Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಬಾಂಗ್ಲಾ: ಉಗ್ರವಾದದ ವಿರುದ್ಧ ಫತ್ವಾ

ಬಾಂಗ್ಲಾ: ಉಗ್ರವಾದದ ವಿರುದ್ಧ ಫತ್ವಾ

1 ಲಕ್ಷಕ್ಕೂ ಅಧಿಕ ಇಸ್ಲಾಮ್ ಧರ್ಮಗುರುಗಳ ಸಹಿ

ವಾರ್ತಾಭಾರತಿವಾರ್ತಾಭಾರತಿ19 Jun 2016 11:55 PM IST
share

ಢಾಕಾ,ಜೂ.19: ಬಾಂಗ್ಲಾದಲ್ಲಿ ಅಲ್ಪಸಂಖ್ಯಾತರು ಹಾಗೂ ಜಾತ್ಯತೀತ ಬರಹಗಾರರ ವಿರುದ್ಧ ಮೂಲಭೂತವಾದಿಗಳು ಬರ್ಬರವಾದ ದಾಳಿಗಳನ್ನು ನಡೆಸುತ್ತಿರುವುದರ ವಿರುದ್ಧ ಅಲ್ಲಿನ 1 ಲಕ್ಷಕ್ಕೂ ಅಧಿಕ ಇಸ್ಲಾಮಿ ವಿದ್ವಾಂಸರು ಹಾಗೂ ಧರ್ಮಗುರುಗಳು ಶನಿವಾರ ಫತ್ವಾ ಹೊರಡಿಸಿದ್ದಾರೆ.

ಢಾಕಾದಲ್ಲಿ ಪ್ರಕಟವಾದ ಈ ಫತ್ವಾಕ್ಕೆ ಇಮಾಮರು ಸೇರಿದಂತೆ ಬಾಂಗ್ಲಾದ ಒಟ್ಟು 1,01,524 ಮುಸ್ಲಿಂ ಧರ್ಮಗುರುಗಳು ಸಹಿ ಹಾಕಿದ್ದಾರೆ. ‘‘ಮಾನವಕುಲದ ಒಳಿತಿಗಾಗಿ ಶಾಂತಿಯ ಶಾಸನ’’ ಎಂಬ ಶೀರ್ಷಿಕೆಯ ಈ ಫತ್ವಾವು, ಅಲ್ಪಸಂಖ್ಯಾತರು ಹಾಗೂ ಜಾತ್ಯತೀತ ಕಾರ್ಯಕರ್ತರ ಮೇಲೆ ನಡೆಯುತ್ತಿರುವ ದಾಳಿಗಳನ್ನು ಬಲವಾಗಿ ಖಂಡಿಸಿದೆ.

‘‘ಜನರನ್ನು ಕೊಲ್ಲುವುದು ನರಕಕ್ಕೆ ದಾರಿಯೇ ಹೊರತು ಸ್ವರ್ಗಕ್ಕಲ್ಲವೆಂಬುದು ಉಗ್ರರಿಗೆ ಒಮ್ಮೆ ಅರಿವಾದರೆ ಸಾಕು, ಅವರು ಈ ಕೃತ್ಯಕ್ಕೆ ಕೈಹಾಕಲಾರರು’’ ಎಂದು ಬಾಂಗ್ಲಾದೇಶ ಜಮೀಯ್ಯತುಲ್ ಉಲೇಮಾದ ಅಧ್ಯಕ್ಷ ಫರೀದುದ್ದೀನ ಮಸೂದ್ ಫತ್ವಾವನ್ನು ಪ್ರಕಟಿಸಿದ ನಂತರ ನೀಡಿದ ಹೇಳಿಕೆಯೊಂದರಲ್ಲಿ ತಿಳಿಸಿದ್ದಾರೆ.

‘‘ಈ ಧರ್ಮಾಂಧ ಉಗ್ರರು ಕೇವಲ ಇಸ್ಲಾಮಿನ ಶತ್ರುಗಳು ಮಾತ್ರವಲ್ಲ ಇಡೀ ಮಾನವಕುಲದ ಶತ್ರುಗಳಾಗಿದ್ದಾರೆ’’ ಎಂದು ಮಸೂದ್ ಹೇಳಿರುವುದಾಗಿ ‘ದಿ ಡೈಲಿ ಸ್ಟಾರ್’ ಪತ್ರಿಕೆ ವರದಿ ಮಾಡಿದೆ.

ಬಾಂಗ್ಲಾದಾದ್ಯಂತ ಉಗ್ರರು ಧಾರ್ಮಿಕ ಅಲ್ಪಸಂಖ್ಯಾತರು, ಚಿಂತಕರು ಹಾಗೂ ಜಾತ್ಯತೀತ ಬರಹಗಾರರ ಮೇಲೆ ವ್ಯಾಪಕವಾಗಿ ದಾಳಿಗಳನ್ನು ನಡೆಸುತ್ತಿರುವ ಹಿನ್ನೆಲೆಯಲ್ಲಿ ಈ ಫತ್ವಾವನ್ನು ಹೊರಡಿಸಲಾಗಿದೆ. ಉಗ್ರರ ವಿರುದ್ಧ ಕೆಲವು ಫತ್ವಾಗಳನ್ನು ಘೋಷಿಸಲು ಢಾಕಾದಲ್ಲಿ ಸಭೆ ಸೇರಿರುವ 11 ಮಂದಿ ಉಲೇಮಾಗಳ ತಂಡದ ನೇತೃತ್ವವನ್ನು ಮಸೂದ್ ವಹಿಸಿದ್ದಾರೆ.

ದೇಶದಲ್ಲಿ ಶಾಂತಿ, ಸೌಹಾರ್ದತೆ ಹಾಗೂ ಸಹಿಷ್ಣುತೆಗಾಗಿ ಕರೆ ನೀಡಿರುವ ಇಸ್ಲಾಮಿ ಧರ್ಮಗುರುಗಳು, ಭಯೋತ್ಪಾದನೆಯ ವಿರುದ್ಧ ಸರಣಿ ಫತ್ವಾಗಳನ್ನು ಹೊರಡಿಸುವುದಾಗಿ ತಿಳಿಸಿದ್ದಾರೆ. ಕಿಶೋರ್‌ಗಂಜ್‌ನ ಶೋಲಕಿಯಾ ಮಸೀದಿಯ ಪ್ರಧಾನ ಇಮಾಮ್ ಆಗಿರುವ ಮಸೂದ್, ‘ಭಯೋತ್ಪಾದನೆ, ಉಗ್ರವಾದದ ವಿರುದ್ಧ ಮಾನವತೆ ಹಾಗೂ ಶಾಂತಿ ಕುರಿತ ಫತ್ವಾ’ದ ಸಂಚಾಲಕರೂ ಆಗಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X