Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ರಮಝಾನ್ ಸಹರಿ ತಪ್ಪಿಸದಂತೆ...

ರಮಝಾನ್ ಸಹರಿ ತಪ್ಪಿಸದಂತೆ ನೆರವಾಗುತ್ತಿದೆ ಹಿಂದೂ ಕುಟುಂಬ

ಉತ್ತರಪ್ರದೇಶದ ಆಝಂಗಢದಲ್ಲಿ ಕೋಮುಸೌಹಾರ್ದತೆ

ವಾರ್ತಾಭಾರತಿವಾರ್ತಾಭಾರತಿ21 Jun 2016 11:24 AM IST
share
ರಮಝಾನ್ ಸಹರಿ ತಪ್ಪಿಸದಂತೆ ನೆರವಾಗುತ್ತಿದೆ ಹಿಂದೂ ಕುಟುಂಬ

ಆಝಂಗಢ(ಉತ್ತರಪ್ರದೇಶ), ಜೂ.21: ಬನಾರಸಿ ಸೀರೆಗೆ ಖ್ಯಾತಿ ಪಡೆದಿರುವ ಉತ್ತರ ಪ್ರದೇಶದ ಮುಬಾರಕ್ ಪುರವೆಂಬ ಗ್ರಾಮದಲ್ಲಿ ರಾತ್ರಿ ಮೂರು ಗಂಟೆಗೆ ಎಲ್ಲರೂ ನಿದ್ದೆಗೆ ಜಾರಿರುತ್ತಾರೆ. ಆದರೆ, ಹಿಂದೂ ಕುಟುಂಬಕ್ಕೆ ಸೇರಿದ ಓರ್ವ ವ್ಯಕ್ತಿ ತನ್ನ 12 ವರ್ಷದ ಪುತ್ರನೊಂದಿಗೆ ಸದಾ ಎಚ್ಚರದಲ್ಲೇ ಇರುತ್ತಾರೆ.

ಈಗ ಮುಸ್ಲಿಮರು ರಮಝಾನ್ ತಿಂಗಳ ಉಪವಾಸ ಆಚರಿಸುತ್ತಿದ್ದು, ಹಳ್ಳಿಯ ಎಲ್ಲ ಮುಸ್ಲಿಮ್ ಕುಟುಂಬದವರನ್ನು ಬೇಗನೆ ಎಬ್ಬಿಸಿ ಸಹರಿಗೆ ನೆರವಾಗುವುದು ಈ ಇಬ್ಬರ ಪ್ರತಿ ದಿನದ ಕೆಲಸವಾಗಿದೆ. ಗುಲಾಬ್ ಯಾದವ್(45) ಹಾಗೂ ಅವರ ಮಗ ಅಭಿಷೇಕ್ ಮುಸ್ಲಿಮ್ ಕುಟುಂಬದವರ ಮನೆಯ ಬಾಗಿಲು ಬಡಿದು ಅವರನ್ನು ಎಬ್ಬಿಸುತ್ತಾರೆ. ಈ ಸಂಪ್ರದಾಯ ಇಂದು-ನಿನ್ನೆಯದಲ್ಲ. ಕಳೆದ 45 ವರ್ಷಗಳಿಂದ ಇದು ನಡೆದುಕೊಂಡು ಬಂದಿದೆ. ಯಾದವ್‌ರ ತಂದೆ ಚಿರ್ಕಿಟ್ ಯಾದವ್ 1975ರಲ್ಲಿ ಈ ಸಂಪ್ರದಾಯವನ್ನು ಆರಂಭಿಸಿದ್ದು, ಆಗ ಗುಲಾಬ್ ಯಾದವ್‌ಗೆ ನಾಲ್ಕು ವರ್ಷ ಪ್ರಾಯವಾಗಿತ್ತು.

ದಿನಗೂಲಿ ಕಾರ್ಮಿಕನಾಗಿರುವ ಗುಲಾಬ್ ಯಾದವ್ ಹೆಚ್ಚಿನ ಸಮಯವನ್ನು ದಿಲ್ಲಿಯಲ್ಲೆ ಕಳೆಯುತ್ತಾರೆ. ರಮಝಾನ್ ವೇಳೆಗೆ ಉತ್ತರ ಪ್ರದೇಶದ ಅಝಂಗಢ ಜಿಲ್ಲೆಯಲ್ಲಿರುವ ತನ್ನ ಹಳ್ಳಿಗೆ ವಾಪಸಾಗುತ್ತಾರೆ.

‘‘ಇದು ನಿಜವಾಗಿಯೂ ಪ್ರಶಂಸನೀಯ ಕಾರ್ಯವಾಗಿದೆ. ರಮಝಾನ್ ತಿಂಗಳಲ್ಲಿ ಯಾದವ್ ಅವರು ಇಡೀ ಹಳ್ಳಿಯನ್ನು ಸುತ್ತುತ್ತಾರೆ. ಅವರಿಗೆ ಹಳ್ಳಿ ಸುತ್ತಲು 90 ನಿಮಿಷ ಬೇಕಾಗುತ್ತದೆ. ಎಲ್ಲರೂ ಮುಂಜಾನೆಯ ಶಹರಿ ತಪ್ಪಿಸಿಕೊಳ್ಳಬಾರದೆಂಬ ಉದ್ದೇಶದಿಂದ ಎರಡೆರಡು ಬಾರಿ ಊರನ್ನು ಸುತ್ತು ಬರುತ್ತಾರೆ’’ ಎಂದು ಯಾದವ್ ನೆರೆಮನೆಯಾತ ಶಫೀಕ್ ಹೇಳುತ್ತಾರೆ.

 ಮುಂದಿನ ವರ್ಷ ಉತ್ತರಪ್ರದೇಶದಲ್ಲಿ ರಾಜ್ಯ ಚುನಾವಣೆಯು ನಡೆಯುತ್ತಿರುವ ಕಾರಣ ಬಿಜೆಪಿಯು ಹಿಂದೂ-ಮುಸ್ಲಿಮರನ್ನು ಎತ್ತಿ ಕಟ್ಟಲು ಆರಂಭಿಸಿದೆ. ಮುಸ್ಲಿಮರೇ ಹೆಚ್ಚಿನ ಸಂಖ್ಯೆಯಲ್ಲಿರುವ ಕೈರಾನ ಪ್ರದೇಶವನ್ನು ಹಿಂದೂ ಕುಟುಂಬಗಳು ತೊರೆಯುತ್ತಿವೆ ಎನ್ನುವುದು ಬಿಜೆಪಿಯ ವಾದವಾಗಿದೆ. ಇದೀಗ ಆಝಂಗಢದ ಯಾದವ್ ಎಲ್ಲರಿಗೂ ಮಾದರಿಯಾಗಿ ಕಾಣಿಸಿಕೊಳ್ಳುತ್ತಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X