Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ವೌಢ್ಯಾಚರಣೆ ನಿಲ್ಲಿಸಲು ಮುರುಘಾ ಶರಣರ...

ವೌಢ್ಯಾಚರಣೆ ನಿಲ್ಲಿಸಲು ಮುರುಘಾ ಶರಣರ ಪಾದಯಾತ್ರೆ

ಪಂಡರಹಳ್ಳಿಯಲ್ಲಿ ಮಳೆಗಾಗಿ ಮಗುವಿನ ಬೆತ್ತಲೆ ಮೆರವಣಿಗೆ ಹಿನ್ನೆಲೆ

ವಾರ್ತಾಭಾರತಿವಾರ್ತಾಭಾರತಿ20 Jun 2016 11:06 PM IST
share
ವೌಢ್ಯಾಚರಣೆ ನಿಲ್ಲಿಸಲು ಮುರುಘಾ ಶರಣರ ಪಾದಯಾತ್ರೆ

ಚಿತ್ರದುರ್ಗ ಜೂ. 20: ಮಾನವನ ಅಜ್ಞಾನ ಮತ್ತು ಅಲಕ್ಷ್ಯತನ ದಿಂದ ಅಹಿತಕರ ಘಟನೆಗಳು ನಡೆಯುತ್ತವೆ. ಅವುಗಳನ್ನು ಸರಿದಾರಿಗೆ ತರಲು ಮಾಧ್ಯಮಗಳು ನಿರಂತರವಾಗಿ ಶ್ರಮಿಸು ತ್ತಿವೆ ಎಂದು ಮುರುಘಾ ಮಠದ ಡಾ.ಶಿವಮೂರ್ತಿ ಮುರುಘಾ ಶರಣರು ತಿಳಿಸಿದ್ದಾರೆ.
ಸೋಮವಾರ ತಾಲೂಕಿನ ಪಂಡರಹಳ್ಳಿಯಲ್ಲಿ ಇತ್ತೀಚೆಗೆ ಗ್ರಾಮಸ್ಥರು ಮಳೆಗಾಗಿ ಮಗುವನ್ನು ಬೆತ್ತಲೆ ಮೆರವಣಿಗೆ ಮಾಡಿ ಮೌಢ್ಯಾಚರಣೆ ಜೀವಂತವಾಗಿರಿಸಿದ್ದ ಗ್ರಾಮಕ್ಕೆ ಭೇಟಿ ನೀಡಿ ಜನಜಾಗೃತಿ ಪಾದಯಾತ್ರೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಜಾತ್ರೆ, ಉತ್ಸವ ಸಂದರ್ಭಗಳಲ್ಲಿ ಅಮಾನವೀಯ ಆಚರಣೆಗಳನ್ನು ನಡೆಸಬಾರದು ಎಂದರು.
ಮಳೆ ಬಾರದೆ ಇರುವುದು ಈ ಗ್ರಾಮಕ್ಕೆ ಮಾತ್ರವಲ್ಲ, ರಾಜ್ಯದ ಅನೇಕ ಕಡೆಗಳಲ್ಲಿ ಮಳೆಯಾಗಿಲ್ಲ. ಕೆಲವು ಕಡೆ ಕುಡಿ ಯಲು ನೀರು ಸಿಗುತ್ತಿಲ್ಲ. ಇದಕ್ಕೆ ಕಾರಣ ಪ್ರಾಕೃತಿಕ ವೈಪರೀತ್ಯ ಗಳು. ಮಳೆ ಬರಿಸುವುದು ಯಾರ ಕೈಯಲ್ಲೂ ಇಲ್ಲ. ಅತಿವೃಷ್ಟಿ-ಅನಾವೃಷ್ಟಿ ಜಗದ ನಿಯಮ ಎಂದು ಹೇಳಿದರು.
ನಿಸರ್ಗಕ್ಕೆ ತನ್ನದೆ ಆದ ನಿಯಮವಿದೆ. ಆದರೆ, ನಾವು ನಿಸರ್ಗದ ಮೇಲೆ ದಾಳಿ ಮಾಡುತ್ತಿದ್ದೇವೆ. ಮನುಷ್ಯನ ಆಸೆಗೆ ಗುಡ್ಡಬೆಟ್ಟಗಳು ಬರಿದಾಗುತ್ತಿವೆ. ಗಿಡ-ಮರಗಳನ್ನು ದಿನಂಪ್ರತಿ ಕಡಿಯುತ್ತಿದ್ದಾರೆ ಇದರಿಂದ ಭೂಮಿಯ ತಾಪ ಹೆಚ್ಚಾಗುತ್ತಿದೆ. ಇದನ್ನು ತಡೆಯುವ ನಿಟ್ಟಿನಲ್ಲಿ ಗುಡ್ಡಬೆಟ್ಟಗಳನ್ನು ಸಂರಕ್ಷಿಸುವುದರ ಜೊತೆಗೆ ಗಿಡಮರಗಳನ್ನು ಬೆಳೆಸಬೇಕು. ಇಂತಹ ಮೌಢ್ಯ ಆಚರಣೆಗಳಿಂದ ಯಾವುದೇ ಪ್ರಯೋ ಜನವಾಗದು. ಜನರು ವೈಚಾರಿಕವಾಗಿ ಯೋಚಿಸಬೇಕು ಎಂದರು.
ವಾಲ್ಮೀಕಿ ಗುರುಪೀಠದ ಪ್ರಸನ್ನ ವಾಲ್ಮೀಕಿ ಸ್ವಾಮಿ ಮಾತನಾಡಿ, ತಾಪಮಾನ ಹೆಚ್ಚಾಗುವುದರಿಂದ ಮಳೆ ಪ್ರಮಾಣ ಕಡಿಮೆಯಾಗುತ್ತದೆ. ಅದರ ಸಮತೋಲನವನ್ನು ಕಾಪಾಡಲು ಗಿಡ-ಮರಗಳನ್ನು ಬೆಳೆಸಬೇಕು. ಪ್ರಕೃತಿ ಮೇಲಿನ ದೌರ್ಜನ್ಯವನ್ನು ತಡೆಗಟ್ಟಬೇಕು. ಇಲ್ಲದೆ ಹೋದರೆ ಅಂತರ್ಜಲ ಮಟ್ಟ ಇನ್ನೂ ಕುಸಿಯುತ್ತದೆ ಎಂದರು.
ಇದೇ ವೇಳೆ ಮುರುಘಾ ಶರಣರು ಗ್ರಾಮದ ಮುಖಂಡರ ಸಮ್ಮುಖದಲ್ಲಿ ಊರಿನ ವಿದ್ಯಾವಂತರು ಹಾಗೂ ಯುವ ಕರಿಂದ ಮೌಢ್ಯಾಚರಣೆ ಮಾಡುವುದಿಲ್ಲವೆಂದು ಪ್ರತಿಜ್ಞೆ ಮಾಡಿಸಿದರು. ವಿವಿಧ ಘೋಷಣೆಗಳ ಮೂಲಕ ಪಾದ ಯಾತ್ರೆ ನಡೆಸಲಾಯಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X