Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಮಾಜಿ ಪ್ರಧಾನಿ ಮನಮೋಹನ್ ರನ್ನು ಸಾ......

ಮಾಜಿ ಪ್ರಧಾನಿ ಮನಮೋಹನ್ ರನ್ನು ಸಾ... ಎಂದು ಜರೆದ ರಾಜಸ್ಥಾನ ಗೃಹ ಸಚಿವ

ವಾರ್ತಾಭಾರತಿವಾರ್ತಾಭಾರತಿ20 Jun 2016 6:53 PM IST
share
ಮಾಜಿ ಪ್ರಧಾನಿ ಮನಮೋಹನ್ ರನ್ನು ಸಾ... ಎಂದು ಜರೆದ ರಾಜಸ್ಥಾನ ಗೃಹ ಸಚಿವ

ಜೈಪುರ, ಜೂ.20: ರವಿವಾರ ನಡೆದ ಸಭೆಯೊಂದರಲ್ಲಿ ಮಾಜಿ ಪ್ರಧಾನಿ ಮನಮೋಹನ ಸಿಂಗ್‌ರ ವಿರುದ್ಧ ಕೆಟ್ಟ ಭಾಷೆಯನ್ನು ಬಳಸಿದುದಕ್ಕಾಗಿ ರಾಜಸ್ಥಾನದ ಗೃಹ ಸಚಿವ ಗುಲಾಬ್‌ಚಂದ್ ಕಟಾರಿಯಾ ಕಾಂಗ್ರೆಸ್‌ನ ದಾಳಿಗೊಳಗಾಗಿದ್ದಾರೆ.

ಮಾತನಾಡುವ ಭರದಲ್ಲಿ ಹದ ತಪ್ಪಿದ ಮಾತು ಬಾಯಿಂದ ಜಾರಿತೆಂದು ಅವರು ಮೊದಲು ವಿಷಾದಿಸಿದ್ದರು.

ತಾನು ಉಪಯೋಗಿಸಿದ್ದ ಶಬ್ದಕ್ಕೆ ಹೆಂಡತಿಯ ಸೋದರನೆಂದು ಅರ್ಥವೇ ಹೊರತು ಅದು ಬೈಗುಳವಲ್ಲವೆಂದು ಕಟಾರಿಯಾ ಇಂದು ಸ್ಪಷ್ಟೀಕರಣ ನೀಡಿದ್ದಾರೆ. ಅವರು ಉಪಯೋಗಿಸಿದ್ದ ಶಬ್ದ ರಾಜ್ಯದ ಹಲವು ಭಾಗಗಳಲ್ಲಿ ಕೆಟ್ಟ ಬೈಗುಳವಾಗಿದೆ.

ಚುರುವಿನಲ್ಲಿ ಬಿಜೆಪಿ ಕಾರ್ಯಕರ್ತರ ಸಭೆಯೊಂದರಲ್ಲಿ ಪ್ರಧಾನಿ ನರೇಂದ್ರ ಮೋದಿಯವರನ್ನು ಹೊಗಳುವ ವೇಳೆ ಅವರು, ಪ್ರಧಾನ ಮಂತ್ರಿಯಾಗಿ ಈ ಹಿಂದೆ ಮನಮೋಹನ ಸಿಂಗರು ಅಮೆರಿಕಕ್ಕೆ ಹೋಗುತ್ತಿದ್ದಾಗ ಆ...... ಯನ್ನು ಚಿಲ್ಲರೆ ಪಲ್ಲರೆ ಸಚಿವರು ಎದುರುಗೊಳ್ಳುತ್ತಿದ್ದರು. ಆದರೆ ಈಗ, ಭಾರತದ ಪ್ರಧಾನಿ ಹೋಗುವಾಗ ಸ್ವತಃ ಒಬಾಮರೇ ಅವರನ್ನು ಸ್ವಾಗತಿಸಲು ಹೋಗುತ್ತಾರೆ ಎಂದಿದ್ದರು.

ಸಚಿವರ ಮಾತಿನಲ್ಲಿ ಆಕ್ಷೇಪಾರ್ಹ ಶಬ್ದಗಳಿದ್ದವೆಂದು ವರದಿಯಾಗಿದೆ. ಕನಿಷ್ಠ ಇತರ 6 ಸಚಿವರು ಹಾಗೂ ಸಾವಿರಾರು ಬಿಜೆಪಿ ಕಾರ್ಯಕರ್ತರು ಸಭೆಯಲ್ಲಿದ್ದರು.

ರಾಜಸ್ಥಾನದ ಗೃಹ ಸಚಿವ ಗುಲಾಬ್‌ಚಂದ್ ಕಟಾರಿಯಾರನ್ನು ಉಚ್ಚಾಟಿಸುವಂತೆ ಕಾಂಗ್ರೆಸ್ ಆಗ್ರಹಿಸಿದೆ.

ಬಳಿಕ ತನ್ನ ಶಬ್ದಗಳಿಗಾಗಿ ವಿಷಾದ ಸೂಚಿಸಿರುವ ಕಟಾರಿಯಾ, ಮಾಜಿ ಪ್ರಧಾನಿಯ ವಿರುದ್ಧದ ತನ್ನ ಟೀಕೆಗಳು ದುರುದ್ದೇಶದಿಂದ ಮಾಡಿದವುಗಳಲ್ಲ. ಯಾರಾದರೂ ಅದನ್ನು ವಿರೋಧಿಸುತ್ತಿದ್ದರೆ, ತಾನು ವಿಷಾದಿಸುತ್ತೇನೆ ಎಂದರು ಟ್ವೀಟಿಸಿದ್ದರು.

 ಕಾಂಗ್ರೆಸ್ ನಾಯಕ ಪ್ರತಾಪ್ ಸಿಂಗ್ ಕಟಾರಿಯಾ ವಿರುದ್ಧ ಕಿಡಿಗಾರಿದ್ದು, ಅವರನ್ನು ‘ಅಗೌರವಯುತ ಶಬ್ದ ಬಳಸಿದುದಕ್ಕಾಗಿ’ ವಜಾಗೊಳಿಸಬೇಕು. ಮುಖ್ಯಮಂತ್ರಿ ವಸುಂಧರಾ ರಾಜೆ ಈ ಕುರಿತು ಸ್ಪಷ್ಟೀಕರಣ ನೀಡಬೇಕು. ಒಂದೋ ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು. ಇಲ್ಲವೇ ದೇಶವನ್ನು ಅಪಮಾನಗೊಳಿಸಿದುದಕ್ಕಾಗಿ ಅವರನ್ನು ಉಚ್ಚಾಟಿಸಬೇಕು ಎಂದಿದ್ದಾರೆ.

ಎರಡನೆಯ ಬಾರಿಗೆ ರಾಜಸ್ಥಾನದ ಗೃಹ ಸಚಿವರಾಗಿರುವ ಕಟಾರಿಯಾ ಈ ಹಿಂದೆಯೂ ನಾಲಿಗೆ ಜಾರುವ ಮೂಲಕ ವಿವಾದವನ್ನು ಮೈಮೇಲೆ ಎಳೆದುಕೊಂಡಿದ್ದರು.

WATCH: Rajasthan Home Minister Gulab Chand Kataria uses foul language for ex- PM Manmohan Singh @IndianExpress pic.twitter.com/zHLEjsFiX1

— Hamza Khan (@woahjourno) June 20, 2016
share
ವಾರ್ತಾಭಾರತಿ
ವಾರ್ತಾಭಾರತಿ
Next Story
X