Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಯೋಗ ಒಂದು ಧರ್ಮಕ್ಕೆ ಸೀಮಿತವಲ್ಲ: ಸಿಎಂ

ಯೋಗ ಒಂದು ಧರ್ಮಕ್ಕೆ ಸೀಮಿತವಲ್ಲ: ಸಿಎಂ

ಅಂತಾರಾಷ್ಟ್ರೀಯ ಯೋಗ ದಿನಾಚರಣೆ

ವಾರ್ತಾಭಾರತಿವಾರ್ತಾಭಾರತಿ21 Jun 2016 11:03 PM IST
share
ಯೋಗ ಒಂದು ಧರ್ಮಕ್ಕೆ ಸೀಮಿತವಲ್ಲ: ಸಿಎಂ

ಬೆಂಗಳೂರು, ಜೂ. 21: ಆರೋಗ್ಯದ ದೃಷ್ಟಿಯಿಂದ ಯೋಗವನ್ನು ಎಲ್ಲ ಧರ್ಮದವರು ಮಾಡಬಹುದು. ಇದು ಒಂದು ಧರ್ಮಕ್ಕೆ ಸೀಮಿತವಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಮಂಗಳವಾರ ನಗರದ ಕಂಠೀರವ ಕ್ರೀಡಾಂಗಣದಲ್ಲಿ ಆಯುಷ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ಉನ್ನತ ಶಿಕ್ಷಣ ಇಲಾಖೆಗಳು ಕರ್ನಾಟಕ ಒಲಿಂಪಿಕ್ಸ್‌ಅಸೋಸಿಯೇಷನ್ ಸಹಯೋಗದಲ್ಲಿ ಶ್ವಾಸ ಸಂಸ್ಥೆ ಏರ್ಪ ಡಿಸಿದ್ದ 2ನೆ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.
 ವಿಶ್ವ ಸಂಸ್ಥೆಯೇ ಜೂ.21 ರಂದು ಯೋಗ ದಿನವನ್ನಾಗಿ ಆಚರಿಸಲು ಮುಂದಾಗಿರುವುದು ಸ್ವಾಗತಾರ್ಹ, ಯೋಗ ಭಾರತೀಯ ಸಂಸ್ಕೃತಿಯಲ್ಲಿ ಋಷಿ ಮುನಿಗಳು ಸಮಾಜಕ್ಕೆ ನೀಡಿರುವಂತಹ ಒಂದು ಕೊಡುಗೆ. ಊಟ ಬಲ್ಲವನಿಗೆ ರೋಗವಿಲ್ಲ- ಮಾತು ಬಲ್ಲವನಿಗೆ ಜಗಳವಿಲ್ಲ ಎಂಬ ಗಾದೆ ಮಾತಿದೆ. ಅದನ್ನು ಇಂದು ನಾವು ಯೋಗ ಬಲ್ಲವನಿಗೆ ರೋಗವಿಲ್ಲ ಎಂದು ಬದಲಿಸಬಹುದು ಕಾರಣ ಯೋಗ ಪ್ರತಿಯೊಬ್ಬರ ಆರೋಗ್ಯ ಮತ್ತು ಮಾನಸಿಕ ಸಮತೋಲನಕ್ಕೆ ಅಷ್ಟು ಮುಖ್ಯವಾದದ್ದು. ಇನ್ನೊಬ್ಬರಿಗೆ ನೋವಾಗದಂತೆ ಮಾತನಾಡುವುದನ್ನು ರೂಢಿಸಿಕೊಳ್ಳಲು ಯೋಗ ಬಹಳ ಮುಖ್ಯ ಎಂದರು.
ನಾನೂ ಸಹ ಪ್ರತಿ ದಿನ ಯೋಗಾಭ್ಯಾಸ ಮಾಡು ತ್ತಿದ್ದು, ಅದರಿಂದ ಅನೇಕ ಶಾರೀರಿಕ ಮತ್ತು ಮಾನಸಿಕ ಬದ ಲಾವಣೆಗಳನ್ನು ಕಂಡುಕೊಂಡಿದ್ದೇನೆ. ದಿನದ 24 ಗಂಟೆಗಳಲ್ಲಿ ಕನಿಷ್ಠ ಒಂದು ಗಂಟೆಯಾದರೂ ಯೋಗಾ ಭ್ಯಾಸ ಇಟ್ಟುಕೊಳ್ಳುವುದು ಒಳ್ಳೆಯದು ಎಂದ ಅವರು, ಪ್ರಾಥಮಿಕ ಮತ್ತು ಉನ್ನತ ಶಿಕ್ಷಣ ಇಲಾಖೆ ಹಾಗೂ ಆಯುಷ್ ಇಲಾಖೆಗಳ ಮೂಲಕ ವಿದ್ಯಾರ್ಥಿಗಳಿಗೆ ಯೋಗದ ಬಗ್ಗೆ ಶಿಕ್ಷಣ ನೀಡುವ ಕೆಲಸ ಆಗಬೇಕಿದೆ. ಶಾಲೆಗಳಲ್ಲಿ ಹಂತ ಹಂತವಾಗಿ ಕಡ್ಡಾಯವಾಗಿ ಯೋಗಶಿಕ್ಷಣ ನೀಡಬೇಕು. ಶಾಲೆಗಳಿಗೆ ಯೋಗ ಗುರುಗಳನ್ನು ನೇಮಿಸಿ ವೈಜ್ಞಾನಿಕವಾಗಿ ಯೋಗ ಶಿಕ್ಷಣ ನೀಡುವಂತಾ ಗಬೇಕು. ಅದಕ್ಕೆ ಸರಕಾರ ಸಂಪೂರ್ಣ ಸಹಕಾರ ನೀಡಲು ಬದ್ಧವಾಗಿದೆ ಎಂದು ಸಿದ್ದರಾಮಯ್ಯ ಹೇಳಿದರು.
ಪ್ರಾಸ್ತಾವಿಕ ನುಡಿಗಳನ್ನಾಡಿದ ಸಚಿವ ಯು.ಟಿ. ಖಾದರ್, ಯೋಗಾಭ್ಯಾಸ ಕರ್ನಾಟಕ ಎಲ್ಲ ಭಾಗಗಳಲ್ಲಿ ಹರಡಬೇಕು, ಆ ಮೂಲಕ ಬಲಿಷ್ಠ ಭಾರತ ವನ್ನು ಕೊಡುಗೆಯಾಗಿ ಕೊಡಬೇಕು. ಔಷಧಿಗಿಂತ ಪರಿಣಾಮ ಕಾರಿಯಾಗಿ ಗುಣಪಡಿಸುವ ಶಕ್ತಿ ಯೋಗಕ್ಕಿದೆ ಮುಖ್ಯ ಮಂತ್ರಿಗಳ ಸಹಕಾರದಿಂದ ಪ್ರತಿ ಜಿಲ್ಲೆಗೂ ವಿಶೇಷ ಅನುದಾನವನ್ನು ಕೊಡುವ ಮೂಲಕ ಎಲ್ಲ ಜಿಲ್ಲೆ ಗಳಲ್ಲೂ ಸ್ವಚ್ಛತೆ ಮತ್ತು ಆರೋಗ್ಯ ಕಾಪಾಡಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದರು.


ಇಂದಿನ ಯುವಕರಿಗೆ ಸಿಗರೇಟ್ ಫ್ಯಾಷನ್ ಆಗಿದೆ. ಸ್ನೇಹಿತರೊಂದಿಗೆ ಸಿಗರೇಟ್ ಸೇದಿದವರು ಐಸಿಯುನಲ್ಲಿ ರುವಂತಾದರೆ ಯಾರೂ ಸಹಾಯಕ್ಕೆ ಬರುವುದಿಲ್ಲ. ಶಾಲಾ ಕಾಲೇಜುಗಳಲ್ಲಿ ಯೋಗ ಶಿಕ್ಷಕರನ್ನು ನೇಮಿಸಿ ಶಿಸ್ತಿನ ಮೂಲಕ ಯೋಗದ ಬಗ್ಗೆ ತಿಳಿವಳಿಕೆ ನೀಡುವಂತಾ ಗಬೇಕು ಎಂದು ಖಾದರ್ ನುಡಿದರು. ಅಂತಾರಾಷ್ಟ್ರೀಯ ಯೋಗ ದಿನದ ಅಂಗವಾಗಿ ನಗರದ ಕಂಠೀರವ ಕ್ರೀಡಾಂಗಣ ಸೇರಿದಂತೆ ನಗರದ ಹಲವೆಡೆ ಮುಂಜಾನೆಯಿಂದಲೇ ಚಳಿಯನ್ನೂ ಲೆಕ್ಕಿಸದೆ ಸಾವಿರಾರು ಮಂದಿ ಹಲವಾರು ಬಗೆಯ ಯೋಗಾಸನ ಗಳನ್ನು ಪ್ರದರ್ಶಿಸಿದರು.
ಕಾರ್ಯಕ್ರಮದಲ್ಲಿ ಕೇಂದ್ರ ಸಚಿವರಾದ ಅನಂತ ಕುಮಾರ್, ಡಿ.ವಿ. ಸದಾನಂದಗೌಡ, ರಾಜ್ಯದ ಸಚಿವ ರಾದ ಡಿ.ಕೆ.ಶಿವಕುಮಾರ್, ಕೆ.ಜೆ.ಜಾರ್ಜ್, ಟಿ.ಬಿ. ಜಯ ಚಂದ್ರ, ಶ್ವಾಸ ಗುರು ವಚನಾನಂದ ಸ್ವಾಮೀಜಿ, ಬಾಲಿವುಡ್ ನಟಿ ಬಿಪಾಶಾ ಬಸು ಪ್ರಮುಖರು ಪಾಲ್ಗೊಂಡಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X