Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ವಿಶ್ವಸಂಸ್ಥೆಯ ಮೇಲೆ ಪರ್ವತಾಸನ!

ವಿಶ್ವಸಂಸ್ಥೆಯ ಮೇಲೆ ಪರ್ವತಾಸನ!

ವಾರ್ತಾಭಾರತಿವಾರ್ತಾಭಾರತಿ20 Jun 2016 6:53 PM IST
share
ವಿಶ್ವಸಂಸ್ಥೆಯ ಮೇಲೆ ಪರ್ವತಾಸನ!

ವಿಶ್ವಸಂಸ್ಥೆ, ಜೂ.20: ವಿಶ್ವಸಂಸ್ಥೆಯು ನಾಳೆ ನಡೆಯಲಿರುವ ಅಂತಾರಾಷ್ಟ್ರೀಯ ಯೋಗ ದಿನಕ್ಕೆ ಸಿದ್ಧವಾಗಿರುವಂತೆಯೇ, ಜಾಗತಿಕ ಸಂಸ್ಥೆಯ ಮುಖ್ಯಾಲಯದ ಮೇಲೆ ಯೋಗಾಸನವೊಂದರ ಚಿತ್ರವನ್ನು ಬಿಂಬಿಸಲಾಗಿದೆ.
ವಿಶ್ವಸಂಸ್ಥೆಯ ಭಾರತೀಯ ರಾಯಭಾರಿ ಸೈಯದ್ ಅಕ್ಬರುದ್ದೀನ್ ಸಹ ಈ ಕುರಿತು ಟ್ವೀಟಿಸಿದ್ದಾರೆ.
ವಿಶ್ವಸಂಸ್ಥೆಯಲ್ಲಿ ಯೋಗವು ಪ್ರಜ್ವಲಿಸಲು ಸಿದ್ಧವಾಗಿದೆ. 2016ರ ಅಂತಾರಾಷ್ಟ್ರೀಯ ಯೋಗ ದಿನಕ್ಕಾಗಿ ಚಾರಿತ್ರಿಕ ವಿಶ್ವಸಂಸ್ಥೆಯ ಮುಖ್ಯಾಲಯದ ಮೇಲೆ ಯೋಗ ಭಂಗಿಯನ್ನು ಬಿಂಬಿಸಲಾಗಿದೆಯೆಂದು ಅವರು ಹೇಳಿದ್ದಾರೆ.
ವಿಶ್ವಸಂಸ್ಥೆಯ ಮೇಲೆ ಹಾಕಲಾಗಿರುವ ಚಿತ್ರವು ಮಹಿಳೆಯೊಬ್ಬಳು ‘ಪರ್ವತಾಸನ’ ಮಾಡುತ್ತಿರುವುದನ್ನು ತೋರಿಸುತ್ತಿದೆ. ಅದು ತಲೆ ಕೆಳಗಾದ ಇಂಗ್ಲಿಷ್‌ನ ‘ವಿ’ ಅಕ್ಷರದಂತಿದೆ. ಅದರ ಅಡಿಯಲ್ಲಿ ‘ಅಂತಾರಾಷ್ಟ್ರೀಯ ಯೋಗ ದಿನ’ ಎಂದು ಬರೆಯಲಾಗಿದೆ.
ವಿಶ್ವಸಂಸ್ಥೆಯ ಭಾರತದ ಕಾಯಂ ನಿಯೋಗವು ವಿಶ್ವಸಂಸ್ಥೆಯ ಸಾರ್ವಜನಿಕ ಮಾಹಿತಿ ಇಲಾಖೆಯ ಸಹಯೋಗದಲ್ಲಿ ವಿಶ್ವಸಂಸ್ಥೆಯ ಮುಖ್ಯಾಲಯದಲ್ಲಿ ಜೂ.21ರಂದು ಅಂತಾರಾಷ್ಟ್ರೀಯ ಯೋಗ ದಿನವನ್ನು ಆಚರಿಸುತ್ತದೆ. ಕಾರ್ಯಕ್ರಮದಲ್ಲಿ ಸಾಮಾನ್ಯ ಸಭೆಯ ಅಧ್ಯಕ್ಷ ಮೋರ್ಗನ್ಸ್ ಲಿಕೆಟೋಫ್, ಸಂಪರ್ಕ ಹಾಗೂ ಸಾರ್ವಜನಿಕ ಮಾಹಿತಿಯ ಅಧೀನ ಮಹಾಕಾರ್ಯದರ್ಶಿ ಕ್ರಿಸ್ಟಿನಾ ಗಲ್ಲಾಚ್ ಹಾಗೂ ಈಶ ಫೌಂಡೇಶನ್‌ನ ಸ್ಥಾಪಕ ಹಾಗೂ ಆಧ್ಯಾತ್ಮಿಕ ನಾಯಕ ಜಗ್ಗಿ ಸದ್ಗುರು ಭಾಗವಹಿಸಲಿದ್ದಾರೆ. ಜಗ್ಗಿ ಸದ್ಗುರು ಸರಳ ಯೋಗಾಭ್ಯಾಸದ ನೇತೃತ್ವ ವಹಿಸಲಿದ್ದಾರೆ.
ಕಾರ್ಯಕ್ರಮದಲ್ಲಿ ಯೋಗದ ಕುರಿತು ಮಂತ್ರ ಗಾಯನ ನಡೆಯಲಿದೆ. ಖ್ಯಾತ ಬ್ರಿಟಿಶ್ ಗಾಯಕಿ ತಾನ್ಯಾ ವೆಲ್ಸ್ ಸಂಸ್ಕೃತ ಶ್ಲೋಕಗಳನ್ನು ಪಠಿಸಲಿದ್ದಾರೆ.
ಈ ವರ್ಷದ ಯೋಗ ಸಮಾರಂಭವು, ಯೋಗವೊಂದು ಪರಿಪೂರ್ಣ ಕ್ರಮವೇ ಹೊರತು ಕೇವಲ ದೈಹಿಕ ಚಟುವಟಿಕೆಯಲ್ಲ ಹಾಗೂ ಅದು ತಾಳಿಕೆಯ ಅಭಿವೃದ್ಧಿ ಗುರಿಯನ್ನು ಸಾಧಿಸಲು ಹೇಗೆ ಸಹಾಯ ಮಾಡಬಲ್ಲುದು ಎಂಬ ಕುರಿತು ಹೆಚ್ಚುತ್ತಿರುವ ಜಾಗೃತಿಯ ಬಗ್ಗೆ ವಿಶೇಷ ಒತ್ತು ನೀಡಲಿದೆಯೆಂದು ಅಕ್ಬರುದ್ದೀನ್ ಈ ವಾರಾರಂಭದಲ್ಲಿ ತಿಳಿಸಿದ್ದರು.
ಯೋಗ ದಿನಕ್ಕಾಗಿ ವಿಭಿನ್ನ ದೇಶಗಳ ಭಾರೀ ಸಂಖ್ಯೆಯ ಜನರ ಆಗಮನವನ್ನು ನಿರೀಕ್ಷಿಸಲಾಗಿದೆ. ವಿಶ್ವಸಂಸ್ಥೆಯ ಕಾರ್ಯಾಲಯ ವೃತ್ತದಲ್ಲಿ ನಡೆಯಲಿರುವ ಕಾರ್ಯಕ್ರಮಕ್ಕೆ ಇದುವರೆಗೆ 100 ದೇಶಗಳ ಜನರು ನೋಂದಣಿ ಮಾಡಿಸಿದ್ದಾರೆಂದು ಅವರು ತಿಳಿಸಿದ್ದಾರೆ.
ವಿವಿಧ ದೇಶಗಳ ರಾಯಭಾರಿಗಳು ಹಾಗೂ ರಾಜತಂತ್ರಜ್ಞರು, ಯೋಗವು ತಮ್ಮ ಜೀವನ ಕ್ರಮಗಳ ಮೇಲೆ ಹೇಗೆ ಪ್ರಭಾವ ಬೀರಿದೆಯೆಂಬ ಕುರಿತು ಸ್ವ-ಅನುಭವವನ್ನು ಹಂಚಿಕೊಳ್ಳಲಿದ್ದಾರೆ.
ಯೋಗ ದಿನಕ್ಕೆ ಪೂರ್ವಭಾವಿಯಾಗಿ, ಭಾರತೀಯ ನಿಯೋಗವು ‘ಯೋಗಗುರುಗಳೊಂದಿಗೆ ಸಂಭಾಷಣೆ’ಯನ್ನು ಆಯೋಜಿಸಲಾಗಿದೆ. ಅದು ಯೋಗದ ವಿಶೇಷತೆ ಹಾಗೂ ತಾಳಿಕೆಯ ಅಭಿವೃದ್ಧಿ ಗುರಿಯನ್ನು ಸಾಧಿಸುವಲ್ಲಿ ಅದರ ಪಾತ್ರದ ಕುರಿತು ನಮ್ಮ ಒಟ್ಟು ತಿಳುವಳಿಕೆಯನ್ನು ಶ್ರೀಮಂತಗೊಳಿಸುವ ಉದ್ದೇಶ ಇರಿಸಿಕೊಂಡಿದೆ. ಜಗ್ಗಿ ಸದ್ಗುರು ಈ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X