Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ನಿಮ್ಮ ಅಂಕಣ
  4. ಅಂಬರೀಶ್ ರಾಜೀನಾಮೆಯನ್ನು ತಕ್ಷಣ...

ಅಂಬರೀಶ್ ರಾಜೀನಾಮೆಯನ್ನು ತಕ್ಷಣ ಅಂಗೀಕರಿಸಿ ಕನ್ನಡಿಗರಿಗೆ ಉಪಕಾರ ಮಾಡಿ

ಚಂದನ್ , ಬೆಂಗಳೂರುಚಂದನ್ , ಬೆಂಗಳೂರು20 Jun 2016 2:59 PM IST
share
ಅಂಬರೀಶ್ ರಾಜೀನಾಮೆಯನ್ನು ತಕ್ಷಣ ಅಂಗೀಕರಿಸಿ ಕನ್ನಡಿಗರಿಗೆ ಉಪಕಾರ ಮಾಡಿ

ರೆಬೆಲ್ ಸ್ಟಾರ್ ಅಂಬರೀಶ್ ಕೊನೆಗೂ ರೆಬೆಲ್ ಆಗುವ ಮೂಲಕವೇ ರಾಜ್ಯದ ಜನತೆಗೆ ಬಹುದೊಡ್ಡ ಉಪಕಾರ ಮಾಡಿದ್ದಾರೆ. ಸಂಸದನಾಗಿ, ಕೇಂದ್ರ ಸಚಿವನಾಗಿ ( ಹೌದು, ಅವರು ಕೇಂದ್ರ ಸಚಿವರೂ ಆಗಿದ್ದರು) , ಶಾಸಕನಾಗಿ , ವಸತಿ ಸಚಿವನಾಗಿ ಅಂಬರೀಶ್ ಈ ರಾಜ್ಯಕ್ಕೆ ನೀಡಿರುವ ಮಹತ್ವದ ಕೊಡುಗೆ ಎಂದರೆ ಸೋಮವಾರ ಶಾಸಕ ಸ್ಥಾನಕ್ಕೆ ನೀಡಿದ ರಾಜೀನಾಮೆ.

ಇಂತಹ ಸಚಿವರೂ ಇರುತ್ತಾರಾ... ಹೇಗಪ್ಪಾ ಇವರಿಂದ ಕಳಚಿಕೊಳ್ಳೋದು ಎಂದು ಜನರು ಕಳೆದ ಮೂರು ವರ್ಷಗಳಿಂದ ಅನುಭವಿಸುತ್ತಿದ್ದ ಸಂಕಟವನ್ನು ಕೊನೆಗೂ ಅವರು ಎಂದಿನಂತೆ ವಿಶಾಲ ಮನಸ್ಸು ಮಾಡಿ ಅರ್ಥ ಮಾಡಿಕೊಂಡು ಸ್ಪಂದಿಸಿದ್ದಾರೆ ( ಜನಪ್ರತಿನಿಧಿಯಾಗಿ ಅವರು ಜನರ ಸಮಸ್ಯೆಗೆ ಸ್ಪಂದಿಸಿದ್ದು ಬಹುಶ: ಇದೇ ಮೊದಲು !) . ಇದಕ್ಕಾಗಿ ಅವರನ್ನು ಇಡೀ ಕನ್ನಡ ಕುಲಕೋಟಿ ಅಭಿನಂದಿಸಬೇಕು. ಎಲ್ಲೆಡೆ ನಿಂತು ಅವರ ಭೊಪರಾಕ್ ಹೇಳಬೇಕು. ಹಾಗು ಆದಷ್ಟು ಬೇಗ ಅವರ ರಾಜೀನಾಮೆ ಸ್ವೀಕೃತವಾಗಿ ಅವರು ಮಾಜಿಯಾಗಿ ಮನೆ ಸೇರಲಿ ಎಂದು ಎಲ್ಲ ದೇವರ ಬಳಿ ಜಾತಿ ಮತ ಭೇದ ಮರೆತು ಪ್ರಾರ್ಥಿಸಬೇಕು. 

ನಟನಾಗಿ, ಕಲಾವಿದನಾಗಿ ಅಂಬರೀಶ್ ಎಷ್ಟು ದೊಡ್ಡ ಪ್ರತಿಭೆ ಎಂಬ ಬಗ್ಗೆ ಇಲ್ಲಿ ಚರ್ಚೆಗೆ ಹೋಗುತ್ತಿಲ್ಲ. ಅದಿಲ್ಲಿ ಅಗತ್ಯವೂ ಇಲ್ಲ. ಅವರ ಸಿನಿಮಾ, ಅವರ ಲಕ್ಷಾಂತರ ಅಭಿಮಾನಿಗಳು ಯಾವುವೂ ಇಲ್ಲಿ ಚರ್ಚೆಯ ವಿಷಯವೇ ಅಲ್ಲ. ಇಲ್ಲಿ ನಾವು ತಿಳಿದುಕೊಳ್ಳ ಬೇಕಾದ್ದು ಒಬ್ಬ ಜನಪ್ರತಿನಿಧಿಯಾಗಿ ಅಂಬರೀಶ್ ಎಷ್ಟು ದೊಡ್ಡ ಫೆಲ್ಯೂರ್ ಎಂಬುದನ್ನು. ಶಾಸಕ, ಸಚಿವನೊಬ್ಬ ಹೇಗಿರಬಾರದು ಎಂಬುದಕ್ಕೆ ಅಂಬರೀಶ್ ಅತ್ಯುತ್ತಮ ನಿದರ್ಶನವಾಗಿದ್ದರು.

ಸಚಿವರಾಗಿ ಸಿಂಗಾಪುರದಲ್ಲಿ ರಾಜ್ಯದ ಖರ್ಚಲ್ಲಿ ಚಿಕಿತ್ಸೆ ಮಾಡಿಸಿಕೊಂಡಿದ್ದನ್ನು ಗಣನೆಗೆ ತೆಗೆದುಕೊಳ್ಳದಿದ್ದರೂ ಅಂಬರೀಶ್  ಈ ರಾಜ್ಯದ ಪಾಲಿಗೆ, ಸರ್ಕಾರದ ಪಾಲಿಗೆ ಹೊರೆಯಾಗಿದ್ದರು. ಅವರೊಬ್ಬ ಬಿಗ್ ಲಯಾಬಿಲಿಟಿ ! ಜನರ ಕೈಗೆ ಸಿಗದ , ತನ್ನ ಖಾತೆಯನ್ನು ಸಮರ್ಪಕವಾಗಿ ನಿಭಾಯಿಸದ, ಕನಿಷ್ಟ ಅದಕ್ಕೆ ತೋರಿಕೆಯ ಗಮನವನ್ನೂ ಕೊಡದ ಸಚಿವನೊಬ್ಬ ಯಾಕಾದರೂ ಜನರ ತೆರಿಗೆಯ ದುಡ್ಡು ಖರ್ಚು ಮಾಡಿ ಅಧಿಕಾರದಲ್ಲಿರಬೇಕು ?

ಅಂಬರೀಶ್ ಅವರನ್ನು ಈಗಲಾದರೂ ಸಂಪುಟದಿಂದ ಕೈ ಬಿಟ್ಟಿದ್ದಕ್ಕೆ ಕಾಂಗ್ರೆಸ್ ವರಿಷ್ಠರಿಗೆ , ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಈ ರಾಜ್ಯದ ಜನತೆ ಕೃತಜ್ಞರು. ಯಾವುದೇ ಕಾರಣಕ್ಕೂ ಅವರ ಮನವೊಲಿಸಿ ರಾಜೀನಾಮೆ ಹಿಂದೆ ಪಡೆಯುವಂತೆ ಮಾಡಲೇಬಾರದು. ಅವರು ಮನೆಗೆ ಹೋಗಬೇಕು. 

share
ಚಂದನ್ , ಬೆಂಗಳೂರು
ಚಂದನ್ , ಬೆಂಗಳೂರು
Next Story
X