Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಚೀನಾದಲ್ಲಿ ಮೌತ್ ಫ್ರೆಶ್ನರ್ ಆಗಿ ದ.ಕ....

ಚೀನಾದಲ್ಲಿ ಮೌತ್ ಫ್ರೆಶ್ನರ್ ಆಗಿ ದ.ಕ. ಜಿಲ್ಲೆಯ ಅಡಿಕೆ!

ಆಗಸ್ಟ್‌ನಲ್ಲಿ ಪ್ರಾಯೋಗಿಕ 2 ಮೆಟ್ರಿಕ್ ಟನ್ ಅಡಿಕೆ ರಫ್ತಿಗೆ ಕ್ಯಾಂಪ್ಕೋ ಸಿದ್ಧತೆ

ವಾರ್ತಾಭಾರತಿವಾರ್ತಾಭಾರತಿ21 Jun 2016 9:07 PM IST
share
ಚೀನಾದಲ್ಲಿ ಮೌತ್ ಫ್ರೆಶ್ನರ್ ಆಗಿ ದ.ಕ. ಜಿಲ್ಲೆಯ ಅಡಿಕೆ!

ಮಂಗಳೂರು, ಜೂ.21: ಮೌತ್ ಫ್ರೆಶ್ನರ್ ಆಗಿ ದ.ಕ. ಜಿಲ್ಲೆಯ ಅಡಿಕೆಯನ್ನು ಬಳಕೆ ಮಾಡುವ ಕುರಿತಂತೆ ಕಳೆದ ಎರಡು ವರ್ಷಗಳಿಂದ ಕ್ಯಾಂಪ್ಕೊ ಸಂಸ್ಥೆ ಹಾಗೂ ಚೀನಾ ಮಧ್ಯೆ ನಡೆಯುತ್ತಿರುವ ಮಾತುಕತೆ ಹಾಗೂ ಭೇಟಿಯ ಫಲವಾಗಿ ಆಗಸ್ಟ್ ವೇಳೆಗೆ ಎರಡು ಮೆಟ್ರಿಕ್ ಟನ್ ಅಡಿಕೆ ರಫ್ತು ಮಾಡಲು ತೀರ್ಮಾನಿಸಲಾಗಿದೆ ಎಂದು ಕ್ಯಾಂಪ್ಕೊ ಅಧ್ಯಕ್ಷ ಎಸ್.ಆರ್. ಸತೀಶ್ಚಂದ್ರ ತಿಳಿಸಿದರು.

ನಗರದ ಕ್ಯಾಂಪ್ಕೋ ಕಚೇರಿಯಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ತಾವು ಚೀನಾಕ್ಕೆ ತೆರಳಿ ಅಲ್ಲಿಯ ಕಿಂಗ್ ಆಫ್ ಟೇಸ್ಟ್ ಕಂಪೆನಿಯ ಅಧ್ಯಕ್ಷರು ಮತ್ತು ಆಡಳಿತ ಮಂಡಳಿ ಜೊತೆ ಕ್ಯಾಂಪ್ಕೊ ಸಂಸ್ಥೆ ಒಪ್ಪಂದ ಮಾಡಿದಂತೆ ಪ್ರಾಯೋಗಿಕವಾಗಿ ಅಡಿಕೆ ರಫ್ತು ಮಾಡಲಾಗುವುದು ಎಂದರು.

ರಾಜ್ಯ ಅಡಿಕೆ ಮಾರುಕಟ್ಟೆ ಸಹಕಾರ ಸಂಘಗಳ ಅಧ್ಯಕ್ಷ ಕೊಂಕೋಡಿ ಪದ್ಮನಾಭ ಮಾತನಾಡಿ, ಚೀನಾದ ಹೈನಾನ್ ಪ್ರಾಂತ್ಯದಲ್ಲಿ ವರ್ಷಕ್ಕೆ 1.22 ಲಕ್ಷ ಮೆಟ್ರಿಕ್ ಟನ್ ಅಡಿಕೆ ಬೆಳೆಸಲಾಗುತ್ತಿದೆ. ಅಲ್ಲಿ ಸುಮಾರು 20ರಷ್ಟು ಅಡಿಕೆಯ ಮೌತ್ ಫ್ರೆಶ್ನರ್ ತಯಾರಿಸುವ ಕಂಪೆನಿಗಳಿದ್ದು, ಅದಕ್ಕೆ ಬಹಳಷ್ಟು ಬೇಡಿಕೆ ಇದೆ ಎಂದರು.

ಚೀನಾ ದೇಶದಿಂದ ಮುಂದಿನ ದಿನಗಳಲ್ಲಿ ಭಾರತ ಅಡಿಕೆಗೆ ಭಾರಿ ಬೇಡಿಕೆ ಬರಬಹುದು. ನಾವು ರಫ್ತು ಮಾಡುವ ಅಡಿಕೆಯ ಗುಣಮಟ್ಟ ಸಂಸ್ಕರಣೆ ಮತ್ತು ಪರಿಷ್ಕರಣೆ ಬಗ್ಗೆ ಕಿಂಗ್ ಆಫ್ ಟೇಸ್ಟ್ ಕಂಪೆನಿಯ ತಜ್ಞರು ಜುಲೈನಲ್ಲಿ ಭಾರತಕ್ಕೆ ಬರಲಿದ್ದಾರೆ. ಚೀನಾದ ಬೇರೆ ಕಂಪೆನಿಗಳು ಕೂಡಾ ರ್ತು ಮಾಡಿಕೊಳ್ಳುವ ಆಸಕ್ತಿ ತೋರಿಸಿವೆ ಎಂದು ಅವರು ಹೇಳಿದರು.

ಕೇಂದ್ರ ಮತ್ತು ರಾಜ್ಯ ಸರಕಾರಗಳು ರಾಜ್ಯದ ಆಯ್ದ ಅಡಿಕೆೆ ಬೆಳೆಗಾರರನ್ನು ಚೀನಾದ ಅಡಿಕೆ ಬೆಳೆಯುವ ಪ್ರದೇಶಗಳಿಗೆ ಕಳುಹಿಸಿ ಅಡಿಕೆ ಸಂಸ್ಕರಣೆ ಮತ್ತು ಪರಿಷ್ಕರಣೆ ಬಗ್ಗೆ ಅಧ್ಯಯನ ಮಾಡಲು ವ್ಯವಸ್ಥೆ ಮಾಡಬೇಕು. ರಾಜ್ಯದಲ್ಲಿ ಅನೇಕ ಸಹಕಾರಿ ಸಂಘಗಳಿದ್ದು, ಅವುಗಳ ಮೂಲಕ ನಮ್ಮ ಊರಿನ ಪ್ರಗತಿಪರ ಕೃಷಿಕರನ್ನು ಚೀನಾ ದೇಶಕ್ಕೆ ಅಧ್ಯಯನ ಪ್ರವಾಸಕ್ಕೆ ಕಳುಹಿಸಿಕೊಡಲು ಚಿಂತನೆ ನಡೆಸಬೇಕು ಎಂದು ಅವರು ಹೇಳಿದರು.

ಕ್ಯಾಂಪ್ಕೊ ಉಪಾಧ್ಯಕ್ಷ ಶಂನಾ ಖಂಡಿಗೆ, ವ್ಯವಸ್ಥಾಪಕ ನಿರ್ದೇಶಕ ಸುರೇಶ್ ಭಂಡಾರಿ, ಮಹಾಪ್ರಬಂಧಕ ಎಚ್.ಎನ್.ಕೃಷ್ಣ ಕುಮಾರ್, ಮಾರುಕಟ್ಟೆ ವಿಭಾಗದ ಮುಖ್ಯಸ್ಥ ಕೆ.ಎಂ.ಲೋಕೇಶ್ ಸುದ್ದಿಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

ಗುಟ್ಕಾಕ್ಕೆ ಪರ್ಯಾಯವಾಗಿ ಮೌತ್ ಪ್ರೆಶ್ನರ್ ಬಳಕೆ ಪ್ರಯತ್ನ

ಗುಟ್ಕಾಕ್ಕೆ ಪರ್ಯಾಯವಾಗಿ ಚೀನಾದಲ್ಲಿ ತೀರಾ ಬೇಡಿಕೆಯಿರುವ ವೌತ್ ಪ್ರೆಶ್ನರನ್ನು ಭಾರತದಲ್ಲಿ ಬಳಕೆ ಮಾಡುವ ಪ್ರಯತ್ನವನ್ನು ಮಾಡಬಹುದಾಗಿದೆ. ಎಳೆ ಅಡಿಕೆಯನ್ನು ಬೇಯಿಸಿ ತಯಾರಿಸಲಾಗುವ ಈ ವೌತ್ ಫ್ರೆಶ್ನರ್‌ನಲ್ಲಿ ಹಲವಾರು ರೀತಿಯ ಔಷಧೀಯ ಗುಣಗಳಿರುವ ಬಗ್ಗೆ ಕಾಂಪೋಡಿಯಂ ಆಪ್ ಮೆಟಿರಿಯ ಮೆಡಿಕಾ ಎಂಬ 6 ಸಂಪುಟದ ಪುಸ್ತಕದಲ್ಲಿ ಉಲ್ಲೇಖಿಸಲಾಗಿದೆ. ಮಾತ್ರವಲ್ಲದೆ ಚೀನಾದ ಈ ಪುಸ್ತಕದಲ್ಲಿ ಅಡಿಕೆಯ ಔಷಧೀಯ ಗುಣಗಳ ಕುರಿತಂತೆ 18,000 ಪುಟಗಳ ಪುಸ್ತಕದ ನಾಲ್ಕನೆ ಸಂಪುಟದಲ್ಲಿ ವಿಸ್ತೃತವಾಗಿ ತಿಳಿಸಲಾಗಿದ್ದು, ಈ ದಾಖಲೆಗಳನ್ನು ಮುಂದಿನ ದಿನಗಳಲ್ಲಿ ಸುಪ್ರೀಂ ಕೋರ್ಟ್‌ಗೆ ಸಲ್ಲಿಸಲಾಗುವುದು.


  

share
ವಾರ್ತಾಭಾರತಿ
ವಾರ್ತಾಭಾರತಿ
Next Story
X