷೇತ್ರಗಳಲ್ಲಿ ಜೆಡಿಎಸ್ ಪ್ರಾಬಲ್ಯ: ಮಧು ಬಂಗಾರಪ್ಪ ವಿಶ್ವಾಸ

ಸೊರಬ, ಜೂ.19: ತಾಲೂಕಿನ 19 ಕ್ಷೇತ್ರಗಳಲ್ಲಿ ಅತ್ಯಂತ ಹೆಚ್ಚು ಮತಗಳ ಅಂತರಗಳಿಂದ ವಿಜಯ ಸಾಧಿಸುವ ಮೂಲಕ ಕಾಂಗ್ರೆಸ್ ಹಾಗೂ ಬಿಜೆಪಿಯ ಇಬ್ಬರು ಮಾಜಿ ಸಚಿವರಿಗೆ ಗಂಟುಮೂಟೆ ಕಟ್ಟಿಸಲು ತಾಲೂಕಿನ ಪ್ರಜ್ಞಾವಂತ ಮತದಾರರು ತುದಿಗಾಲಲ್ಲಿ ನಿಂತಿದ್ದಾರೆ ಎಂದು ಮಧು ಬಂಗಾರಪ್ಪ ಭವಿಷ್ಯ ನುಡಿದರು.

ರವಿವಾರ ತಾಲೂಕಿನ ಹೆಗ್ಗೋಡು ಗ್ರಾಮದಲ್ಲಿ ತಾಪಂ ಅಭ್ಯರ್ಥಿ ಪರ ಮತಯಾಚಿಸಿ, ಚುನಾವಣಾ ಪ್ರಚಾರ ಸಭೆಯಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

 ಅಭಿವೃದ್ಧಿಯಲ್ಲಿ ಶೂನ್ಯ ಸಂಪಾದನೆ ಮಾಡಿದ ಕಾಂಗ್ರೆಸ್‌ನ ಮಾಜಿ ಸಚಿವ ಕುಮಾರ್ ಬಂಗಾರಪ್ಪ ಹಾಗೂ ಬಿಜೆಪಿಯ ಹರತಾಳು ಹಾಲಪ್ಪನವರಿಗೆ ಕಳೆದ ಜಿಪಂ ಚುನಾವಣೆಯಲ್ಲಿ ತಾಲೂಕಿನ ಮತದಾರರು ತಕ್ಕ ಪಾಠ ಕಲಿಸಿದ್ದಾರೆ. ಈ ಬಾರಿಯ ತಾಪಂನ 19 ಕ್ಷೇತ್ರಗಳಲ್ಲೂ ಜೆಡಿಎಸ್ ಅಭ್ಯರ್ಥಿಗಳು ಜಯಗಳಿಸುವ ಮೂಲಕ ರಾಜಕಾರಣದಿಂದಲೇ ಅವರನ್ನು ಹೊರಹಾಕಲಿದ್ದಾರೆ. ಮಾಜಿ ಮುಖ್ಯಮಂತ್ರಿ ಎಸ್.ಬಂಗಾರಪ್ಪನವರನ್ನು ತಾಲೂಕಿನ ಜನತೆ ರಾಜ್ಯ ಹಾಗೂ ರಾಷ್ಟ್ರ ನಾಯಕರನ್ನಾಗಿ ಮಾಡಿದ್ದರು. ತಾಲೂಕಿನ ಜನತೆಯ ಅಭಿಪ್ರಾಯ ಹಾಗೂ ಮುಖಂಡರ ಅಪೇಕ್ಷೆಯಂತೆ ನಿಷ್ಠಾವಂತ ಹಾಗೂ ಯುವಕರನ್ನು ತಾಪಂ ಚುನಾವಣಾ ಕಣಕ್ಕೆ ಇಳಿಸಲಾಗಿದೆ. ತಾಲೂಕಿನಲ್ಲಿ ಈಗಾಗಲೇ ಸಾಕಷ್ಟು ಅಭಿವೃದ್ಧಿ ಕಾರ್ಯಗಳು ನಡೆದಿವೆ. ಜಿಪಂ ನಡೆದು, ಕೆಲವೇ ತಿಂಗಳುಗಳಲ್ಲಿ ಅನುದಾನದ ಕೊರತೆ ಇದ್ದರೂ ಸಹ ತಮ್ಮ ತಮ್ಮ ಕ್ಷೇತ್ರಗಳಲ್ಲಿ ಕುಡಿಯುವ ನೀರು ಸೇರಿದಂತೆ ಇನ್ನಿತರೆ ಅಭಿವೃದ್ಧಿ ಕಾರ್ಯಗಳನ್ನು ತ್ವರಿತಗತಿಯಲ್ಲಿ ಜಿಪಂ ಸದಸ್ಯರು ಮಾಡಿ, ಸಾರ್ವಜನಿಕರ ಸಮಸ್ಯೆಗೆ ಸ್ಪಂದಿಸಿದ್ದಾರೆ. ಇವರ ಕಾರ್ಯವೈಖರಿ ತಾಪಂ ಚುನಾವಣೆಗೆ ಸಹಕಾರಿಯಾಗಲಿದೆ. ಜೆಡಿಎಸ್ ಎಲ್ಲಾ ಸಮುದಾಯದ ಅಭ್ಯರ್ಥಿಗಳನ್ನು ಚುನಾ ವಣೆಗೆ ಸ್ಪರ್ಧೆಗೆ ಇಳಿಸುವ ಮೂಲಕ ಜಾತ್ಯತೀತ ಪಕ್ಷವೆಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಇದಕ್ಕೆ ಉತಮ ನಿದರ್ಶನ ಎಂದರೆ ಶಿಗ್ಗಾ ತಾಪಂ ಕ್ಷೇತ್ರಕ್ಕೆ ಅಲ್ಪಸಂಖ್ಯಾತ ಸಮುದಾಯದ ಮುಸ್ಲಿಂ ಜನಾಂಗದ ಕೆಲವೇ ಕೆಲವು ಮತಗಳು ಇದ್ದರೂ ಸಹ ನಿಷ್ಠಾವಂತ ಕಾರ್ಯಕರ್ತ ಸೈಯದ್ ಸಿರಾಜ್‌ಗೆ ಅವಕಾಶ ನೀಡಲಾಗಿದೆ. ಜಾತಿ ಭೇದವಿಲ್ಲದೆ ಅವರನ್ನು ಕ್ಷೇತ್ರದ ಜನತೆ ಗೆಲ್ಲಿಸಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಅಭ್ಯರ್ಥಿ ನಯನಾ ಹೆಗಡೆ ಮಾತನಾಡಿ, ನಾನು ಸ್ಪರ್ಧಿಸುತ್ತಿರುವುದು ಬಂಗಾರಪ್ಪನವರ ಆಶೀರ್ವಾದದಿಂದ. ತಾಲೂಕಿನ ಶಾಸಕರು ಆಡಳಿತ ಪಕ್ಷದಲ್ಲಿ ಇಲ್ಲದಿದ್ದರೂ ತಾಲೂಕಿನ ಅಭಿವೃದ್ಧಿ ಮಾಡಿದ್ದಾರೆ. ತಾಲೂಕಿನ ಇನ್ನೂ ಹೆಚ್ಚಿನ ಅಭಿವೃದ್ಧಿ ಆಗಬೇಕು ಎಂದರೆ ಎಲ್ಲಾ 19 ತಾಪಂ ಕ್ಷೇತ್ರಗಳಲ್ಲಿ ಜೆಡಿಎಸ್‌ಗೆ ಬೆಂಬಲಿಸಿ, ಶಾಸಕರ ಕೈ ಬಲಪಡಿಸಲು ಸ್ಪರ್ಧಿಸಿರುವ ನನಗೆ ಹಾಗೂ ಉಳಿದ ಕ್ಷೇತ್ರಗಳಲ್ಲಿ ಜೆಡಿಎಸ್ ಅಭ್ಯರ್ಥಿಗಳಿಗೂ ಮತ ನೀಡುವ ಮೂಲಕ ಜಯಗಳಿಸುವಂತೆ ಮತಯಾಚಿಸಿದರು. ಸಭೆಯಲ್ಲಿ ಜಿಪಂ ಸದಸ್ಯೆ ತಾರಾ ಶಿವಾನಂದ, ಮುಖಂಡರಾದ ಎಚ್.ಗಣಪತಿ, ಶ್ರೀಪಾದ ಹೆಗಡೆ ನಿಸರಾಣಿ, ನಿಂಗಪ್ಪ ಬರಗಿ, ಬಸವೇಶ್ವರ, ಲಿಂಗರಾಜ ಗೌಡ, ಜಗದೀಶ ಕುಪ್ಪೆ, ಮತ್ತಿತರರು ಉಪಸ್ಥಿತರಿದ್ದರು

share
ವಾರ್ತಾಭಾರತಿ
ವಾರ್ತಾಭಾರತಿ
Next Story
X